ದಾವಣಗೆರೆ: ಶಾಸಕ ಶಿವಗಂಗಾ ಬಸವರಾಜ್ (Shivaganga Basavaraj) ಅಭಿಮಾನಿಗಳು ಅವರ ಫೋಟೋ ಹಿಡಿದುಕೊಂಡು ಮಹಾಕುಂಭ ಮೇಳದಲ್ಲಿ (Mahakumbh Mela) ಬುಧವಾರ (ಫೆ.26) ಪುಣ್ಯ ಸ್ನಾನ ಮಾಡಿದ್ದಾರೆ.
ಶಾಸಕರಿಗೆ ನಿಗಮ ಮಂಡಳಿ ಅಥವಾ ಸಚಿವ ಸ್ಥಾನ ಸಿಗುವಂತೆ ಅಭಿಮಾನಿಗಳು ಪ್ರಾಥನೆ ಸಲ್ಲಿಸಿ, ಹರಕೆ ಮಾಡಿಕೊಂಡಿದ್ದಾರೆ. ಬಳಿಕ ಪುಣ್ಯ ಸ್ನಾನ ಮಾಡಿದ್ದಾರೆ. ಇದನ್ನೂ ಓದಿ: ಶ್ರೀಶೈಲಂ ಸುರಂಗ ಕುಸಿತ – 5ನೇ ದಿನವೂ ರಕ್ಷಣಾ ಕಾರ್ಯ, 10,000 ಘನ ಮೀಟರ್ ಕೆಸರು ತೆಗೆಯುವುದೇ ಸವಾಲು!
Advertisement
Advertisement
ಚನ್ನಗಿರಿಯ ಕಾಂಗ್ರೆಸ್ ಮುಖಂಡ ಶಶಿಧರ್, ವಸಂತ್ ಹಾಗೂ ಸುರೇಶ್ ಹರಕೆ ಸಲ್ಲಿಸಿದ್ದು, ಈ ಬಾರಿ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಶಿವಗಂಗಾ ಬಸವರಾಜ್ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಬೇಡಿಕೊಂಡಿದ್ದಾರೆ.
Advertisement
Advertisement
ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್, ಡಿಸಿಎಂ ಡಿಕೆಶಿಯವರ ಆಪ್ತರಾಗಿದ್ದಾರೆ. ಇದನ್ನೂ ಓದಿ: ಟ್ರಾಫಿಕ್ಗೆ ಮುಕ್ತಿ ಹಾಡಲು ಮುಂದಾದ ಬಿಬಿಎಂಪಿ – 10,000 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ