Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಕಳಪೆ ಶೇಂಗಾಬೀಜ ಪೂರೈಸಿದರೆ ರೈತನ ಕೊಲೆ ಮಾಡಿದಂತೆ – ಅಧಿಕಾರಿಗಳ ವಿರುದ್ಧ ಗುಡುಗಿದ ಬಿ.ಸಿ ಪಾಟೀಲ್

Public TV
Last updated: April 16, 2020 7:33 pm
Public TV
Share
2 Min Read
bc patil farmer
SHARE

ಚಿತ್ರದುರ್ಗ: ಮುಂಗಾರು ಹಂಗಾಮು ಪ್ರಾರಂಭವಾಗಿದೆ ಹೀಗಾಗಿ ರೈತರಿಗೆ ಉತ್ತಮ ಗುಣಮಟ್ಟದ ಶೇಂಗಾ ಬಿತ್ತನೆ ಬೀಜವನ್ನು ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕಳಪೆ ಬಿತ್ತನೆ ಬೀಜ ಮಾರಾಟ ಮಾಡಬಾರದು. ಒಂದು ವೇಳೆ ಕಳಪೆ ಬೀಜ ಪೂರೈಕೆ ಮಾಡಿದರೆ ರೈತನ ಕೊಲೆ ಮಾಡಿದಂತಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಕೃಷಿ ಅಧಿಕಾರಿಗಳ ವಿರುದ್ಧ ಗುಡುಗಿದ್ದಾರೆ.

ಕೆಲ ರೈತರು ತಮ್ಮ ಜಮೀನಿನಲ್ಲಿ ಉಳುಮೆ ಮಾಡಲು ತಮ್ಮ ಪತ್ನಿಯ ತಾಳಿ ಮಾರಾಟ ಮಾಡಿ ಬೀಜ ಖರೀದಿಸಿ ಬೆಳೆ ಬೆಳೆದಿರುತ್ತಾರೆ. ಆದ್ದರಿಂದ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡುವ ಮುನ್ನ ಬಿತ್ತನೆ ಬೀಜ ಪರೀಕ್ಷೆ ಮಾಡಬೇಕು. ಒಂದು ವೇಳೆ ಅದು ಕಳಪೆಯಾಗಿದ್ದರೆ ಅವುಗಳನ್ನು ತಿರಸ್ಕರಿಸಬೇಕು. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ವಿತರಿಸುವಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

bc patil farmer 1

ಚಿತ್ರದುರ್ಗದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಲಾಕ್‍ಡೌನ್ ಹಿನ್ನೆಲೆ ಇಂದು ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ, ಬೀಜ, ಗೊಬ್ಬರ ಸರಬರಾಜು ಸೇರಿದಂತೆ ಕೃಷಿ ಚಟುವಟಿಕೆಗಳ ಬಗ್ಗೆ ಕೈಗೊಂಡ ಅಗತ್ಯ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗಿತ್ತು. ಈ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು ಮಾತನಾಡಿ, ಕೋವಿಡ್-19 ಲಾಕ್‍ಡೌನ್ ಹಿನ್ನೆಲೆ ಕೃಷಿ ಚಟುವಟಿಕೆ ನಡೆಸಲು ಯಾವುದೇ ನಿರ್ಬಂಧ ಇಲ್ಲ. ಏಪ್ರಿಲ್ 1ರಿಂದಲೇ ಎಲ್ಲಾ ನಿರ್ಬಂಧಗಳನ್ನು ತೆರವು ಮಾಡಲಾಗಿದೆ. ಇತರೆ ಜಿಲ್ಲೆಗಳು ಸೇರಿದಂತೆ ಅಂತರಾಜ್ಯಗಳಿಗೂ ಸಾಗಾಟ ನಡೆಯುತ್ತಿದೆ. ರೈತರಿಗೆ ಮುಂದಿನ ದಿನಗಳಲ್ಲಿ ಬೇಕಾಗಿರುವ ಬಿತ್ತನೆ ಬೀಜ, ಕೃಷಿ ಪರಿಕರಗಳು, ಇದಕ್ಕೆ ಪೂರಕವಾದ ರಿಪೇರಿ ಕೇಂದ್ರಗಳನ್ನು ತೆರೆಯಲು ಸೂಚಿಸಿದ್ದು, ಯಾವುದೇ ಅಡೆತಡೆಗಳಿರುವುದಿಲ್ಲ. ಉಳುಮೆ, ಕೊಯ್ಲ ನಡೆಯಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ರೈತರು ಕೃಷಿ ಚಟುವಟಿಕೆ ಕೈಗೊಳ್ಳಬಹುದು ಎಂದು ಹೇಳಿದರು.

bc patil farmer 2

ಇದೇ ವೇಳೆ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಣ್ಣು, ತರಕಾರಿಗಳು ಬೆಳೆಯಲಾಗುತ್ತಿದ್ದು, ಇವುಗಳನ್ನು ಹೆಚ್ಚಿನ ದಿನ ಸಂಗ್ರಹಿಸುವ ದೃಷ್ಠಿಯಿಂದ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಕೋಲ್ಡ್ ಸ್ಟೋರೆಜ್‍ಗಳು ಹಾಗೂ ಆಹಾರ ಸಂಸ್ಕರಣೆ ಘಟಕಗಳ ಅವಶ್ಯಕತೆ ಇದೆ. ಇದರಿಂದ ರೈತರಿಗೆ ತುಂಬಾ ಸಹಾಯಕವಾಗಲಿದೆ. ಈ ನಿಟ್ಟಿನಲ್ಲಿ ಕಂಟೈನರ್ ಗಳ ಮೂಲಕ ತಾತ್ಕಾಲಿಕವಾಗಿ ಎಲ್ಲಾ ಎಪಿಎಂಸಿಗಳಲ್ಲಿ ಕೋಲ್ಡ್ ಸ್ಟೋರೇಜ್ ಮಾಡಿದಲ್ಲಿ ಇಂತಹ ಸಂದರ್ಭದಲ್ಲಿ ರೈತರಿಗೆ, ಬೆಳೆಗಾರರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಮಾರುಕಟ್ಟೆ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

bc patil farmer 3

ರೈತರು ಬೆಳೆದ ಯಾವುದೇ ಬೆಳೆ ಮಾರಾಟ, ತೋಟಗಾರಿಕೆ ಹಣ್ಣು-ತರಕಾರಿ ಮಾರಾಟಕ್ಕೆ ಅಡೆತಡೆಗಳಿರುವುದಿಲ್ಲ. ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಸಹ ಯಾವುದೇ ಅಡೆತಡೆಗಳಿರುವುದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಜನರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡುವ ಮೂಲಕ ರೈತರಿಗೆ ನೆರವಾಗಲು ತಿಳಿಸಿದರು.

ಈ ಸಭೆಯಲ್ಲಿ ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಗೂಳಿಹಟ್ಟಿ ಡಿ. ಶೇಖರ್, ಟಿ. ರಘುಮೂರ್ತಿ, ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೊನ್ನಾಂಬ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.

TAGGED:agricultureBC PatilChitradurgafarmersLockdownofficersPublic TVSowing Seedಅಧಿಕಾರಿಗಳುಕೃಷಿಚಿತ್ರದುರ್ಗಪಬ್ಲಿಕ್ ಟಿವಿಬಿ.ಸಿ. ಪಾಟೀಲ್ಬಿತ್ತನೆ ಬೀಜರೈತರುಲಾಕ್‍ಡೌನ್
Share This Article
Facebook Whatsapp Whatsapp Telegram

Cinema Updates

Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
1 minute ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
32 minutes ago
Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
2 hours ago
Yashs first action sequence look from Ramayana revealed
ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್
2 hours ago

You Might Also Like

Okalipuram Crime
Bengaluru City

ಕಾರಿನ ಮೇಲೆ ಮಳೆ ನೀರು ಹಾರಿಸಿದ್ದಕ್ಕೆ ಹಲ್ಲೆ – ಬೆರಳು ಕಚ್ಚಿ ವಿಕೃತಿ ಮೆರೆದ ಮಾಲೀಕ

Public TV
By Public TV
21 minutes ago
N Ravikumar
Bengaluru City

ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ – ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಂಧನ ಭೀತಿ!

Public TV
By Public TV
31 minutes ago
DK Shivakumar 2 2
Bengaluru City

ಸಿಎಂ Vs ಡಿಸಿಎಂ ಮಧ್ಯೆ ವರ್ಗಾವಣೆ ಸಂರ್ಘರ್ಷ – ನಿಜಕ್ಕೂ ಆಗಿದ್ದೇನು? ಡಿಕೆಶಿ ಆಕ್ಷೇಪ ಏಕೆ?

Public TV
By Public TV
50 minutes ago
Bengaluru Lady Kirik
Bengaluru City

ನನ್ನಿಷ್ಟ ನನ್ನ ಗಾಡಿ, ದಂಡ ಕಟ್ಟಲ್ಲ, ನೀವ್ಯಾರು ಕೇಳೋಕೆ – ಟ್ರಾಫಿಕ್ ಪೊಲೀಸರೊಂದಿಗೆ ಮಹಿಳೆಯ ಹೆಲ್ಮೆಟ್ ಕಿರಿಕ್

Public TV
By Public TV
1 hour ago
Shivaraj Tangadagi
Bengaluru City

ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರಗಳನ್ನ ನಿರ್ಬಂಧಿಸಿ: ಶಿವರಾಜ್ ತಂಗಡಗಿ ಪತ್ರ

Public TV
By Public TV
1 hour ago
Marriage
Crime

ಮದ್ವೆಗೆ ಹುಡ್ಗಿ ನೋಡಲು ಹೋಗಿದ್ದ ಯುವಕ – ಇಷ್ಟವಿಲ್ಲ ಅಂದಿದ್ದಕ್ಕೆ ಹುಡುಗಿ ತಲೆಗೆ ಗುಂಡಿಟ್ಟ..!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?