ಕಾರವಾರ: ಹೊಲದಲ್ಲಿ ಬೆಳೆದಿದ್ದ ಗಾಂಜಾ ವಶಪಡಿಸಿಕೊಂಡು ರೈತನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಮುಂಡಗೋಡಿನ ಮೈನಳ್ಳಿ ಗ್ರಾಮದ ರಾಮು ಬಾಬು (42) ಬಂಧಿತ ರೈತ. ಈತ ತನ್ನ ಹೊಲದಲ್ಲಿ ಭತ್ತದ ಸಸಿಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದನು.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಮುಂಡಗೋಡಿನ ತಹಶೀಲ್ದಾರ್ ಅಶೋಕ್ ಗುರಾಣಿ, ಪಿ.ಐ ಕಿರಣ್ ಕುಮಾರ್ ನಾಯಕ್ ನೇತ್ರತ್ವದಲ್ಲಿ ದಾಳಿ ನೆಡೆಸಿ 5 ಸಾವಿರ ರೂ. ಮೌಲ್ಯದ ಸುಮಾರು 33 ಗಾಂಜಾ ಸಸಿಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗಷ್ಟೇ ಬಸ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಕಮಲಾಬಾಯಿ (33), ಅಂಬಾಬಾಯಿ (35), ರಮಾಬಾಯಿ (36) ಹಾಗೂ ರೇಖಾಬಾಯಿ (31) ಎಂಬ ನಾಲ್ವರು ಮಹಿಳೆಯರನ್ನು ಬೀದರ್ ತಾಲೂಕಿನ ಚಾಂಬೋಳ ಗ್ರಾಮದಲ್ಲಿ ಇಂದು ಪೊಲೀಸರು ಬಂಧಿಸಿದ್ದರು.