Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರಿನಲ್ಲಿ ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ; ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Mysuru | ಮೈಸೂರಿನಲ್ಲಿ ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ; ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ

Mysuru

ಮೈಸೂರಿನಲ್ಲಿ ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ; ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ

Public TV
Last updated: November 13, 2025 12:52 pm
Public TV
Share
2 Min Read
Farmers protset 2
SHARE

– 1 ತಿಂಗಳಲ್ಲಿ ಕ್ರಮ ವಹಿಸದಿದ್ರೆ ನಮ್ಮಿಂದಲೇ ಅಕ್ರಮ ರೆಸಾರ್ಟ್‌, ಹೋಮ್‌ಸ್ಟೇ ಧ್ವಂಸ

ಮೈಸೂರು: ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಪ್ರಾಣಿಗಳು ಅರಣ್ಯದಿಂದ ಹೊರಬರಲು ಕಾರಣಗಳನ್ನ ಕೇಳಿ, ಕೆರೆಗಳನ್ನು ತುಂಬಿಸಿ, ಗಿಡಗಳನ್ನು ತೆರವುಗೊಳಿಸಿ ಮೇವು ಬೆಳೆಸಲು ಆದೇಶಿಸಿದ್ದಾರೆ. ಜೊತೆಗೆ ಕಾಡುಪ್ರಾಣಿಗಳ ಸಂಘರ್ಷ ತಡೆಗೆ 1926 ಟೋಲ್‌ ಫ್ರೀ ಸಹಾಯವಾಣಿಯನ್ನೂ ಸಹ ಬಿಡುಗಡೆ ಮಾಡಲಾಗಿದೆ. ಈ ನಡುವೆ ಈವರೆಗೆ ಯಾವುದೇ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ (Forest Department) ನಡೆ ಖಂಡಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.

Farmers protset 3

ಮಾನವ-ವನ್ಯಜೀವಿ ಸಂಘರ್ಷ ಮುಂದುವರಿದ ಹಿನ್ನೆಲೆ ರೊಚ್ಚಿಗೆದ್ದ ರೈತರು ಮೈಸೂರಿನ (Mysuru) ಅಶೋಕಪುರಂನಲ್ಲಿರುವ ಅರಣ್ಯ ಭವನ ಮುತ್ತಿಗೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಜನರ ಮೇಲೆ ಪದೇ ಪದೇ ದಾಳಿ ಮಾಡ್ತಿದ್ದ ಹುಲಿ ಸೆರೆ; ಖಚಿತಪಡಿಸಿಕೊಳ್ಳಲು DNA ಟೆಸ್ಟ್‌ಗೆ ಖಂಡ್ರೆ ಸೂಚನೆ

ಕರ್ನಾಟಕ ರಾಜ್ಯ ರೈತ ಸಂಘ (ರೈತಪರ್ವ) ದಿಂದ ಪ್ರತಿಭಟನೆ ನಡೆಸಲಾಗಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ರೈತರನ್ನ (Farmers) ಅರಣ್ಯ ಭವನದ ಗೇಟ್ ಬಳಿಯೇ ಪೊಲೀಸರು ತಡೆದಿದ್ದಾರೆ. ಇದರಿಂದ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಆದಾಗ್ಯೂ ʻಕಾಡು ಪ್ರಾಣಿಗಳಿಂದ ರೈತರನ್ನು ಉಳಿಸಿʼ ಎಂದು ಘೋಷಣೆ ಕೂಗುತ್ತಾ ಪ್ರತಿಭಟಿಸಿದ ರೈತರು ರಾಜ್ಯ ಸರ್ಕಾರ ಹಾಗೂ ಅರಣ್ಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

tiger image

ರೈತರ ಬೇಡಿಕೆಗಳೇನು?
ಹೆಚ್‌.ಡಿ ಕೋಟೆ ಭಾಗದಲ್ಲಿ ಆಗುತ್ತಿರುವ ಹುಲಿ ದಾಳಿಗಳಿಂದ ಕಾಡಂಚಿನ ಜನರಿಗೆ ರಕ್ಷಣೆ ನೀಡಬೇಕು ಎಂದು ರಾಜ್ಯ ರೈತ ಕಾರ್ಯದರ್ಶಿ ಚಾಮರಾಜು ಆಗ್ರಹಿಸಿದರು. ಇದನ್ನೂ ಓದಿ: ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್‌ – ರೈತನನ್ನು ಕೊಂದ ಹುಲಿ ಸೆರೆಗೆ ಈಶ್ವರ್‌ ಖಂಡ್ರೆ ಆದೇಶ

ಇನ್ನೂ ರೈತಪರ್ವ ರಾಜ್ಯಾಧ್ಯಕ್ಷ ಅರುಣ್‌ ಕುಮಾರ್‌ ಮಾತನಾಡಿ, ಅರಣ್ಯ ಭಾಗದಲ್ಲಿರುವ ಅಕ್ರಮ ರೆಸಾರ್ಟ್‌, ಹೋಮ್‌ ಸ್ಟೇಗಳನ್ನ ಬಂದ್‌ ಮಾಡಲು ಕ್ರಮ ಕೈಗೊಳ್ಳಬೇಕು. ಕಾಡು ಪ್ರಾಣಿಗಳ ರಕ್ಷಣೆ ಜೊತೆಗೆ ಆನೆಯಿಂದ ಬೆಳೆ ನಾಶ, ಹುಲಿ ದಾಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಈ ಬಾರಿ ಮನವಿ ಅಲ್ಲ, ಎಚ್ಚರಿಕೆ ಕೊಟ್ಟಿದ್ದೇವೆ, 1 ತಿಂಗಳ ಡೆಡ್‌ಲೈನ್‌ ನೀಡಿದ್ದೇವೆ. ಅಷ್ಟರಲ್ಲಿ ಅಕ್ರಮ ಹೋಮ್‌ ಸ್ಟೇ, ರೆಸಾರ್ಟ್‌ಗಳನ್ನ ತೆರವುಗೊಳಿಸದೇ ಇದ್ರೆ, ನಾವೇ ಧ್ವಂಸ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Mysuru Tiger Attack

ಕಾಡಂಚಿನ ಜನ ಹಸುಗಳಿಗೆ ಸ್ವಲ್ಪ ಹುಲ್ಲಿ, ಸಣ್ಣ ಸೌದೆ ತಂದರೂ 5-10 ವರ್ಷ ಅಂತ ಕೇಸ್‌ ಹಾಕಿ ಒಳಹೆ ಕಳಿಸ್ತಾರೆ. ಆದ್ರೆ ರಾಜಕೀಯ ವ್ಯಕ್ತಿಗಳ ರೆಸಾರ್ಟ್‌ ಇದ್ರೂ ಯಾವುದೇ ಕ್ರಮ ತಗೋತಿಲ್ಲ. ಹಾಗಾಗಿ ಎಚ್ಚರಿಕೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ – 15 ದಿನಗಳಲ್ಲಿ ಮೂರನೇ ಪ್ರಕರಣ

ಅರಣ್ಯಾಧಿಕಾರಿಗಳ ಪ್ರತಿಕ್ರಿಯೆ ಏನು?
ರೈತರಿಂದ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಅರಣ್ಯಾಧಿಕಾರಿಗಳು, ಸಫಾರಿ ಗೈಡ್‌ಗಳ ಬಳಸಿಕೊಂಡು ಊರೂರಿಗೆ ಹೋಗಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ. 1926 ಟೋಲ್‌ ಸಹಾಯವಾಣಿ ಸಹ ಆರಂಭಿಸಿದ್ದೇವೆ. ಬೋನ್‌ಗಳನ್ನು ಇರಿಸಿ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಟ್ರ್ಯಾಪ್‌ ಕ್ಯಾಮೆರಾಗಳನ್ನೂ ಅಳವಡಿಸಿದ್ದೇವೆ, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅಲ್ಲದೇ ರೆಸಾರ್ಟ್‌ ಹೋಮ್‌ ಸ್ಟೇ ಗಳು ಅರಣ್ಯ ವ್ಯಾಪ್ತಿಯಲ್ಲಿ ಇಲ್ಲ. ಕಂದಾಯ ಇಲಾಖೆ ವ್ಯಾಪ್ತಿಯ ಜಾಗದಲ್ಲಿದೆ. ಆದ್ರೂ ಇದನ್ನ ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ಭರವಸೆ ನೀಡಿದ್ದಾರೆ.

TAGGED:farmer's associationfarmersforest departmentmysuruTiger Attackಅರಣ್ಯ ಇಲಾಖೆಮೈಸೂರುರೈತ ಸಂಘರೈತರುಹುಲಿ ದಾಳಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
2 minutes ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
24 minutes ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
27 minutes ago
two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
44 minutes ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
46 minutes ago
Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?