ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Election) ತರೀಕೆರೆ ಕ್ಷೇತ್ರದಿಂದ ಗೋಪಿಕೃಷ್ಣ ಅವರಿಗೆ ಟಿಕೆಟ್ ದೊರಕಿ, ಅವರೇ ಗೆಲ್ಲುವಂತೆ ಆಶೀರ್ವದಿಸು ತಾಯೆ ಎಂದು ಭಕ್ತರು ಬಾಳೆಹಣ್ಣಿನ ಮೇಲೆ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿ ಗೋಪಿಕೃಷ್ಣ ಹೆಸರು ಬರೆದು ರಥದ ಮೇಲೆ ಎಸೆದಿದ್ದಾರೆ.
ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಕಳೆದೊಂದು ವಾರದಿಂದ ಅಜ್ಜಂಪುರ ತಾಲೂಕಿನಲ್ಲಿ ಇತಿಹಾಸ ಪ್ರಸಿದ್ಧ ಅಂತರಘಟ್ಟಮ್ಮನ ಜಾತ್ರೆ ನಡೆಯುತ್ತಿದೆ. ಅಂತರಘಟ್ಟಮ್ಮ ಅಂದ್ರೆ ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿನಲ್ಲಿ ಭಾರೀ ಭಯ ಹಾಗೂ ನಂಬಿಕೆ. ಈ ಜಾತ್ರೆಗೆ ಹೋದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗೋಪಿಕೃಷ್ಣ ಅಭಿಮಾನಿಗಳು ಬಾಳೆಹಣ್ಣಿನ ಮೇಲೆ ತರೀಕೆರೆ ಎಂ.ಎಲ್.ಎ. ಗೋಪಿಕೃಷ್ಣ ಎಂದು ಬರೆದು ತೇರಿನ ಮೇಲೆ ಎಸೆದಿದ್ದಾರೆ.
ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ಗೆ ಭಾರೀ ಲಾಬಿ ನಡೆಯುತ್ತಿದೆ. ಈ ಬಾರಿ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ 13 ಜನ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಮಾಜಿ ಶಾಸಕ ಜಿ. ಹೆಚ್. ಶ್ರೀನಿವಾಸ್ ಹಾಗೂ ಹೆಚ್.ಎಂ. ಗೋಪಿಕೃಷ್ಣ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದೆ. ಇದನ್ನೂ ಓದಿ: ನಕಲಿ ಚಿನ್ನ ಕೊಟ್ಟು ಅಸಲಿ ಆಭರಣದೊಂದಿಗೆ ಅಜ್ಜಿ ಗ್ಯಾಂಗ್ ಎಸ್ಕೇಪ್
ಒಬ್ಬರ ಮೇಲೋಬ್ಬರು ಆರೋಪ-ಪ್ರತ್ಯಾರೋಪ ಮಾಡಿಕೊಂಡು ನನಗೆ ಟಿಕೆಟ್ ಎಂದು ಓಡಾಡುತ್ತಿದ್ದಾರೆ. ಕೆಲ ಸಮುದಾಯದ ಮುಖಂಡರು ಹಾಗೂ ಪಕ್ಷದ ಮುಖಂಡರೂ ಕೂಡ ಇವರಿಗೆ ಟಿಕೆಟ್ ನೀಡಬೇಕೆಂದು ಬೆಂಗಳೂರಿಗೆ ಎಡತಾಕುತ್ತಿದ್ದಾರೆ. ಆದರೆ, ಟಿಕೆಟ್ ಯಾರಿಗೆ ಅನ್ನೋದು ಇನ್ನು ನಿಗದಿ ಆಗಿಲ್ಲ. ಆದರೆ, ಲಾಬಿ ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತಲೇ ಇದೆ. ಈ ಮಧ್ಯೆ ಟಿಕೆಟ್ ಯಾರಿಗೆ ಕೊಡಬೇಕೆಂದು ಕಾಂಗ್ರೆಸ್ ವರಿಷ್ಠರು ಕೂಡ ತಲೆಕೆಡಿಸಿಕೊಂಡಿದ್ದಾರೆ. ಇದನ್ನೂ ಓದಿ: ನಾನು ಕೋಲಾರದಲ್ಲಿ ಸ್ಪರ್ಧಿಸಿದ್ರೂ 200% ಗೆಲ್ತೀನಿ: ಸಿದ್ದರಾಮಯ್ಯ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k