ಜಾತಕದಲ್ಲಿ ದೋಷ ಅಂತ ಪೂಜೆಗಾಗಿ 5 ಲಕ್ಷ ಪಂಗನಾಮ – ಲೇಡಿ ಕಾನ್‌ಸ್ಟೇಬಲ್‌ಗೆ ವಂಚಿಸಿದ್ದ ಡೋಂಗಿ ಜ್ಯೋತಿಷಿ ಅರೆಸ್ಟ್

Public TV
1 Min Read
Adugodi Fake Astrologer Arrest

ಬೆಂಗಳೂರು: ನಿನ್ನ ಜಾತಕದಲ್ಲಿ ತುಂಬಾ ದೋಷವಿದೆ, ಪೂಜೆ ಮಾಡಿ ನಿನ್ನ ಆರೋಗ್ಯ ಸರಿ ಮಾಡುತ್ತೇನೆ ಎಂದು ಹೇಳಿ ಮಹಿಳಾ ಪೊಲೀಸ್‌ಗೆ 5 ಲಕ್ಷ ವಂಚಿಸಿದ್ದ ಡೋಂಗಿ ಜ್ಯೋತಿಷಿಯನ್ನು ಆಡುಗೋಡಿ (Adugodi) ಪೊಲೀಸರು ಬಂಧಿಸಿದ್ದಾರೆ.ಇದನ್ನೂ ಓದಿ: ಇತಿಹಾಸದಲ್ಲೇ ಮೊದಲು – ತಾಲಿಬಾನ್‌ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಮಾತುಕತೆ

ಆಡುಗೋಡಿಯ ಪೊಲೀಸ್ ಕ್ವಾಟ್ರಸ್‌ನಲ್ಲಿದ್ದ ಮಹಿಳಾ ಕಾನ್‌ಸ್ಟೇಬಲ್‌ ಅನಾರೋಗ್ಯಕ್ಕೆ ಒಳಗಾದಾಗ ಸ್ನೇಹಿತರ ಮೂಲಕ ಕಲಬುರಗಿಯ (Kalaburagi) ಜ್ಯೋತಿಷಿ ಹೇಮಂತ್ ಭಟ್ ಪರಿಚಯವಾಗಿತ್ತು. ಇದಕ್ಕೂ ಮುನ್ನ ಇಬ್ಬರು ಸ್ನೇಹಿತೆಯರು ಜ್ಯೋತಿಷಿ ಮಾತು ನಂಬಿ ಹೋದಾಗ, ಅವರಿಗೂ ಪೂಜೆ ಮಾಡಿದ್ದ. ನಿನ್ನ ಜಾತಕದಲ್ಲಿ ತುಂಬಾ ದೋಷವಿದೆ, ಪೂಜೆ ಮಾಡಿಸಲೇಬೇಕು. ಇದರಿಂದ ನಿನ್ನ ಆರೋಗ್ಯ ಸರಿ ಮಾಡುತ್ತೇನೆ. ಭಯಬೇಡ ಈ ವಿಚಾರದಲ್ಲಿ ನಾನು ಡಾಕ್ಟರ್. ಜೊತೆಗೆ ನಿನಗೆ ಮದುವೆಯೂ ಆಗುವಂತೆ ಮಾಡುತ್ತೇನೆ ಎಂದು ಹೇಳಿದ್ದ.

ಕೋರಮಂಗಲದಲ್ಲಿ ಲಾಡ್ಜ್ಗೆ ಕರೆಸಿ ಪೂಜೆ ಹಾಕಿ ಹಂತ ಹಂತವಾಗಿ 5 ಲಕ್ಷ ರೂ. ಪಡೆದು ವಂಚನೆ ಮಾಡಿದ್ದ. ಈ ಕುರಿತು ನೊಂದ ಮಹಿಳಾ ಕಾನ್ಸ್ಟೇಬಲ್ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಜ್ಯೋತಿಷ್ಯ ನೆಪದಲ್ಲಿ ಆತ್ಮಗಳ ಕಥೆ ಕಟ್ಟಿ ವಶೀಕರಣ ಮಾಡಿರುವುದಾಗಿ ಆರೋಪಿಸಿದ್ದರು.

ಸದ್ಯ ಆಡುಗೋಡಿ ಪೊಲೀಸರು ಡೋಂಗಿ ಜ್ಯೋತಿಷಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಬೆಡ್‌ರೂಮಲ್ಲಿ ಬಿಕಿನಿ ತೊಟ್ಟು ಸೆಲ್ಫಿ ಕ್ಲಿಕ್ಕಿಸಿದ ನಟಿ – ದಿಶಾ ಪಟಾನಿ ಮೈಮಾಟಕ್ಕೆ ಪಡ್ಡೆ ಹುಡುಗರು ಬೋಲ್ಡ್

Share This Article