Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು

Districts

ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು

Public TV
Last updated: August 25, 2022 8:50 am
Public TV
Share
3 Min Read
love letter 2
SHARE

ಶಿವಮೊಗ್ಗ: ನಗರದಲ್ಲಿ ನಡೆದ ಕೋಮು ಸಂಘರ್ಷವನ್ನು ತನ್ನ ವೈಯಕ್ತಿಕ ತೆವಲಿಗೆ ಬಳಸಿಕೊಳ್ಳಲು ಹೋಗಿ ಇಲ್ಲೊಬ್ಬ ಸಿಕ್ಕಿಹಾಕಿಕೊಂಡಿದ್ದಾನೆ. ಶಿವಮೊಗ್ಗದಲ್ಲಿ ಮತ್ತೆ ಮೂವರನ್ನು ಕೊಲೆ ಮಾಡಬೇಕು. ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಮಾಡಲು ಬಿಡಬಾರದು. ಮತ್ತೆ ನೆತ್ತರು ಹರಿಯಬೇಕು ಎಂದು ಹೇಳಿ ಮತ್ತೆ ಕೋಮು ದಳ್ಳುರಿ ನಡೆಯುವ ಕಪೋಲಕಲ್ಪಿತ ಕಥೆ ಕಟ್ಟಿ ಪತ್ರ ಬರೆದಿದ್ದ ಕಿಡಿಗೇಡಿಯ ಪತ್ರದ ಹಿಂದಿನ ಕಹಾನಿ ಇದೀಗ ಬಯಲಾಗಿದೆ.

HARSHA

ಹೇಳಿ ಕೇಳಿ ಶಿವಮೊಗ್ಗ ಸೂಕ್ಷ್ಮ ಜಿಲ್ಲೆ. ಕಳೆದ ಹಲವಾರು ವರ್ಷಗಳಿಂದಲೂ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ದಳ್ಳುರಿ, ಆಗಿದ್ದಾಗೆ ಹೊತ್ತಿಕೊಳ್ಳುತ್ತಲೇ ಇರುತ್ತದೆ. ಕೋಮು ಸಂಘರ್ಷ ಉಂಟಾದಾಗಲೆಲ್ಲಾ ಶಿವಮೊಗ್ಗದಲ್ಲಿ ಅಶಾಂತಿ ಸೃಷ್ಟಿಯಾಗಿ, ಜನಜೀವನ ಅಸ್ತವ್ಯಸ್ತಗೊಳ್ಳುವುದು ಸಹಜ. ಅಂದಹಾಗೆ, ಇತ್ತೀಚಿಗಷ್ಟೇ, ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಮತ್ತು ಆ. 15 ರಂದು ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಕೆ ವೇಳೆಯೂ ಕೋಮು ಸಂಘರ್ಷ ಉಂಟಾಗಿ, ಇದರ ಕರಿ ನೆರಳು ಇದೀಗ ಗಣಪತಿ ಹಬ್ಬದ ಮೇಲೂ ಬಿದ್ದಿದೆ. ಇದೇ ಅವಕಾಶವನ್ನು ಕೆಲವು ಕಿಡಿಗೇಡಿಗಳು ಬಳಸಿಕೊಳ್ಳುತ್ತಿದ್ದು, ಶಿವಮೊಗ್ಗದಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಅನಾಮಧೇಯ ಪತ್ರವೊಂದನ್ನು ಬರೆದು, ಶಿವಮೊಗ್ಗದ ಗಾಂಧಿ ಬಜಾರ್‌ನ ಗಂಗಾ ಪರಮೇಶ್ವರಿ ದೇವಾಲಯದೊಳಗಿನ ನವಗ್ರಹಗಳ ಪಕ್ಕದಲ್ಲಿ ಎಸೆದು ಹೋಗಿದ್ದಾರೆ. ಈ ಪತ್ರ ಸಿಕ್ಕವರು ಕೂಡಲೇ ಪೊಲೀಸರಿಗೆ ತಿಳಿಸಿ ಎಂದು ಕೂಡ ಪತ್ರದ ಕವರ್ ಮೇಲೆ ಬರೆದಿದ್ದರಂತೆ. ಈ ಪತ್ರ ಸಿಕ್ಕಿದ ಕೂಡಲೇ, ದೇವಾಲಯದ ಪಕ್ಕದ ನಿವಾಸಿಯೊಬ್ಬರು ಕೂಡಲೇ ಅನಾಮಧೇಯ ಬೆದರಿಕೆ ಪತ್ರವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ. ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಮಾಡಲು ಬಿಡಬಾರದು. ಮಂಗಳೂರಿನಿಂದ ಜನರನ್ನು ಕರೆಸಿ ಗಲಾಟೆ ಮಾಡಿಸಬೇಕು. ಮೂವರ ಕೊಲೆಯಾಗಬೇಕು. ಮೊನ್ನೆ ಪ್ರೇಮ್ ಸಿಂಗ್ ಮೇಲೆ ನಡೆದ ಹಲ್ಲೆ ಅರ್ಧಂಬರ್ಧ ಆಗಿದೆ. ಎಂದು ಬೆದರಿಕೆಯುಳ್ಳ ಪತ್ರವನ್ನು ಬರೆದಿದ್ದರು. ಇದನ್ನು ಪ್ರಶಾಂತ್ ಎಂಬುವವರು ಕೋಟೆ ಠಾಣೆ ಪೊಲೀಸರಿಗೆ ನೀಡಿ, ಕೇಸು ಕೂಡ ದಾಖಲಾಗಿತ್ತು. ಇದನ್ನೂ ಓದಿ: ಗೊಡ್ಡು ಬೆದರಿಕೆಗಳಿಗೆ, ಹೇಡಿಗಳಿಗೆ ಹೆದರಲ್ಲ: ಬೆದರಿಕೆ ಪತ್ರಕ್ಕೆ ಈಶ್ವರಪ್ಪ ರಿಯಾಕ್ಟ್

SMG FLEX

ಬಳಿಕ ಈ ಅನಾಮಧೇಯ ಪತ್ರದ ಜಾಡು ಹಿಡಿದು ಹೊರಟ ಪೊಲೀಸರಿಗೆ ಆಘಾತಕಾರಿ ಸುದ್ದಿಯೊಂದು ಹೊರಬೀಳಬಹುದೆಂಬ ಗುಮಾನಿ ಇತ್ತು. ಆದರೆ, ಹಾಗಾಗಲಿಲ್ಲ. ಪತ್ರದ ಜಾಡು ಹಿಡಿದು ಪತ್ರದಲ್ಲಿ ಉಲ್ಲೇಖವಾಗಿರುವ ವ್ಯಕ್ತಿಯಾಗಿದ್ದ ಮೊಹಮ್ಮದ್ ಫೈಜಲ್‍ನ ವಿಚಾರಣೆ ನಡೆಸಿದ ಬಳಿಕ, ನಾನೆಲ್ಲೂ ಶಿವಮೊಗ್ಗದಲ್ಲಿ ಗಲಾಟೆ ಮಾಡಿಸಬೇಕೆಂದು ಮಾತನಾಡಿಯೇ ಇಲ್ಲ. ಇದು ಬೇರೆ ಯಾರದೋ ಕೈವಾಡ ಇರಬಹುದೆಂದು ಪೊಲೀಸರಿಗೆ ತಿಳಿಸಿದ್ದಾನೆ. ಅಷ್ಟೇ ಅಲ್ಲ. ಇತ್ತೀಚಿಗಷ್ಟೇ ಅಯೂಬ್ ಖಾನ್ ಎಂಬುವವನು ನನ್ನ ವಿರುದ್ಧ ಜಿದ್ದು ಸಾಧಿಸುತ್ತೆನೆಂದು ಹೇಳಿದ್ದ ಎಂದು ಕೂಡ ಪೊಲೀಸರ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಅದಷ್ಟೇ ಸಾಕಿತ್ತು, ಅಯೂಬ್ ಖಾನ್‍ನ್ನು ಹುಡುಕಿ ತಂದ ಪೊಲೀಸರಿಗೆ ಆಶ್ಚರ್ಯದ ಜೊತೆಗೆ ಟ್ವಿಸ್ಟ್ ಕೂಡ ಕಾದಿತ್ತು. ಇಡೀ ಸ್ಟೋರಿಯೇ ಬದಲಾಗಿ ಹೋಗಿತ್ತು. ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದ ಅಯೂಬ್ ಖಾನ್, ಇಡೀ ಸ್ಟೋರಿಗೆ ಟ್ವಿಸ್ಟ್ ನೀಡಿ, ನನಗೆ ಫೈಜಲ್ ಪತ್ನಿ ಮೇಲೆ ವ್ಯಾಮೋಹ ಇತ್ತು. ಹೀಗಾಗಿ, ಫೈಜಲ್ ಜೈಲಿಗೆ ಹೋದರೆ, ಫೈಜಲ್ ಪತ್ನಿ ಜೊತೆ ನಾನು ಇರಬಹುದೆಂದು ನಿರ್ಧರಿಸಿ, ಈ ರೀತಿ ಫೈಜಲ್ ವಿರುದ್ಧವಾಗಿ ಅನಾಮಧೇಯ ಪತ್ರ ಬರೆದಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ 9 ಮಂದಿ ಬಲಿ

ಶಿವಮೊಗ್ಗದಲ್ಲಿ ಕಳೆದ ವಾರವಷ್ಟೇ, ಕೋಮು ಸಂಘರ್ಷದಿಂದ, ಜನರು ಪರಿತಪಿಸುವಂತಾಗಿದ್ದರೆ, ಇತ್ತ ತಮ್ಮ ಖಾಸಗಿ ತೆವಲಿಗಾಗಿ, ಮತ್ತೆ ಶಿವಮೊಗ್ಗದಲ್ಲಿ ಕೋಮು ಸಂಘರ್ಷವನ್ನುಂಟು ಮಾಡುವ ಬೆದರಿಕೆ ಪತ್ರ ಬರೆದ ಅಯೂಬ್ ಖಾನ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಅನಾಮಧೇಯ ಪತ್ರದಿಂದಾಗಿ ಮತ್ತೆ ಆತಂಕಕ್ಕೆ ಕಾರಣವಾಗಿದ್ದ ಶಿವಮೊಗ್ಗ ಜನರು ಇದು ಫೇಕ್ ಪತ್ರ ಎಂದುಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Harsha caselettershivamoggaಅಯೂಬ್ ಖಾನ್ಪತ್ರಶಿವಮೊಗ್ಗಹರ್ಷ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
2 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
3 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
4 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
4 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
5 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?