Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಶಾಸಕ ರಘುಪತಿ ಪತ್ನಿ ಆತ್ಮಹತ್ಯೆ ಕೇಸ್‌ – ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಾಜಿ ಶಾಸಕ ರಘುಪತಿ ಪತ್ನಿ ಆತ್ಮಹತ್ಯೆ ಕೇಸ್‌ – ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲು

Crime

ಮಾಜಿ ಶಾಸಕ ರಘುಪತಿ ಪತ್ನಿ ಆತ್ಮಹತ್ಯೆ ಕೇಸ್‌ – ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲು

Public TV
Last updated: November 10, 2023 10:56 pm
Public TV
Share
3 Min Read
Udupi
SHARE

ಉಡುಪಿ: 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ (Raghupathi Bhat) ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ಸಿಜೆಎಂ ಜಿಲ್ಲಾ ನ್ಯಾಯಾಲಯ (Udupi CJM Court) ಶುಕ್ರವಾರ ಆದೇಶಿಸಿದೆ.

ಜೂನ್ 10, 2008 ರಂದು ಉಡುಪಿಯಲ್ಲಿ (Udupi) ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ರಾವ್‌ಗೆ 1 ವರ್ಷ ಜೈಲು (Jail) ಶಿಕ್ಷೆಯೊಂದಿಗೆ ದಂಡ ವಿಧಿಸಿದೆ.

Udupi 2

15 ವರ್ಷಗಳ ಹಿಂದೆ ನಡೆದಿದ್ದಾದ್ರೂ ಏನು?
2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಅತುಲ್ ರಾವ್‌, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಮಾಡಿ ಅಪಹರಣದ ನಾಟಕ ಮಾಡಿದ್ದರೆಂದು ದೂರಲಾಗಿದೆ.

ಕಾರನ್ನು ಅಲ್ಲೇ ಬಿಟ್ಟು ಅತುಲ್ ತನ್ನ ಕಾರಿನಲ್ಲಿ ಪದ್ಮಪ್ರಿಯ ಅವರನ್ನು ಕುಮಟಾದವರೆಗೆ ಕರೆದು ಹೋಗಿದ್ದನು. ಕುಮಟಾಕ್ಕೆ ಬೆಂಗಳೂರಿನ ಚಾಲಕನೋರ್ವನನ್ನು ಕರೆಸಿ, ತನ್ನ ಕಾರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದನು. ಇತ್ತ ಪದ್ಮಪ್ರಿಯ ಅವರನ್ನು ಅತುಲ್ ರಾವ್‌ ಬಾಡಿಗೆ ಕಾರಿನಲ್ಲಿ ಕುಮಟಾದಿಂದ ಗೋವಾ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದನು. ಅತುಲ್ ತನ್ನ ಪತ್ನಿ ಮೀರಾ ಅವರ ಡ್ರೈವಿಂಗ್ ಲೈಸನ್ಸ್‌ಗೆ ಪದ್ಮಪ್ರಿಯ ಅವರ ಫೋಟೋ ಅಂಟಿಸಿ, ಮೀರಾ ಹೆಸರಿನಲ್ಲಿ ಪದ್ಮಪ್ರಿಯ ಅವರನ್ನು ಗೋವಾ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಕರೆದುಕೊಂಡು ಹೋಗಿದ್ದನು. ಈ ಘಟನೆ ನಡೆಯುವ ಮೊದಲು ದೆಹಲಿಗೆ ಹೋಗಿದ್ದ ಅತುಲ್ ರಾವ್‌, ಅಲ್ಲಿ ಮನೆ ಬಾಡಿಗೆ ಪಡೆದುಕೊಂಡಿದ್ದನು. ಅದಕ್ಕೆ ಬೆಂಗಳೂರಿನ ನಕಲಿ ವಿಳಾಸ ನೀಡಿ ಬಾಡಿಗೆ ಕರಾರು ಪತ್ರಕ್ಕೆ ನೀಡಿದ್ದನು. ಇದು ಅಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಾಣಿಯಾಗಿತ್ತು. ಆ ಬಾಡಿಗೆ ಕರಾರು ಪತ್ರದಿಂದಲೇ ಅತುಲ್ ರಾವ್‌ ಅಲ್ಲಿ ಬ್ಯಾಂಕ್ ಖಾತೆ ತೆರೆದಿದ್ದನು. ಅತುಲ್ ರಾವ್‌ ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕ್ಲರ್ಕ್‌ ಆಗಿದ್ದರೂ ಅಲ್ಲಿ ತನ್ನ ವಿದ್ಯಾರ್ಹತೆಯನ್ನು ಬಿಇ ಮತ್ತು ಇಂಟಲ್ ಕಂಪೆನಿಯಲ್ಲಿ ಇಂಜಿನಿಯರ್ ಎಂಬುದಾಗಿ ಉಲ್ಲೇಖ ಮಾಡಿದ್ದನು ಎಂದು ದೂರಲಾಗಿದೆ.

ದೆಹಲಿಯಲ್ಲಿ ಬಾಡಿಗೆ ರೂಮಿಗೆ ಓಡಾಟ ನಡೆಸುತ್ತಿದ್ದಾಗ ಲಾಡ್ಜ್‌ನಲ್ಲಿಯೂ ಬೆಂಗಳೂರಿನ ನಕಲಿ ವಿಳಾಸ ನೀಡುತ್ತಿದ್ದನು. ಜೂ.10ರಂದು ದೆಹಲಿಗೆ ಹೋಗಿದ್ದ ಅತುಲ್, ಮರುದಿನ ಬೆಂಗಳೂರಿಗೆ ಬಂದು ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ. ಅಲ್ಲಿಂದ ಜೂ.12ಕ್ಕೆ ಹೊರಟು ಮರುದಿನ ಉಡುಪಿಗೆ ತಲುಪಿ, ರಘುಪತಿ ಭಟ್ ಜೊತೆ ಪದ್ಮಪ್ರಿಯ ಅವರನ್ನು ಹುಡುಕುವ ನಾಟಕ ಮಾಡಿದ್ದನು. ಈ ಬಗ್ಗೆ ರಘುಪತಿ ಭಟ್ 2008ರ ಜೂ.19ರಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಮಣಿಪಾಲ ಪೊಲೀಸರು ತನಿಖೆ ನಡೆಸಿ, ಬಳಿಕ ಸಿಓಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಆರೋಪಿ ವಿರುದ್ಧ ಸಿಓಡಿ ಪೊಲೀಸರು 2008ರ ಆ.22ರಂದು ಪ್ರಾಥಮಿಕ ಮತ್ತು 2009ರ ಜು.29ರಂದು ಅಂತಿಮ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಠಿ, ನಕಲಿ ದಾಖಲೆಯನ್ನು ನೈಜ ದಾಖಲೆ ಎಂಬುದಾಗಿ ಬಿಂಬಿಸಿ ಹಾಜರು ಪಡಿಸಿ ದುರುಪಯೋಗ ಪಡಿಸಿರುವ ಬಗ್ಗೆ ಆರೋಪ ಮಾಡಲಾಗಿತ್ತು.

ರಘುಪತಿ ಭಟ್ ನೀಡಿರುವ ದೂರಿನಲ್ಲಿ ತಿಳಿಸಿರುವ ಪದ್ಮಪ್ರಿಯಾಳ ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪವನ್ನು ಸಾಕ್ಷ್ಯದ ಕೊರತೆ ಹಿನ್ನೆಲೆಯಲ್ಲಿ ಸಿಓಡಿ ಅಧಿಕಾರಿಗಳು ಕೈಬಿಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್, ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಐಪಿಸಿ 468ಕಾಯಿದೆಯಡಿ 1 ವರ್ಷ ಜೈಲುಶಿಕ್ಷೆ ಮತ್ತು 5,000ರೂ. ದಂಡ ವಿಧಿಸಿದೆ. ಐಪಿಸಿ 417, 465, 471 ಕಾಯ್ದೆಯಡಿ ತಲಾ 6 ತಿಂಗಳು ಸಜೆ ಹಾಗೂ 5,000ರೂ. ದಂಡ ವಿಧಿಸಿದೆ. ಸಿಓಡಿ ಪರ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಶಿವಪ್ರಸಾದ್ ಆಳ್ವ ವಾದ ಮಂಡಿಸಿದ್ದರು.

TAGGED:bengaluruCrime NewsRaghupathi BhatUdupi CJM CourtUdupi Policeಉಡುಪಿ ಪೊಲೀಸ್‌ಉಡುಪಿ ಸಿಜೆಎಂ ಕೋರ್ಟ್‌ಬೆಂಗಳೂರುರಘುಪತಿ ಭಟ್
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Vijayalakshmi Darshan
Crime

ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – 6 ಮಂದಿ ವಿರುದ್ಧ ಚಾರ್ಜ್‌ಶೀಟ್‌

Public TV
By Public TV
12 minutes ago
Ram Mandir
Latest

Ayodhya | ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ!

Public TV
By Public TV
18 minutes ago
Nelamangala Wife Suicide copy
Bengaluru City

200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ; ಪತ್ನಿ ಆತ್ಮಹತ್ಯೆ

Public TV
By Public TV
46 minutes ago
Iran Protest 2 1
Latest

ಇರಾನ್‌ನಲ್ಲಿ ಭುಗಿಲೆದ್ದ ಹಿಂಸಾಚಾರ – ರಾಜಧಾನಿಯಲ್ಲೇ 217 ಮಂದಿ ಬಲಿ

Public TV
By Public TV
55 minutes ago
Khawaja Asif Benjamin Netanyahu
Latest

ಬೆಂಜಮಿನ್ ನೆತನ್ಯಾಹು ಅಪಹರಿಸಿ – ಅಮೆರಿಕ, ಟರ್ಕಿಗೆ ಪಾಕ್ ಒತ್ತಾಯ

Public TV
By Public TV
2 hours ago
Yeshwanthpur Flyover Mini Tempo Accident
Bengaluru City

ಫ್ಲೈಓವರ್ ಡಿವೈಡರ್‌ಗೆ ಗುದ್ದಿದ ಮಿನಿ ಟೆಂಪೋ – ತಪ್ಪಿದ ಅನಾಹುತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?