Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು

Districts

ಪರಿಚಯಸ್ಥನ ಪತ್ನಿಯನ್ನು ವರಿಸಲು ಸ್ಕೆಚ್ – ಶಿವಮೊಗ್ಗ ಅನಾಮಧೇಯ ಗಲಭೆ ಪತ್ರದ ರಹಸ್ಯ ಬಯಲು

Public TV
Last updated: August 25, 2022 8:50 am
Public TV
Share
3 Min Read
love letter 2
SHARE

ಶಿವಮೊಗ್ಗ: ನಗರದಲ್ಲಿ ನಡೆದ ಕೋಮು ಸಂಘರ್ಷವನ್ನು ತನ್ನ ವೈಯಕ್ತಿಕ ತೆವಲಿಗೆ ಬಳಸಿಕೊಳ್ಳಲು ಹೋಗಿ ಇಲ್ಲೊಬ್ಬ ಸಿಕ್ಕಿಹಾಕಿಕೊಂಡಿದ್ದಾನೆ. ಶಿವಮೊಗ್ಗದಲ್ಲಿ ಮತ್ತೆ ಮೂವರನ್ನು ಕೊಲೆ ಮಾಡಬೇಕು. ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಮಾಡಲು ಬಿಡಬಾರದು. ಮತ್ತೆ ನೆತ್ತರು ಹರಿಯಬೇಕು ಎಂದು ಹೇಳಿ ಮತ್ತೆ ಕೋಮು ದಳ್ಳುರಿ ನಡೆಯುವ ಕಪೋಲಕಲ್ಪಿತ ಕಥೆ ಕಟ್ಟಿ ಪತ್ರ ಬರೆದಿದ್ದ ಕಿಡಿಗೇಡಿಯ ಪತ್ರದ ಹಿಂದಿನ ಕಹಾನಿ ಇದೀಗ ಬಯಲಾಗಿದೆ.

HARSHA

ಹೇಳಿ ಕೇಳಿ ಶಿವಮೊಗ್ಗ ಸೂಕ್ಷ್ಮ ಜಿಲ್ಲೆ. ಕಳೆದ ಹಲವಾರು ವರ್ಷಗಳಿಂದಲೂ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ದಳ್ಳುರಿ, ಆಗಿದ್ದಾಗೆ ಹೊತ್ತಿಕೊಳ್ಳುತ್ತಲೇ ಇರುತ್ತದೆ. ಕೋಮು ಸಂಘರ್ಷ ಉಂಟಾದಾಗಲೆಲ್ಲಾ ಶಿವಮೊಗ್ಗದಲ್ಲಿ ಅಶಾಂತಿ ಸೃಷ್ಟಿಯಾಗಿ, ಜನಜೀವನ ಅಸ್ತವ್ಯಸ್ತಗೊಳ್ಳುವುದು ಸಹಜ. ಅಂದಹಾಗೆ, ಇತ್ತೀಚಿಗಷ್ಟೇ, ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಮತ್ತು ಆ. 15 ರಂದು ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಕೆ ವೇಳೆಯೂ ಕೋಮು ಸಂಘರ್ಷ ಉಂಟಾಗಿ, ಇದರ ಕರಿ ನೆರಳು ಇದೀಗ ಗಣಪತಿ ಹಬ್ಬದ ಮೇಲೂ ಬಿದ್ದಿದೆ. ಇದೇ ಅವಕಾಶವನ್ನು ಕೆಲವು ಕಿಡಿಗೇಡಿಗಳು ಬಳಸಿಕೊಳ್ಳುತ್ತಿದ್ದು, ಶಿವಮೊಗ್ಗದಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಅನಾಮಧೇಯ ಪತ್ರವೊಂದನ್ನು ಬರೆದು, ಶಿವಮೊಗ್ಗದ ಗಾಂಧಿ ಬಜಾರ್‌ನ ಗಂಗಾ ಪರಮೇಶ್ವರಿ ದೇವಾಲಯದೊಳಗಿನ ನವಗ್ರಹಗಳ ಪಕ್ಕದಲ್ಲಿ ಎಸೆದು ಹೋಗಿದ್ದಾರೆ. ಈ ಪತ್ರ ಸಿಕ್ಕವರು ಕೂಡಲೇ ಪೊಲೀಸರಿಗೆ ತಿಳಿಸಿ ಎಂದು ಕೂಡ ಪತ್ರದ ಕವರ್ ಮೇಲೆ ಬರೆದಿದ್ದರಂತೆ. ಈ ಪತ್ರ ಸಿಕ್ಕಿದ ಕೂಡಲೇ, ದೇವಾಲಯದ ಪಕ್ಕದ ನಿವಾಸಿಯೊಬ್ಬರು ಕೂಡಲೇ ಅನಾಮಧೇಯ ಬೆದರಿಕೆ ಪತ್ರವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ. ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಮಾಡಲು ಬಿಡಬಾರದು. ಮಂಗಳೂರಿನಿಂದ ಜನರನ್ನು ಕರೆಸಿ ಗಲಾಟೆ ಮಾಡಿಸಬೇಕು. ಮೂವರ ಕೊಲೆಯಾಗಬೇಕು. ಮೊನ್ನೆ ಪ್ರೇಮ್ ಸಿಂಗ್ ಮೇಲೆ ನಡೆದ ಹಲ್ಲೆ ಅರ್ಧಂಬರ್ಧ ಆಗಿದೆ. ಎಂದು ಬೆದರಿಕೆಯುಳ್ಳ ಪತ್ರವನ್ನು ಬರೆದಿದ್ದರು. ಇದನ್ನು ಪ್ರಶಾಂತ್ ಎಂಬುವವರು ಕೋಟೆ ಠಾಣೆ ಪೊಲೀಸರಿಗೆ ನೀಡಿ, ಕೇಸು ಕೂಡ ದಾಖಲಾಗಿತ್ತು. ಇದನ್ನೂ ಓದಿ: ಗೊಡ್ಡು ಬೆದರಿಕೆಗಳಿಗೆ, ಹೇಡಿಗಳಿಗೆ ಹೆದರಲ್ಲ: ಬೆದರಿಕೆ ಪತ್ರಕ್ಕೆ ಈಶ್ವರಪ್ಪ ರಿಯಾಕ್ಟ್

SMG FLEX

ಬಳಿಕ ಈ ಅನಾಮಧೇಯ ಪತ್ರದ ಜಾಡು ಹಿಡಿದು ಹೊರಟ ಪೊಲೀಸರಿಗೆ ಆಘಾತಕಾರಿ ಸುದ್ದಿಯೊಂದು ಹೊರಬೀಳಬಹುದೆಂಬ ಗುಮಾನಿ ಇತ್ತು. ಆದರೆ, ಹಾಗಾಗಲಿಲ್ಲ. ಪತ್ರದ ಜಾಡು ಹಿಡಿದು ಪತ್ರದಲ್ಲಿ ಉಲ್ಲೇಖವಾಗಿರುವ ವ್ಯಕ್ತಿಯಾಗಿದ್ದ ಮೊಹಮ್ಮದ್ ಫೈಜಲ್‍ನ ವಿಚಾರಣೆ ನಡೆಸಿದ ಬಳಿಕ, ನಾನೆಲ್ಲೂ ಶಿವಮೊಗ್ಗದಲ್ಲಿ ಗಲಾಟೆ ಮಾಡಿಸಬೇಕೆಂದು ಮಾತನಾಡಿಯೇ ಇಲ್ಲ. ಇದು ಬೇರೆ ಯಾರದೋ ಕೈವಾಡ ಇರಬಹುದೆಂದು ಪೊಲೀಸರಿಗೆ ತಿಳಿಸಿದ್ದಾನೆ. ಅಷ್ಟೇ ಅಲ್ಲ. ಇತ್ತೀಚಿಗಷ್ಟೇ ಅಯೂಬ್ ಖಾನ್ ಎಂಬುವವನು ನನ್ನ ವಿರುದ್ಧ ಜಿದ್ದು ಸಾಧಿಸುತ್ತೆನೆಂದು ಹೇಳಿದ್ದ ಎಂದು ಕೂಡ ಪೊಲೀಸರ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಅದಷ್ಟೇ ಸಾಕಿತ್ತು, ಅಯೂಬ್ ಖಾನ್‍ನ್ನು ಹುಡುಕಿ ತಂದ ಪೊಲೀಸರಿಗೆ ಆಶ್ಚರ್ಯದ ಜೊತೆಗೆ ಟ್ವಿಸ್ಟ್ ಕೂಡ ಕಾದಿತ್ತು. ಇಡೀ ಸ್ಟೋರಿಯೇ ಬದಲಾಗಿ ಹೋಗಿತ್ತು. ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದ ಅಯೂಬ್ ಖಾನ್, ಇಡೀ ಸ್ಟೋರಿಗೆ ಟ್ವಿಸ್ಟ್ ನೀಡಿ, ನನಗೆ ಫೈಜಲ್ ಪತ್ನಿ ಮೇಲೆ ವ್ಯಾಮೋಹ ಇತ್ತು. ಹೀಗಾಗಿ, ಫೈಜಲ್ ಜೈಲಿಗೆ ಹೋದರೆ, ಫೈಜಲ್ ಪತ್ನಿ ಜೊತೆ ನಾನು ಇರಬಹುದೆಂದು ನಿರ್ಧರಿಸಿ, ಈ ರೀತಿ ಫೈಜಲ್ ವಿರುದ್ಧವಾಗಿ ಅನಾಮಧೇಯ ಪತ್ರ ಬರೆದಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ 9 ಮಂದಿ ಬಲಿ

ಶಿವಮೊಗ್ಗದಲ್ಲಿ ಕಳೆದ ವಾರವಷ್ಟೇ, ಕೋಮು ಸಂಘರ್ಷದಿಂದ, ಜನರು ಪರಿತಪಿಸುವಂತಾಗಿದ್ದರೆ, ಇತ್ತ ತಮ್ಮ ಖಾಸಗಿ ತೆವಲಿಗಾಗಿ, ಮತ್ತೆ ಶಿವಮೊಗ್ಗದಲ್ಲಿ ಕೋಮು ಸಂಘರ್ಷವನ್ನುಂಟು ಮಾಡುವ ಬೆದರಿಕೆ ಪತ್ರ ಬರೆದ ಅಯೂಬ್ ಖಾನ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಅನಾಮಧೇಯ ಪತ್ರದಿಂದಾಗಿ ಮತ್ತೆ ಆತಂಕಕ್ಕೆ ಕಾರಣವಾಗಿದ್ದ ಶಿವಮೊಗ್ಗ ಜನರು ಇದು ಫೇಕ್ ಪತ್ರ ಎಂದುಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Harsha caselettershivamoggaಅಯೂಬ್ ಖಾನ್ಪತ್ರಶಿವಮೊಗ್ಗಹರ್ಷ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

IPL MI LSG
Cricket

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

Public TV
ByPublic TV
1 hour ago
Vijay 2
Latest

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

Public TV
ByPublic TV
1 hour ago
Himanta Sarmas BJP To Win 70 80 Of Assams 126 Seats NDA Sweep Exit Poll
Latest

WE ARE BACK, back with a BANG! – ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ – 3ನೇ ಅವಧಿಗೂ ಶರ್ಮಾ ಸಿಎಂ ಆಗೋದು ಫಿಕ್ಸ್‌

Public TV
ByPublic TV
2 hours ago
SUVENDU ADHIKARI
Latest

ಬಂಗಾಳದಲ್ಲಿ ಬಿಜೆಪಿ ಗೆಲುವು, ಟಿಎಂಸಿ ಸೋಲಿಗೆ ಕಾರಣಗಳೇನು?

Public TV
ByPublic TV
2 hours ago
Modi 3
Latest

Assembly Elections Results 2026 | ಪುದುಚೇರಿಯಲ್ಲಿ ಎನ್‌ಡಿಎಗೆ ಮತ್ತೆ ಅಧಿಕಾರ

Public TV
ByPublic TV
2 hours ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?