ದಾವಣಗೆರೆ: ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ಯರೇಹಳ್ಳಿ ಗ್ರಾಮದ ಕಾಡಿನಲ್ಲಿ ನಡೆದಿದೆ.
ಯರೇಹಳ್ಳಿ ಗ್ರಾಮದ ಗಾದ್ರಪ್ಪ (70) ಮೃತ ದುರ್ದೈವಿ ರೈತ. ಶನಿವಾರ ಗ್ರಾಮದ ಪಕ್ಕದಲ್ಲೇ ಇದ್ದ ಕಾಡಿನಲ್ಲಿ ದನ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು, ರೈತ ಗಾದ್ರಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಗ್ರಾಮದ ಕೆಲವರು ಕಾಡಿಗೆ ಹೋಗಿದ್ದಾಗ ಪ್ರಕರಣ ಬಯಲಿಗೆ ಬಂದಿದೆ. ಕಳೆದ ಹಲವು ವರ್ಷಗಳಿಂದ ಈ ಭಾಗದಲ್ಲಿ ಮೂರು ಕಾಡಾನೆಗಳು ಬೀಡು ಬಿಟ್ಟಿದ್ದು, ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ರು ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೂಡಲೇ ಅನೆಗಳನ್ನು ಸ್ಥಳಾಂತರಿಸುವಂತೆ ಗ್ರಾಮಸ್ಥರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಇನ್ನು ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೊಪ್ಪಳದಲ್ಲಿ ಕರಡಿ ದಾಳಿಗೊಳಗಾಗಿ ಮಹಿಳೆ ಗಂಭೀರ