ಮಂಡ್ಯ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಂಸದೆ ರಮ್ಯಾ ಮಂಡ್ಯದಿಂದ ಸ್ಪರ್ಧೆ ಮಾಡ್ತಾರೆ ಅನ್ನೋ ಸುದ್ದಿಯ ಬೆನ್ನಲ್ಲೇ, ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರಬೇಕು ಅಂತಾ ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ರಮ್ಯಾ ಅಭಿಮಾನಿಗಳು ಮನವಿ ಮಾಡಿದ್ದಾರೆ.
ಸಂಸದೆಯಾಗಿದ್ದ ಅಲ್ಪಾವಧಿಯಲ್ಲೇ ಮಂಡ್ಯ ಜಿಲ್ಲೆಯಲ್ಲಿ ಹಲವು ಯೋಜನೆಗಳನ್ನು ತಂದು ಅಭಿವೃದ್ಧಿ ಕೆಲಸ ಮಾಡಿದ್ದೀರಿ. ಆದುದರಿಂದ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮತ್ತೆ ನೀವು ರಾಜ್ಯ ರಾಜಕಾರಣಕ್ಕೆ ಬರಬೇಕು. ಮಂಡ್ಯ ಜಿಲ್ಲೆಯ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸ್ಬೇಕು ಅಂತಾ ರಮ್ಯಾ ಅಭಿಮಾನಿಗಳು ಮನವಿ ಮಾಡಿದ್ದಾರೆ.
ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿರೋ ನಮ್ಮ ನೆಚ್ಚಿನ ನಾಯಕಿ ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರಬೇಕು. ಮಂಡ್ಯ ಜಿಲ್ಲೆಯ ಯಾವುದಾದರೊಂದು ಕ್ಷೇತ್ರದಿಂದ ಸ್ಫರ್ಧಿಸಿ ಜಿಲ್ಲೆಯ ಜನರ ಕನಸು ನನಸು ಮಾಡಬೇಕು ಅಂತ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ನಿರ್ದೇಶಕ ಶಶಿಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಲೋಕಸಭೆ ಉಪಚುನಾವಣೆ ಮೇಲೆ ಕಣ್ಣು- ರಮ್ಯಾ ಶೀಘ್ರವೇ ಮಂಡ್ಯಕ್ಕೆ ವಾಪಸ್ ಖಚಿತ
ಇದನ್ನೂ ಓದಿ: ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸ್ತಾರಾ ರಮ್ಯಾ?