Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಳ್ಳು ಆರೋಪಗಳ ವಿಷ ಕುಡಿದು, ವಿಷಕಂಠನಾಗಿದ್ದೇನೆ- ಹೆಬ್ಬಾರ್ ವಿರುದ್ಧ ಸಿದ್ದರಾಮಯ್ಯ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸುಳ್ಳು ಆರೋಪಗಳ ವಿಷ ಕುಡಿದು, ವಿಷಕಂಠನಾಗಿದ್ದೇನೆ- ಹೆಬ್ಬಾರ್ ವಿರುದ್ಧ ಸಿದ್ದರಾಮಯ್ಯ ಕಿಡಿ

Bengaluru City

ಸುಳ್ಳು ಆರೋಪಗಳ ವಿಷ ಕುಡಿದು, ವಿಷಕಂಠನಾಗಿದ್ದೇನೆ- ಹೆಬ್ಬಾರ್ ವಿರುದ್ಧ ಸಿದ್ದರಾಮಯ್ಯ ಕಿಡಿ

Public TV
Last updated: July 25, 2019 1:01 pm
Public TV
Share
2 Min Read
siddu
SHARE

ಬೆಂಗಳೂರು: ‘ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು’ ಎಂದು ಕೆಲವು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದಾರೆ. ಇದು ಸಂಪೂರ್ಣ ಸುಳ್ಳು ದುರುದ್ದೇಶ ಪೂರಿತ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.

ನಿನ್ನೆ ತಡರಾತ್ರಿ ಕ್ಷೇತ್ರಕ್ಕೆ ಆಗಮಿಸಿದ್ದ ಅತೃಪ್ತ ಶಾಸಕ ಶಿವರಾಮ್ ಹೆಬ್ಬಾರ್, ಸಿದ್ದರಾಮಯ್ಯನವರೇ ನಮ್ಮ ನಾಯಕರು ಅವರು ಹೇಳಿದಂತೆಯೇ ನಡೆದುಕೊಳ್ಳುತ್ತಿದ್ದೇವೆ. ಹೀಗಾಗಿ ಬಿಜೆಪಿ ಸೇರುವ ಯಾವುದೇ ಉದ್ದೇಶ ಹೊಂದಿಲ್ಲ. ಸಿದ್ದರಾಮಯ್ಯನವರ ಮಾರ್ಗದರ್ಶನದಂತೆ ನಡೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದರು. ಹೆಬ್ಬಾರ್ ಅವರ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲ ಸೃಷ್ಟಿಸಿದ್ದು, ಇದೀಗ ಸ್ವತಃ ಸಿದ್ದರಾಮಯ್ಯನವರೇ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

shivaram hebbar siddaramaiah

ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಬೇಸರ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ತಪ್ಪು ಮುಚ್ಚಿಕೊಳ್ಳುವ ದುರುದ್ದೇಶದಿಂದ ಅತೃಪ್ತ ಶಾಸಕರು ‘ಸಿದ್ದರಾಮಯ್ಯನವರು ನಮ್ಮ ನಾಯಕರು’ ಎಂದು ಹೇಳುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷಕುಡಿದು, ಕುಡಿದು ನಾನು ವಿಷಕಂಠನ್ನಾಗಿದ್ದೇನೆ. ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ! ಎಂದು ಮೊದಲ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ.
ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷಕುಡಿದು,ಕುಡಿದು ನಾನು ವಿಷಕಂಠನ್ನಾಗಿದ್ದೇನೆ.
ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ!@INCKarnataka

— Siddaramaiah (@siddaramaiah) July 25, 2019

‘ಸಿದ್ದರಾಮಯ್ಯನವರು ನಮ್ಮ ನಾಯಕರು’ ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ಎರಡನೇ ಟ್ವೀಟ್‍ನಲ್ಲಿ ಉಲ್ಲೇಖಿಸಿದ್ದಾರೆ.

'ಸಿದ್ದರಾಮಯ್ಯನವರು ನಮ್ಮ‌‌ನಾಯಕರು'ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು.
ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ.
ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ.

— Siddaramaiah (@siddaramaiah) July 25, 2019

‘ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು’ ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದು ಮೂರನೇ ಟ್ವೀಟ್‍ನಲ್ಲಿ ಕಿಡಿ ಕಾರಿದ್ದಾರೆ. ಈ ಮೂಲಕ ಅತೃಪ್ತ ಶಾಸಕರು ತಮ್ಮ ಮೇಲೆ ಮಾಡಿರುವ ಎಲ್ಲ ಆರೋಪಗಳು ಸುಳ್ಳು ಎಂದು ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.

'ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ.
ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ.

— Siddaramaiah (@siddaramaiah) July 25, 2019

ಶಿವರಾಮ್ ಹೆಬ್ಬಾರ್ ಹೇಳಿದ್ದೇನು?
ನಾವು ಬಿಜೆಪಿ ಜೊತೆ ಸಂಪರ್ಕದಲ್ಲಿಲ್ಲ. ನಮ್ಮ ನಾಯಕ ಸಿದ್ದರಾಮಯ್ಯ, ಅವರು ಹೇಳಿದಂತೆ ಯಾರ ಜೊತೆಗೂ ಸಂಪರ್ಕ ಸಾಧಿಸಿಲ್ಲ ಎಂದು ಶಿವರಾಮ್ ಹೆಬ್ಬಾರ್ ಹೇಳಿದ್ದರು. ಬುಧವಾರ ರಾತ್ರಿ ಪಬ್ಲಿಕ್ ಟಿವಿ ಜೊತೆ ಮಾತಾನಾಡಿದ್ದ ಅವರು, ನಾವು ಯಾವ ಬಿಜೆಪಿ ನಾಯಕರ ಜೊತೆ ಸಂಪರ್ಕ ಹೊಂದಿಲ್ಲ. ಸದ್ಯ ರಾಜ್ಯದಲ್ಲಿ ಆಗುತ್ತಿರುವ ಬಿಜೆಪಿ ಸರ್ಕಾರ ರಚನೆಯ ಬೆಳವಣಿಗೆಗೆ ನಮಗೆ ಯಾವುದೇ ಸಂಬಂಧ ಇಲ್ಲ. ನಾವು ಕೇವಲ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಟ್ಟಿದ್ದೇವೆ. ಇಂದಿಗೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇವೆ ಎಂದು ತಿಳಿಸಿದ್ದರು.

Shivaram Hebbar a

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿರುವುದರಿಂದ ರಾಜೀನಾಮೆ ಅಂಗೀಕಾರವಾದ ಬಳಿಕ ಎಲ್ಲರೂ ಒಟ್ಟಿಗೆ ಸೇರಿ ತೀರ್ಮಾನ ಮಾಡುತ್ತೇವೆ. ನಮ್ಮ ನಾಯಕರು ಸಿದ್ದರಾಮಯ್ಯ ಅವರು, ಅವರೇ ದೂರ ಉಳಿಯಿರಿ ಎಂದಿದ್ದಾರೆ. ಸ್ಪೀಕರ್ ಅವರಿಗೆ ಮನವಿ ಮಾಡಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನದ ಮೇಲೆ ನಮ್ಮ ಮುಂದಿನ ತೀರ್ಮಾನ ಇರುತ್ತದೆ ಎಂದಿದ್ದರು.

TAGGED:dissatisfied MLAsPublic TVResignationShivaram Hebbarsiddaramaiahಅತೃಪ್ತ ಶಾಸಕರುಪಬ್ಲಿಕ್ ಟಿವಿರಾಜೀನಾಮೆಶಿವರಾಮ್ ಹೆಬ್ಬಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Baahubali The Epic 3
ಜಪಾನ್‌ನಲ್ಲಿ `ಬಾಹುಬಲಿ ದಿ ಎಪಿಕ್’ ರಿಲೀಸ್ – ಯಾವಾಗ ಗೊತ್ತಾ..?
Cinema Latest South cinema
Darshan
ʻದಾಸʼನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು ಎಂದ ದರ್ಶನ್‌
Bengaluru City Cinema Districts Karnataka Latest Main Post Sandalwood
Nanda Kishore and bekary raghu
ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್ – ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ ಸಾಬೀತು
Bengaluru City Cinema Districts Karnataka Latest Sandalwood Top Stories
Sharukh khan son aryan khan
ಶಾರುಖ್ ಖಾನ್ ಪುತ್ರನಿಂದ ಅಸಭ್ಯ ವರ್ತನೆ ಕೇಸ್ – ತನಿಖೆಗಿಳಿದ ಕಬ್ಬನ್ ಪಾರ್ಕ್ ಪೊಲೀಸರು
Bengaluru City Bollywood Cinema Latest Top Stories

You Might Also Like

Indigo Flight
Bengaluru City

1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ ಎಂದ ಇಂಡಿಗೋ

Public TV
By Public TV
7 minutes ago
home loan
Latest

ಮನೆ, ಕಾರು ಖರೀದಿದಾರರಿಗೆ ಗುಡ್‌ನ್ಯೂಸ್‌ | ರೆಪೋ ದರ ಕಡಿತ – ಇಎಂಐ ಎಷ್ಟು ಇಳಿಕೆಯಾಗುತ್ತೆ?

Public TV
By Public TV
32 minutes ago
Metro Suicide
Bengaluru City

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
1 hour ago
Bengaluru Rain
Bengaluru City

ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ

Public TV
By Public TV
2 hours ago
Why did Modi and Putin use the Fortuner car
Latest

ಮೋದಿ, ಪುಟಿನ್‌ ಫಾರ್ಚೂನರ್ ಕಾರನ್ನೇ ಬಳಸಿದ್ದು ಯಾಕೆ?

Public TV
By Public TV
3 hours ago
Kantara star Rishab Shetty and Hombale Films fulfills the promise Bhoota Kola seeks blessings of Panjurli Daiva 2
Cinema

ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ – ರಿಷಬ್‌ಗೆ ಪಂಜುರ್ಲಿ ಅಭಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?