ರಾಮನಗರ: ರೇಷ್ಮೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ರೈತನ ಮೇಲೆ ಕಾಡಾನೆವೊಂದು ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಕನಕಪುರ ತಾಲೂಕಿನ ಹೊರಳಗಲ್ಲು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಹೊರಳಗಲ್ಲು ಗ್ರಾಮದ ನಿವಾಸಿ ಕರೀಗೌಡ ಎಂಬವರೇ ಆನೆ ದಾಳಿಯಿಂದ ಸಾವನ್ನಪ್ಪಿದ ರೈತ. ಕಳೆದ ರಾತ್ರಿ ಮೃತ ರೈತ ಕರೀಗೌಡ ರೇಷ್ಮೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದರು. ಈ ವೇಳೆ ದಾಳಿ ನಡೆಸಿರುವ ಕಾಡಾನೆ ತೋಟದಲ್ಲಿಯೇ ಸೊಂಡಿಲಿನಿಂದ ಕರೀಗೌಡರನ್ನು ಹಿಡಿದು ಬಡಿದು ಸಾಯಿಸಿದೆ.
- Advertisement 2
ಘಟನೆಗೆ ಸಂಬಂಧಿಸಿದಂತೆ ಕನಕಪುರ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪದೆ ಪದೇ ಆನೆ ದಾಳಿಯಿಂದ ಬೆಳೆ ನಾಶದ ಜೊತೆಗೆ ಪ್ರಾಣ ಹಾನಿಗಳಾಗುತ್ತಿದ್ದು, ಅರಣ್ಯ ಇಲಾಖೆ ಆನೆ ದಾಳಿ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.