ಚಿಕ್ಕೋಡಿ: ದಿವಂಗತ ಉಮೇಶ್ ಕತ್ತಿ (Umesh Katti) ಅವರ ಕುಟುಂಬಕ್ಕೆ (Family) ಸಚಿವ ಸ್ಥಾನ (Minister Post) ನೀಡಬೇಕು ಎನ್ನುವ ಆಗ್ರಹವನ್ನು ಕತ್ತಿ ಕುಟುಂಬದ ಅಭಿಮಾನಿಗಳು ಹೊರಹಾಕಿದ್ದಾರೆ.
ಇತ್ತೀಚೆಗಷ್ಟೆ ಹೃದಯಾಘಾತದಿಂದ ನಿಧನರಾದ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವರಾಗಿದ್ದ ಉಮೇಶ್ ಕತ್ತಿ ಕುಟುಂಬಕ್ಕೆ ಸಚಿವ ಸ್ಥಾನ ನೀಡಬೇಕು ಎನ್ನುವ ಒಕ್ಕೊರಲಿನ ಆಗ್ರಹವನ್ನು ಅವರ ಅಭಿಮಾನಿಗಳು ಮಾಡಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಯಮಕನಮರಡಿ ಗ್ರಾಮದಲ್ಲಿ ಅಗಲಿದ ನಾಯಕ ಉಮೇಶ್ ಕತ್ತಿ ಅವರಿಗೆ ದೀಪ ನಮನ ಸಲ್ಲಿಸಿದ ಅವರ ಅಭಿಮಾನಿಗಳು ಅವರ ಕುಟುಂಬಕ್ಕೆ ಬಿಜೆಪಿ (BJP) ಹೈಕಮಾಂಡ್ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: 2030ರೊಳಗೆ ರಾಜ್ಯದ ಎಲ್ಲ ಬಸ್ಗಳನ್ನು ಎಲೆಕ್ಟ್ರಿಕ್ ಬಸ್ ಮಾಡುವ ಗುರಿ: ಶ್ರೀರಾಮುಲು ಘೋಷಣೆ
ಈ ಸಂದರ್ಭದಲ್ಲಿ ಮಾತನಾಡಿದ ಕತ್ತಿ ಕುಟುಂಬದ ಅಭಿಮಾನಿ ಹಾಗೂ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಕಲಗೌಡ ಪಾಟೀಲ್, ಉತ್ತರ ಕರ್ನಾಟಕದ ಧ್ವನಿಯಾಗಿದ್ದ ಉಮೇಶ್ ಕತ್ತಿ ಅವರನ್ನು ಕಳೆದುಕೊಂಡಿದ್ದು ಈ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕ್ಷೇತ್ರದ ಅಭಿವೃದ್ಧಿಗಾಗಿ ಕಂಡಿದ್ದ ಕನಸುಗಳನ್ನು ನನಸು ಮಾಡಲು ಅವರ ಕುಟುಂಬದ ಸದಸ್ಯರೊಬ್ಬರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರವಿ ಹಂಜಿ ಸೇರಿದಂತೆ ನೂರಾರು ಕತ್ತಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ