Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು

Districts

ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು

Public TV
Last updated: August 25, 2022 8:50 am
Public TV
Share
3 Min Read
love letter 2
SHARE

ಶಿವಮೊಗ್ಗ: ನಗರದಲ್ಲಿ ನಡೆದ ಕೋಮು ಸಂಘರ್ಷವನ್ನು ತನ್ನ ವೈಯಕ್ತಿಕ ತೆವಲಿಗೆ ಬಳಸಿಕೊಳ್ಳಲು ಹೋಗಿ ಇಲ್ಲೊಬ್ಬ ಸಿಕ್ಕಿಹಾಕಿಕೊಂಡಿದ್ದಾನೆ. ಶಿವಮೊಗ್ಗದಲ್ಲಿ ಮತ್ತೆ ಮೂವರನ್ನು ಕೊಲೆ ಮಾಡಬೇಕು. ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಮಾಡಲು ಬಿಡಬಾರದು. ಮತ್ತೆ ನೆತ್ತರು ಹರಿಯಬೇಕು ಎಂದು ಹೇಳಿ ಮತ್ತೆ ಕೋಮು ದಳ್ಳುರಿ ನಡೆಯುವ ಕಪೋಲಕಲ್ಪಿತ ಕಥೆ ಕಟ್ಟಿ ಪತ್ರ ಬರೆದಿದ್ದ ಕಿಡಿಗೇಡಿಯ ಪತ್ರದ ಹಿಂದಿನ ಕಹಾನಿ ಇದೀಗ ಬಯಲಾಗಿದೆ.

HARSHA

ಹೇಳಿ ಕೇಳಿ ಶಿವಮೊಗ್ಗ ಸೂಕ್ಷ್ಮ ಜಿಲ್ಲೆ. ಕಳೆದ ಹಲವಾರು ವರ್ಷಗಳಿಂದಲೂ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ದಳ್ಳುರಿ, ಆಗಿದ್ದಾಗೆ ಹೊತ್ತಿಕೊಳ್ಳುತ್ತಲೇ ಇರುತ್ತದೆ. ಕೋಮು ಸಂಘರ್ಷ ಉಂಟಾದಾಗಲೆಲ್ಲಾ ಶಿವಮೊಗ್ಗದಲ್ಲಿ ಅಶಾಂತಿ ಸೃಷ್ಟಿಯಾಗಿ, ಜನಜೀವನ ಅಸ್ತವ್ಯಸ್ತಗೊಳ್ಳುವುದು ಸಹಜ. ಅಂದಹಾಗೆ, ಇತ್ತೀಚಿಗಷ್ಟೇ, ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಮತ್ತು ಆ. 15 ರಂದು ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಕೆ ವೇಳೆಯೂ ಕೋಮು ಸಂಘರ್ಷ ಉಂಟಾಗಿ, ಇದರ ಕರಿ ನೆರಳು ಇದೀಗ ಗಣಪತಿ ಹಬ್ಬದ ಮೇಲೂ ಬಿದ್ದಿದೆ. ಇದೇ ಅವಕಾಶವನ್ನು ಕೆಲವು ಕಿಡಿಗೇಡಿಗಳು ಬಳಸಿಕೊಳ್ಳುತ್ತಿದ್ದು, ಶಿವಮೊಗ್ಗದಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಅನಾಮಧೇಯ ಪತ್ರವೊಂದನ್ನು ಬರೆದು, ಶಿವಮೊಗ್ಗದ ಗಾಂಧಿ ಬಜಾರ್‌ನ ಗಂಗಾ ಪರಮೇಶ್ವರಿ ದೇವಾಲಯದೊಳಗಿನ ನವಗ್ರಹಗಳ ಪಕ್ಕದಲ್ಲಿ ಎಸೆದು ಹೋಗಿದ್ದಾರೆ. ಈ ಪತ್ರ ಸಿಕ್ಕವರು ಕೂಡಲೇ ಪೊಲೀಸರಿಗೆ ತಿಳಿಸಿ ಎಂದು ಕೂಡ ಪತ್ರದ ಕವರ್ ಮೇಲೆ ಬರೆದಿದ್ದರಂತೆ. ಈ ಪತ್ರ ಸಿಕ್ಕಿದ ಕೂಡಲೇ, ದೇವಾಲಯದ ಪಕ್ಕದ ನಿವಾಸಿಯೊಬ್ಬರು ಕೂಡಲೇ ಅನಾಮಧೇಯ ಬೆದರಿಕೆ ಪತ್ರವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ. ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಮಾಡಲು ಬಿಡಬಾರದು. ಮಂಗಳೂರಿನಿಂದ ಜನರನ್ನು ಕರೆಸಿ ಗಲಾಟೆ ಮಾಡಿಸಬೇಕು. ಮೂವರ ಕೊಲೆಯಾಗಬೇಕು. ಮೊನ್ನೆ ಪ್ರೇಮ್ ಸಿಂಗ್ ಮೇಲೆ ನಡೆದ ಹಲ್ಲೆ ಅರ್ಧಂಬರ್ಧ ಆಗಿದೆ. ಎಂದು ಬೆದರಿಕೆಯುಳ್ಳ ಪತ್ರವನ್ನು ಬರೆದಿದ್ದರು. ಇದನ್ನು ಪ್ರಶಾಂತ್ ಎಂಬುವವರು ಕೋಟೆ ಠಾಣೆ ಪೊಲೀಸರಿಗೆ ನೀಡಿ, ಕೇಸು ಕೂಡ ದಾಖಲಾಗಿತ್ತು. ಇದನ್ನೂ ಓದಿ: ಗೊಡ್ಡು ಬೆದರಿಕೆಗಳಿಗೆ, ಹೇಡಿಗಳಿಗೆ ಹೆದರಲ್ಲ: ಬೆದರಿಕೆ ಪತ್ರಕ್ಕೆ ಈಶ್ವರಪ್ಪ ರಿಯಾಕ್ಟ್

SMG FLEX

ಬಳಿಕ ಈ ಅನಾಮಧೇಯ ಪತ್ರದ ಜಾಡು ಹಿಡಿದು ಹೊರಟ ಪೊಲೀಸರಿಗೆ ಆಘಾತಕಾರಿ ಸುದ್ದಿಯೊಂದು ಹೊರಬೀಳಬಹುದೆಂಬ ಗುಮಾನಿ ಇತ್ತು. ಆದರೆ, ಹಾಗಾಗಲಿಲ್ಲ. ಪತ್ರದ ಜಾಡು ಹಿಡಿದು ಪತ್ರದಲ್ಲಿ ಉಲ್ಲೇಖವಾಗಿರುವ ವ್ಯಕ್ತಿಯಾಗಿದ್ದ ಮೊಹಮ್ಮದ್ ಫೈಜಲ್‍ನ ವಿಚಾರಣೆ ನಡೆಸಿದ ಬಳಿಕ, ನಾನೆಲ್ಲೂ ಶಿವಮೊಗ್ಗದಲ್ಲಿ ಗಲಾಟೆ ಮಾಡಿಸಬೇಕೆಂದು ಮಾತನಾಡಿಯೇ ಇಲ್ಲ. ಇದು ಬೇರೆ ಯಾರದೋ ಕೈವಾಡ ಇರಬಹುದೆಂದು ಪೊಲೀಸರಿಗೆ ತಿಳಿಸಿದ್ದಾನೆ. ಅಷ್ಟೇ ಅಲ್ಲ. ಇತ್ತೀಚಿಗಷ್ಟೇ ಅಯೂಬ್ ಖಾನ್ ಎಂಬುವವನು ನನ್ನ ವಿರುದ್ಧ ಜಿದ್ದು ಸಾಧಿಸುತ್ತೆನೆಂದು ಹೇಳಿದ್ದ ಎಂದು ಕೂಡ ಪೊಲೀಸರ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಅದಷ್ಟೇ ಸಾಕಿತ್ತು, ಅಯೂಬ್ ಖಾನ್‍ನ್ನು ಹುಡುಕಿ ತಂದ ಪೊಲೀಸರಿಗೆ ಆಶ್ಚರ್ಯದ ಜೊತೆಗೆ ಟ್ವಿಸ್ಟ್ ಕೂಡ ಕಾದಿತ್ತು. ಇಡೀ ಸ್ಟೋರಿಯೇ ಬದಲಾಗಿ ಹೋಗಿತ್ತು. ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದ ಅಯೂಬ್ ಖಾನ್, ಇಡೀ ಸ್ಟೋರಿಗೆ ಟ್ವಿಸ್ಟ್ ನೀಡಿ, ನನಗೆ ಫೈಜಲ್ ಪತ್ನಿ ಮೇಲೆ ವ್ಯಾಮೋಹ ಇತ್ತು. ಹೀಗಾಗಿ, ಫೈಜಲ್ ಜೈಲಿಗೆ ಹೋದರೆ, ಫೈಜಲ್ ಪತ್ನಿ ಜೊತೆ ನಾನು ಇರಬಹುದೆಂದು ನಿರ್ಧರಿಸಿ, ಈ ರೀತಿ ಫೈಜಲ್ ವಿರುದ್ಧವಾಗಿ ಅನಾಮಧೇಯ ಪತ್ರ ಬರೆದಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ 9 ಮಂದಿ ಬಲಿ

ಶಿವಮೊಗ್ಗದಲ್ಲಿ ಕಳೆದ ವಾರವಷ್ಟೇ, ಕೋಮು ಸಂಘರ್ಷದಿಂದ, ಜನರು ಪರಿತಪಿಸುವಂತಾಗಿದ್ದರೆ, ಇತ್ತ ತಮ್ಮ ಖಾಸಗಿ ತೆವಲಿಗಾಗಿ, ಮತ್ತೆ ಶಿವಮೊಗ್ಗದಲ್ಲಿ ಕೋಮು ಸಂಘರ್ಷವನ್ನುಂಟು ಮಾಡುವ ಬೆದರಿಕೆ ಪತ್ರ ಬರೆದ ಅಯೂಬ್ ಖಾನ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಅನಾಮಧೇಯ ಪತ್ರದಿಂದಾಗಿ ಮತ್ತೆ ಆತಂಕಕ್ಕೆ ಕಾರಣವಾಗಿದ್ದ ಶಿವಮೊಗ್ಗ ಜನರು ಇದು ಫೇಕ್ ಪತ್ರ ಎಂದುಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Harsha caselettershivamoggaಅಯೂಬ್ ಖಾನ್ಪತ್ರಶಿವಮೊಗ್ಗಹರ್ಷ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Bengaluru Metro Double decker
Bengaluru City

ಹೆಬ್ಬಾಳ-ಸರ್ಜಾಪುರ ಮೆಟ್ರೋ – ಕೇಂದ್ರದ ಅನುದಾನಕ್ಕೆ ಡಬಲ್ ಡೆಕ್ಕರ್ ನಿಯಮ ಅಡ್ಡಿ

Public TV
By Public TV
5 minutes ago
basavaraj bommai ashwini vaishnaw
Gadag

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Public TV
By Public TV
34 minutes ago
rafale jet ne2
Latest

ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್‌

Public TV
By Public TV
38 minutes ago
Parameshwar
Bengaluru City

ಗನ್ ಹಿಡಿದು `ಕೈ’ ಮುಖಂಡ ಡ್ಯಾನ್ಸ್ – ಕ್ರಮ ನಿಶ್ಚಿತ ಎಂದ ಪರಮೇಶ್ವರ್

Public TV
By Public TV
50 minutes ago
Vasanth Naik Murder Case Kamalakar Bhat gets a honeytrap from Suchitra
Court

ಕೊಲೆ ಕೇಸ್; ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರವರೆಗೆ ನ್ಯಾಯಾಂಗ ಬಂಧನ

Public TV
By Public TV
54 minutes ago
Hardeep Singh Puri e1632403467811
Latest

Jeffrey Epstein Files | ನಾನು 3-4 ಬಾರಿ ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?