ಹುಟ್ಟುಹಬ್ಬದ ಸಲುವಾಗಿ ಯಶ್ (Yash) ಕಟೌಟ್ ನಿಲ್ಲಿಸಲು ಹೋಗಿ ವಿದ್ಯುತ್ ಸ್ಪರ್ಶದಿಂದ ಗದಗದ ಸೊರಣಗಿ ಗ್ರಾಮದ ಮೂವರು ಅಭಿಮಾನಿಗಳು ನಿಧನರಾಗಿದ್ದಾರೆ. ನೋವಿನಲ್ಲಿರೋ ಕುಟುಂಬಸ್ಥರನ್ನು ಭೇಟಿಯಾಗಲು ಬಂದಿದ್ದ ವೇಳೆ ಯಶ್ ಜೊತೆ ಸೆಲ್ಫಿಗಾಗಿ ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಜನಸಂದಣಿ ಕಂಟ್ರೋಲ್ ಮಾಡಲು ಪೊಲೀಸರು ಹರಸಾಹಸ ಮಾಡಿದ್ದಾರೆ. ಇದನ್ನೂ ಓದಿ:ಇನ್ಮುಂದೆ ನನ್ನ ಕಟೌಟ್ ಹಾಕಬೇಡಿ- ಅಭಿಮಾನಿಗಳಲ್ಲಿ ಯಶ್ ಮನವಿ
ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರೋ ಮುರಳಿ, ನವೀನ್, ಹನುಮಂತ ನಿಧನಕ್ಕೆ ಯಶ್ ಕಂಬನಿ ಮಿಡಿದಿದ್ದಾರೆ. ಇನ್ಮುಂದೆ ನನ್ನ ಬ್ಯಾನರ್ ಮತ್ತು ಕಟೌಟ್ ಹಾಕಲೇಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ. ಹುಟ್ಟುಹಬ್ಬ ಆಚರಿಸಲು ಭಯವಾಗ್ತಿದೆ ಎಂದು ಯಶ್ ಹೇಳಿದ್ದಾರೆ. ನನ್ನ ಬಗ್ಗೆ ನನಗೆ ಅಸಹ್ಯ ಆಗುತ್ತಿದೆ ಎಂದು ಫ್ಯಾನ್ಸ್ ಸತ್ತಿದ್ದಕ್ಕೆ ಯಶ್ ನೋವಿನಲ್ಲಿ ಮಾತನಾಡಿದ್ದಾರೆ.
ಎಸ್ ಪಿ ಬಿಗಿ ಭದ್ರತೆಯಲ್ಲಿದ್ದ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಳಿಕ ವಾಪಸ್ ತೆರಳುವಾಗ ಅಭಿಮಾನಿಗಳು (Fans) ಯಶ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ನೋವಿನಲ್ಲಿದ್ದ ಯಶ್, ಅಭಿಮಾನಿಗಳಿಗೆ ತಾಳ್ಮೆಯಿಂದಲೇ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.