Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಐಟಿ ಉದ್ಯಮಿಯ ಮೊಬೈಲ್ ನಂಬರ್‍ನಲ್ಲಿ ಆಯೋಧ್ಯೆ ಫೇಕ್ ವೆಬ್‍ಸೈಟ್ ಓಪನ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೆಂಗಳೂರು ಐಟಿ ಉದ್ಯಮಿಯ ಮೊಬೈಲ್ ನಂಬರ್‍ನಲ್ಲಿ ಆಯೋಧ್ಯೆ ಫೇಕ್ ವೆಬ್‍ಸೈಟ್ ಓಪನ್!

Latest

ಬೆಂಗಳೂರು ಐಟಿ ಉದ್ಯಮಿಯ ಮೊಬೈಲ್ ನಂಬರ್‍ನಲ್ಲಿ ಆಯೋಧ್ಯೆ ಫೇಕ್ ವೆಬ್‍ಸೈಟ್ ಓಪನ್!

Public TV
Last updated: March 24, 2017 9:08 pm
Public TV
Share
2 Min Read
ayodhya website fake
SHARE

ಲಕ್ನೋ: “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕಾ? ಮಸೀದಿ ನಿರ್ಮಾಣವಾಗಬೇಕಾ? ನಿಮ್ಮ ಅಭಿಪ್ರಾಯ ಏನು? www.ayodhya-issue.gov-up.in ವೆಬ್‍ಸೈಟ್‍ನಲ್ಲಿ ನೀವು ಅಭಿಪ್ರಾಯವನ್ನು ತಿಳಿಸಿ ಉತ್ತರಪ್ರದೇಶ ಸರ್ಕಾರಕ್ಕೆ ಸಹಕಾರ ನೀಡಿ” ಎನ್ನುವ ಸಂದೇಶ ನಿಮ್ಮ ವಾಟ್ಸಪ್‍ಗೆ ಬಂದಿದೆಯೇ?

ಈ ರೀತಿಯ ಮೆಸೇಜ್ ನಿಮ್ಮ ವಾಟ್ಸಪ್‍ಗೆ ಬಂದಿದ್ದರೆ ದಯವಿಟ್ಟು ವೆಬ್‍ಸೈಟ್‍ಗೆ ಹೋಗಿ ನೀವು ಅಭಿಪ್ರಾಯವನ್ನು ದಾಖಲಿಸಬೇಡಿ. ಆಯೋಧ್ಯೆ ರಾಮಮಂದಿರ, ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಜನರಿಂದ ಅಭಿಪ್ರಾಯವನ್ನು ಸ್ವೀಕರಿಸಲು ಉತ್ತರಪ್ರದೇಶ ಸರ್ಕಾರ ಯಾವುದೇ ವೆಬ್‍ಸೈಟ್ ಆರಂಭಿಸಿಲ್ಲ. ಯಾರೋ ವ್ಯಕ್ತಿಗಳು ಈ ವೆಬ್‍ಸೈಟನ್ನು ಆರಂಭಿಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಆರಂಭಿಸಿದವರು ಯಾರು?
ಈ ವೆಬ್‍ಸೈಟ್ ಯುಆರ್‍ಎಲ್ ಆಧಾರಿಸಿ ಪತ್ತೆ ಮಾಡಿದಾಗ ಈ ವೆಬ್‍ಸೈಟ್ ದೆಹಲಿಯ ತರುಣ್ ಚೌಧರಿಯ ಹೆಸರಿನಲ್ಲಿ ನೋಂದಣಿ ಆಗಿರುವುದು ಬೆಳಕಿಗೆ ಬಂದಿದೆ. ಆದರೆ ಈ ವೆಬ್‍ಸೈಟನ್ನು ಬೆಂಗಳೂರು ಮೂಲದ ಐಟಿ ಉದ್ಯಮಿಯವರ ಮೊಬೈಲ್ ನಂಬರ್ ನೀಡಿ ನೋಂದಣಿ ಮಾಡಲಾಗಿದೆ.

ಉದ್ಯಮಿ ಅಕ್ತರ್ ಅಲಿಯವರ ಮೊಬೈಲ್ ನಂಬರನ್ನು ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೋ ದುಷ್ಕರ್ಮಿಗಳು ನನ್ನ ನಂಬರನ್ನು ಬಳಸಿ ಈ ವೆಬ್‍ಸೈಟನ್ನು ತೆರೆದಿದ್ದಾರೆ. ಈ ವಿಚಾರ ನನಗೆ ಈಗಷ್ಟೇ ತಿಳಿದಿದೆ. ಪೊಲೀಸರಿಗೆ ಈ ವಿಚಾರವನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ವೆಬ್‍ಸೈಟ್ ಬೆಳಕಿಗೆ ಬಂದಿದ್ದು ಯಾವಾಗ?
ಭೂ ವಿವಾದವನ್ನು ಎರಡು ಪಾರ್ಟಿಗಳು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿದ ಬಳಿಕ ಈ ವೆಬ್‍ಸೈಟ್ ಕುರಿತಾಗಿರುವ ಮೆಸೇಜ್ ವಾಟ್ಸಪ್ ನಲ್ಲಿ ಹರಿದಾಡಲು ಆರಂಭವಾಗಿತ್ತು.

ವೆಬ್‍ಸೈಟಿನಲ್ಲಿದ್ದ ನಾಲ್ಕು ಪ್ರಶ್ನೆಗಳು
ಅಯೋಧ್ಯೆಯಲ್ಲಿ ರಾಮಮಂದಿರವನ್ನೇ ನಿರ್ಮಿಸಿ, ಮಸೀದಿಯನ್ನು ಬೇರೆಡೆ ನಿರ್ಮಿಸಬೇಕು, ಎರಡನೇಯದು ರಾಮಮಂದಿರ ಮತ್ತು ಮಸೀದಿಯನ್ನು ಹತ್ತಿರದಲ್ಲೇ ನಿರ್ಮಿಸಬೇಕು, ಮೂರನೆಯದಾಗಿ ಮೂಲಸ್ಥಾನದಲ್ಲಿ ಬಾಬ್ರಿ ಮಸೀದಿ ನಿರ್ಮಿಸಿ, ಪಕ್ಕದಲ್ಲಿ ರಾಮಮಂದಿರ ನಿರ್ಮಿಸಬೇಕು. ನಾಲ್ಕನೆಯದಾಗಿ ಜನರ ಭಾವನೆಗಳನ್ನು ಆಧರಿಸಿ ಕಾನೂನು ಪ್ರಕಾರವಾಗಿ ಸುಪ್ರೀಂಕೋರ್ಟ್ ವಿವಾದ ಇತ್ಯರ್ಥಗೊಳಿಸಬೇಕು ಎನ್ನುವ ಪ್ರಶ್ನೆಯನ್ನು ಕೇಳಿ ಪೋಲ್ ಆಯ್ಕೆಯನ್ನು ನೀಡಲಾಗಿತ್ತು.

ಜನ ನಂಬಿದ್ದು ಯಾಕೆ?
ಈ ವೆಬ್‍ಸೈಟ್‍ನಲ್ಲಿರುವ ಮಾಹಿತಿಯ ಜೊತೆಗೆ ಉತ್ತರಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಫೋಟೋವನ್ನು ಅಪ್ಲೋಡ್ ಮಾಡಲಾಗಿತ್ತು. ಹೀಗಾಗಿ ಉತ್ತರ ಪ್ರದೇಶ ಸರ್ಕಾರವೇ ಈ ವೆಬ್‍ಸೈಟನ್ನು ಆರಂಭಿಸಿದೆ ಎಂದು ಜನ ನಂಬಿದ್ದರು.

ಇದು ಸರ್ಕಾರಿ ವೆಬ್‍ಸೈಟ್ ಎಂದು ತಿಳಿಯುವುದು ಹೇಗೆ?
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ವೆಬ್‍ಸೈಟ್‍ಗಳನ್ನು ನ್ಯಾಷನಲ್ ಇನ್ಫಾರ್ಮೆಟಿಕ್ಸ್ ಸೆಂಟರ್(ಎನ್‍ಐಸಿ) ಸಿದ್ಧಪಡಿಸುತ್ತದೆ. ಎನ್‍ಐಸಿ ಸಿದ್ಧಪಡಿಸಿ ವೆಬ್‍ಸೈಟ್‍ಗಳ ಯೂನಿಫಾರ್ಮ್ ರಿಸೋರ್ಸ್ ಲೋಕೆಟರ್(ಯುಆರ್‍ಎಲ್)ಗಳು www.pib.nic.in, www.kar.nic.in ಈ ರೀತಿ ಇರುತ್ತದೆ. ಆದರೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಎಲ್ಲ ವೆಬ್‍ಸೈಟ್‍ಗಳನ್ನು ಎನ್‍ಐಸಿಯೇ ಸಿದ್ಧಪಡಿಸುವುದಿಲ್ಲ. ಹೀಗಾಗಿ ಅವುಗಳ ಒಳಗಡೆ ಇರುವ ಮಾಹಿತಿ, ವೆಬ್‍ಸೈಟಿಗೆ ಲಿಂಕ್ ಆಗಿರುವ ಅಧಿಕೃತ ಸಾಮಾಜಿಕ ಜಾಲತಾಣಗಳನ್ನು ನೋಡಿದ ಬಳಿಕವಷ್ಟೇ ಇದು ಸರ್ಕಾರಿ ವೆಬ್‍ಸೈಟ್ ಎಂದು ಖಚಿತಪಡಿಸಿಕೊಳ್ಳಬಹುದು.

fake ram mandir website

TAGGED:Babri Masjidfake websiteRam Mandiruttar pradeshಆಯೋಧ್ಯೆಬಾಬ್ರಿ ಮಸೀದಿಬೆಂಗಳೂರುಯೋಗಿ ಆದಿತ್ಯನಾಥ್ರಾಮಮಂದಿರವೆಬ್‍ಸೈಟ್
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

rent house
Bengaluru City

ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

Public TV
By Public TV
11 minutes ago
school student karwar
Latest

Karwar: ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ

Public TV
By Public TV
37 minutes ago
Renee Nicole Good
Crime

ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ಅಧಿಕಾರಿ – ಆಕೆ ಭಯಾನಕವಾಗಿ ವರ್ತಿಸಿದ್ದೇ ಕಾರಣ ಎಂದ ಟ್ರಂಪ್‌

Public TV
By Public TV
43 minutes ago
BJP DKSHI
Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
By Public TV
2 hours ago
siddaramaiah KREDL
Bengaluru City

ಸಿಎಂಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

Public TV
By Public TV
2 hours ago
R.ASHOK
Bengaluru City

ರಾಜ್ಯದ ಖಜಾನೆಯನ್ನ ಕಾಂಗ್ರೆಸ್ ತನ್ನ ಖಜಾನೆ ಮಾಡೋಕೆ ಹೊರಟಿದೆ: ಆರ್. ಅಶೋಕ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?