Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಯೋಗದ ಫಲ: ಬರಗಾಲದಲ್ಲೂ ಭರ್ಜರಿ ಬೆಳೆ ಬೆಳೆದ ರಾಯಚೂರಿನ ರೈತ

Public TV
Last updated: March 6, 2017 6:45 pm
Public TV
Share
2 Min Read
rcr e1488805918802
SHARE

-ಮೌಂಟ್ ಅಬುನಲ್ಲಿ ಮೊದಲ ಪ್ರಯೋಗವಾದ ಯೋಗಿ ಕೇಥಿ ಪದ್ಧತಿ
-ಧ್ಯಾನದ ಮೂಲಕ ತೋಟದಲ್ಲಿ ಧನಾತ್ಮಕ ವಾತಾವರಣ ನಿರ್ಮಾಣ

ರಾಯಚೂರು: ಇಡೀ ರಾಜ್ಯದಲ್ಲಿ ಅವಧಿಗೂ ಮುನ್ನವೇ ಆರಂಭವಾಗಿರುವ ಬಿಸಿಲು ಹಾಗೂ ಬರಗಾಲ ನೀರಿನ ಅಭಾವ ಉಂಟುಮಾಡಿದೆ. ನದಿ, ಕೆರೆಗಳು ಬತ್ತಿ ರೈತರು ಬರಗಾಲದ ಭೀಕರತೆಯನ್ನ ಅನುಭವಿಸುತ್ತಿದ್ದಾರೆ. ಇಂತಹ ಬರಗಾಲದಲ್ಲೂ ರಾಯಚೂರಿನ ರೈತರೊಬ್ಬರು ಬಂಗಾರದ ಬೆಳೆ ಬೆಳೆದಿದ್ದಾರೆ. ಅತ್ಯಂತ ದೇಶಿ ಪದ್ಧತಿಯಲ್ಲಿ ಧ್ಯಾನದ ಮೂಲಕ ಭರ್ಜರಿ ಫಸಲು ಸಿಕ್ಕಿದೆ. ಆ ರೈತನ ಜಮೀನು ನೋಡುವುದೇ ಕಣ್ಣಿಗೊಂದು ಹಬ್ಬ.

RCR 6 3 17 YOGI KHETHI 6

ರಾಯಚೂರಿನ ಮಾನ್ವಿ ತಾಲೂಕಿನ ಸಿರವಾರ ಪಟ್ಟಣದ ರೈತ ಬಸವರಾಜ್ ಪಪ್ಪಾಯಿ ತೋಟದಲ್ಲಿ ಧ್ಯಾನ ಮಾಡುತ್ತಲೇ ಭರ್ಜರಿ ಬೆಳೆ ಬೆಳೆದಿದ್ದಾರೆ. ಮೂಲತಃ ಸೋಲಾರ್ ಸಿಸ್ಟಮ್ ವ್ಯಾಪಾರಿಯಾಗಿದ್ದ ಬಸವರಾಜ್ ಕೃಷಿಯ ಮೇಲಿನ ಒಲವಿನಿಂದ ಈಗ ರೈತರಾಗಿ ಯಶಸ್ಸು ಕಂಡಿದ್ದಾರೆ. ಇಲ್ಲಿನ ಗೊಲ್ಲದಿನ್ನಿ ಗ್ರಾಮದ ಬಳಿ 3 ಎಕರೆ 32 ಗುಂಟೆ ಜಮೀನು ಹೊಂದಿರುವ ಬಸವರಾಜ್ ಒಂದು ಬೋರ್‍ವೆಲ್ ಸಹಾಯದಿಂದ ಬರಡು ಭೂಮಿಯಲ್ಲಿ ಭರ್ಜರಿ ಪಪ್ಪಾಯಿ, ದಾಳಿಂಬೆ ಬೆಳೆದಿದ್ದಾರೆ.

RCR 6 3 17 YOGI KHETHI 2

ಕೆಂಪು ಮಣ್ಣನ್ನ ಹೊಂದಿರುವ ಭೂಮಿಯಲ್ಲಿ ಹನಿನೀರಾವರಿ ಅಳವಡಿಸಿಕೊಂಡಿದ್ದಾರೆ. ಆದ್ರೆ ಇವರು ಬೆಳೆ ಬೆಳೆಯುತ್ತಿರುವ ಪದ್ಧತಿ ಮಾತ್ರ ಹೊಸತು. ಮೌಂಟ್ ಅಬು ನಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ನಡೆಸಿದ ಯಶಸ್ವಿ ಪ್ರಯೋಗವಾದ ಯೋಗಿ ಕೇಥಿ ಪದ್ಧತಿ. ಅಂದ್ರೆ ಹೊಲದಲ್ಲಿ ಧ್ಯಾನ ಮಾಡುವ ಮೂಲಕ ಧನಾತ್ಮಕ ಶಕ್ತಿಯನ್ನ ಉಂಟುಮಾಡಿ ಉತ್ತಮ ಫಸಲನ್ನ ತೆಗೆಯುವುದು. ಈ ಪದ್ದತಿಯಲ್ಲಿ ಹೊಲದ ಮಾಲೀಕರಿಂದ ಹಿಡಿದು ಕೆಲಸಗಾರರು ಸಹ ಯಾವುದೇ ಮಾದಕ ವಸ್ತುಗಳ ವ್ಯಸನ ಮಾಡುವಂತಿಲ್ಲ.

RCR 6 3 17 YOGI KHETHI 3

ಕಳೆದ 20 ವರ್ಷದಿಂದ ಜಾರಿಯಲ್ಲಿರುವ ಯೋಗಿ ಕೇಥಿ ಪದ್ಧತಿಯಲ್ಲಿ ರಾಜಸ್ಥಾನ,ಗುಜರಾತ್, ಮಹಾರಾಷ್ಟ್ರ ರೈತರು ಬೆಳೆ ಬೆಳೆದು ಯಶಸ್ವಿಯಾಗಿದ್ದಾರೆ. ಈಗ ರಾಜ್ಯದಲ್ಲೂ ಇದರ ಪ್ರಯೋಗ ನಡೆದಿದೆ. ಸಾಮಾನ್ಯ ಪಪ್ಪಾಯಿ ತೋಟದಲ್ಲಿ ಒಂದು ಗಿಡಕ್ಕೆ 60 ಕೆ.ಜಿ ತೂಕದಷ್ಟು ಹಣ್ಣುಗಳು ಬಿಟ್ಟರೆ ಬಸವರಾಜ್ ತೋಟದಲ್ಲಿ 100 ಕೆ.ಜಿ. ತೂಕದಷ್ಟು ಅಂದ್ರೆ ಸರಾಸರಿ 80 ಹಣ್ಣುಗಳು ಸಿಗುತ್ತಿವೆ. ಕ್ರಿಮಿ, ಕೀಟ, ರೋಗಬಾಧೆಯಿಂದ ದೂರವಿರುವ ಬೆಳೆ ಸಂಪೂರ್ಣ ಸಾವಯವ ಗೊಬ್ಬರದಿಂದಾಗಿದ್ದು, ಕಡಿಮೆ ಖರ್ಚಿನ ಬೇಸಾಯವಾಗಿದೆ.

RCR 6 3 17 YOGI KHETHI 5

2400 ಪಪ್ಪಾಯಿ, 2400 ದಾಳಿಂಬೆ ಗಿಡಗಳನ್ನ ಒಂದರ ಪಕ್ಕದಲ್ಲಿ ಒಂದನ್ನ ಬೆಳೆಸಿರುವುದರಿಂದ ಎರಡು ಬೆಳೆಗಳು ಪರಸ್ಪರ ಬೆಳವಣಿಗೆಗೆ ಸಹಕಾರಿಯಾಗಿವೆ. ಏಳು ತಿಂಗಳಲ್ಲೇ ಪಪ್ಪಾಯಿ ಉತ್ತಮ ಫಸಲು ಬಂದಿದ್ದು, ದಾಳಿಂಬೆ ಈಗ ಹೂ ಬಿಡುತ್ತಿದೆ. ಗಿಡದಲ್ಲೆ ಹಣ್ಣು ಮಾಗುವುದರಿಂದ ಅತ್ಯುತ್ತಮ ರುಚಿಯ ಹಣ್ಣುಗಳು ಸಿಗುತ್ತವೆ. ಮುಂಗಡವಾಗಿ ಕಾಯ್ದಿರಿಸಿ ಹಣ್ಣುಗಳನ್ನ ಕೊಳ್ಳಲು ವ್ಯಾಪಾರಿಗಳು ತಾವಾಗಿಯೇ ಬಸವರಾಜ್ ತೋಟಕ್ಕೆ ಭೇಟಿ ನೀಡುತ್ತಿದ್ದಾರೆ. ಭೀಕರ ಬರಗಾಲವಿದ್ದರೂ ಅತ್ಯಂತ ಕಡಿಮೆ ಪ್ರಮಾಣದ ನೀರನ್ನ ಬಳಸಿ ಬಸವರಾಜ್ ಉತ್ತಮ ಬೆಳೆ ಬೆಳೆದು ಮಾದರಿಯಾಗಿದ್ದಾರೆ. ಬೆಳೆ ಹಾಗೂ ನೂತನ ಕೃಷಿ ಪದ್ದತಿ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತರು ಬಸವರಾಜ್ ಅವರ ಮೋಬೈಲ್ ಸಂಖ್ಯೆ 9886838888 ಕ್ಕೆ ಸಂಪರ್ಕಿಸಬಹುದು.

RCR 6 3 17 YOGI KHETHI 1

TAGGED:farmerorganic fruitsraichuryogi kethi methodಕೃಷಿಪಪ್ಪಾಯಿಪಬ್ಲಿಕ್ ಟಿವಿಬರಗಾಲಯೋಗಿ ಕೇಥಿ ಪದ್ಧತಿರಾಯಚೂರು
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
50 minutes ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
2 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
2 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
4 hours ago

You Might Also Like

KARWAR LAND SLIDE
Districts

ಉತ್ತರ ಕನ್ನಡ | ಕರ್ನಲ್‌ ಕಂಬದ ಬಳಿ ಗುಡ್ಡ ಕುಸಿತ – ಮಳೆಗೆ ಜಿಲ್ಲೆಯಲ್ಲಿ 5 ಮನೆಗಳು ಸಂಪೂರ್ಣ ನಾಶ

Public TV
By Public TV
27 minutes ago
Auto Driver Case
Bengaluru City

ಬೆಂಗಳೂರು | ಆಟೋ ಚಾಲಕನಿಗೆ ಹಿಂದಿಯಲ್ಲಿ ಯುವತಿಯ ಆವಾಜ್ – ಚಪ್ಪಲಿಯಲ್ಲಿ ಹಲ್ಲೆ ನಡೆಸಿ ಕ್ರೌರ್ಯ

Public TV
By Public TV
42 minutes ago
tumakuru outrage erupts against hemavati express link canal project work temporarily halted 1
Districts

ಹೇಮಾವತಿ ನೀರಿಗೆ 2 ಜಿಲ್ಲೆಗಳ ಕಿತ್ತಾಟ; ಡಿಕೆಶಿ ಒತ್ತಡಕ್ಕೆ ತುಮಕೂರು `ಕೈ’ ನಾಯಕರು ಮೌನ ಸಮ್ಮತಿ ಆರೋಪ

Public TV
By Public TV
1 hour ago
Rajastan Bomb Threat
Crime

ರಾಜಸ್ಥಾನದ ಮೂವರು ಸಚಿವರಿದ್ದ ಹೋಟೆಲ್‌ಗೆ ಬಾಂಬ್ ಬೆದರಿಕೆ ಸಂದೇಶ

Public TV
By Public TV
2 hours ago
chandra layout
Bengaluru City

ಬೆಂಗಳೂರು| ಬ್ಯಾಂಕ್ ಸಾಲ ಇದ್ದ ಕಟ್ಟಡವನ್ನ ಲೀಸ್‌ಗೆ ಪಡೆದು ಸಂಕಷ್ಟಕ್ಕೆ ಸಿಲುಕಿದ 17 ಕುಟುಂಬಗಳು

Public TV
By Public TV
3 hours ago
Mangaluru Landslide ASHWINI
Dakshina Kannada

Mangaluru Landslide | ಮಕ್ಕಳ ಅಗಲಿಕೆ ಮಧ್ಯೆ ಎರಡೂ ಕಾಲು ಕಳೆದುಕೊಂಡ ಅಶ್ವಿನಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?