ಯಾದಗಿರಿ: ಡಿ.ಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಸ್ಥಾನ ಸಿಕ್ಕ ಹಿನ್ನೆಲೆಯಲ್ಲಿ ಗಡೇ ದುರ್ಗಾದೇವಿ ಮಂದಿರದಲ್ಲಿ ಅರ್ಚಕ ಮಹಾದೇವಪ್ಪ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತ ಡಿಕೆ ಅಭಿಮಾನಿಗಳು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಜಿಲ್ಲೆಯ ವಡಗೇರಾ ತಾಲೂಕಿನ ಗೋನಾಳ ಗ್ರಾಮದ ದುರ್ಗಾದೇವಿಗೆ ಡಿಕೆಶಿ ಪರಮಭಕ್ತರಾಗಿದ್ದು, ಕಳೆದ ಜನವರಿ 29ರಂದು ಈ ದೇವಸ್ಥಾನ ಡಿಕೆ ಆಗಮಿಸಿ, ಪತ್ರ ಪೊಜೆ ಸಲ್ಲಿಸಿದ್ದರು. ಈ ವೇಳೆ ಅರ್ಚಕ ಮಹಾದೇವಪ್ಪ ಪೂಜಾರಿ, ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು.
ಈ ದೇವಿಯ ಮಾತು ನಿಜವಾಗಿದ್ದು, ದೇವಿಯ ಕೃಪೆಯಿಂದ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದೆ. ಹೀಗಾಗಿ ಡಿ.ಕೆ ಶಿವಕುಮಾರ್ ಅವರಿಗೆ ರಾಜಕೀಯದಲ್ಲಿ ಒಳ್ಳೆಯದಾಗಬೇಕು ಮತ್ತು ಮುಂದಿನ ದಿನಗಳಲ್ಲಿ ಅವರು ಸಿಎಂ ಆಗಬೇಕೆಂದು ದುರ್ಗಾದೇವಿ ಪೊಜಾರಿ ಮಹಾದೇವಪ್ಪ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮಾಜಿ ವಿಧಾನಪರಿಷತ್ ಸದಸ್ಯ ಚನ್ನಾರೆಡ್ಡಿ ಪಾಟೀಲ್ ತುನ್ನೂರು ನೇತೃತ್ವದಲ್ಲಿ ಡಿಕೆಶಿ ಅಭಿಮಾನಿಗಳು, ಕೇಕ್ ಕತ್ತರಿಸಿ ಪಟಾಕಿ ಸಿಡಿಸಿ ಸಂಭ್ರಮಪಟ್ಟರು.