ದಾವಣಗೆರೆ: ಕೆಳಗೆ ನಿಂತು ಟ್ರ್ಯಾಕ್ಟರ್ (Tractor) ಆನ್ ಮಾಡಿದ ಹಿನ್ನೆಲೆ ಮೈಮೇಲೆ ಟ್ರ್ಯಾಕ್ಟರ್ ಹರಿದು ರೈತ (Farmer) ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ದೊಡ್ಡೇರಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ನವೀನ್ ಎಚ್.ಟಿ (41) ಮೃತಪಟ್ಟ ರೈತ. ಇವರು ಅಡಿಕೆ ಸುಲಿಯುವ ಯಂತ್ರಕ್ಕೆ ಹಾಕುವ ಸಲುವಾಗಿ ಟ್ರ್ಯಾಕ್ಟರ್ ನಿಲ್ಲಿಸಿದ್ದರು. ಬಳಿಕ ಕೆಳಗೆ ನಿಂತುಕೊಂಡು ಟ್ರ್ಯಾಕ್ಟರ್ ಆನ್ ಮಾಡಿದ್ದಾರೆ. ಈ ವೇಳೆ ಟ್ರ್ಯಾಕ್ಟರ್ ಮೈಮೇಲೆ ಹರಿದು ರೈತ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: KEA ಪರೀಕ್ಷೆ ಅಕ್ರಮ ಪ್ರಕರಣ – ಇಬ್ಬರು ಪ್ರಾಂಶುಪಾಲರ ಬಂಧನ
ಘಟನೆಯಿಂದ ರೈತ ನವೀನ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ರೈತನ ಮೇಲೆ ಟ್ರ್ಯಾಕ್ಟರ್ ಹರಿದ ದೃಶ್ಯ ಮನೆ ಮುಂದಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ತಂಬಾಕು ಚೀಲಗಳಲ್ಲಿ ತುಂಬಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 8 ಕೋಟಿ ಹಣ ಜಪ್ತಿ