-2023ಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ವಿಶೇಷ ಪೂಜೆ
ಹಾಸನ: ಜೆಡಿಎಸ್ (JDS) ಪಕ್ಷದ ಕಾರ್ಯಕರ್ತರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (HD DeveGowda) ಫೋಟೋ ಹಿಡಿದು ಅಯ್ಯಪ್ಪ ಸ್ವಾಮಿ ದರ್ಶನ ಪಡೆದರು.
ಹಾಸನ (Hassan) ಜಿಲ್ಲೆಯ ಅರಕಲಗೂಡು ತಾಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದ ಜಾಗ್ವಾರ್ ಬಾಯ್ಸ್ನ ಯುವಕರ ತಂಡ ಪಂಪದಿಂದ ಅಯ್ಯಪ್ಪನ ಸನ್ನಿಧಿಯವರೆಗೂ ಹೆಚ್.ಡಿ.ದೇವೇಗೌಡರ ಫೋಟೋ ಹಿಡಿದು ಪಾದಯಾತ್ರೆ ಮಾಡಿದ್ದಾರೆ. ಈ ವೇಳೆ ಕನ್ನಡನಾಡಿನ ಏಕೈಕ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರಿಗೆ ಆರೋಗ್ಯ ಮತ್ತು ಆಯಸ್ಸು ನೀಡಲಿ ಎಂದು ಪ್ರಾರ್ಥಿಸಿದರು. ಇದನ್ನೂ ಓದಿ: ಬೆಂಗ್ಳೂರು ಟ್ರಾಫಿಕ್ ತಪ್ಪಿಸಲು ನಯಾ ಪ್ಲಾನ್- 273 ಕೋಟಿ ವೆಚ್ಚದಲ್ಲಿ ಬರಲಿದೆ ಫ್ರೀ ಕಾರಿಡಾರ್ ರಸ್ತೆ
ಅಷ್ಟೇ ಅಲ್ಲದೇ 2023ಕ್ಕೆ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿಯಾಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಹೆಚ್.ಡಿ.ದೇವೇಗೌಡರ ಫೋಟೋ ಜೊತೆಗೆ ಕನ್ನಡ ಬಾವುಟ ಕೂಡ ಹಿಡಿದುಕೊಂಡು ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇದನ್ನೂ ಓದಿ: 98 ವರ್ಷದ ವೃದ್ಧ ಜೈಲಿನಿಂದ ಬಿಡುಗಡೆ – ಎಸ್ಕಾರ್ಟ್ ನೀಡಿ ಮನೆಗೆ ಕಳುಹಿಸಿದ ಪೊಲೀಸರು
Live Tv
[brid partner=56869869 player=32851 video=960834 autoplay=true]
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k