ಆಲಮಟ್ಟಿ ಡ್ಯಾಂ ಹಿನ್ನೀರಿನ ಪ್ರದೇಶದಲ್ಲಿ ಬಂಗಾರದ ಬೆಳೆ ಬೆಳೆದ ರೈತರು

Public TV
1 Min Read
bij

ವಿಜಯಪುರ: ಬರ ಬಂದ್ರೆ ಸಾಕು ಸಾಮಾನ್ಯವಾಗಿ ಎಲ್ಲ ರೈತರು ಬೆಚ್ಚಿ ಬೀಳ್ತಾರೆ. ಆದರೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಬೇನಾಳ ಗ್ರಾಮದ ರೈತರು ಮಾತ್ರ ಆಲಮಟ್ಟಿ ಜಲಾಶಯದ ಹಿನ್ನೀರಿನ ಜಲಾಯನ ಪ್ರದೇಶದಲ್ಲಿ ಬಂಗಾರ ಬೆಳೆ ಬೆಳೆಯುತ್ತಾರೆ.

bij farmers 5

ಜಿಲ್ಲೆಯಾದ್ಯಂತ ಭೀಕರ ಬರದಿಂದ ನಲುಗಿ ಹೋಗಿದೆ. ಆದರೆ ಈ ಗ್ರಾಮದ ಗ್ರಾಮಸ್ಥರು ಮಾತ್ರ ಅದನ್ನೇ ಬಂಡವಾಳ ಮಾಡಿಕೊಂಡು ಲಾಭದ ಬೆಳೆ ಬೆಳೆದಿದ್ದಾರೆ. ಈ ಬಾರಿ ಅವಧಿ ಮುನ್ನವೇ ಆಲಮಟ್ಟಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಖಾಲಿಯಾದ ಜಲಾನಯನ ಪ್ರದೇಶದಲ್ಲಿ ಜೋಳ, ಮೆಕ್ಕೆ ಜೋಳ, ಶೇಂಗಾ ಹಾಗು ವಿವಿಧ ತರಕಾರಿಗಳನ್ನು ಬೆಳೆದಿದ್ದು, ಇಲ್ಲಿಯ ಜಮೀನುಗಳು ಮಾತ್ರ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿವೆ.

bij farmers 7

ನಮ್ಮ ಸಾಕಷ್ಟು ಜಮೀನುಗಳು ಮುಳುಗಡೆಯಾಗಿದ್ದು, ಅವುಗಳು ಬೇಸಿಗೆಯಲ್ಲಿ ಜಲಾಶಯದ ನೀರು ಹಿಂದೆ ಸರಿಯುವುದರಿಂದ ನಮ್ಮ ಜಮೀನುಗಳು ಖಾಲಿಯಾಗುತ್ತವೆ. ಹಾಗಾಗಿ ನಾವು ಜಮೀನುಗಳಲ್ಲಿ ಅಲ್ಪಾವಧಿಯ ಬೆಳೆಗಳನ್ನು ಬೆಳೆಯುತ್ತಿವೆ. ಈ ಭಾರೀ ಬರಗಾಲವಿದ್ದು, ಹಿನ್ನೀರಿನ ಖಾಲಿ ಪ್ರದೇಶ ತೇವಾಂಶದಿಂದ ಕೂಡಿದ್ದು ಅಲ್ಲಿ ಬೆಳೆಗಳನ್ನೂ ಬೆಳೆದು ಕೊಳ್ಳುತ್ತೇವೆ ಎಂದು ರೈತ ರಾಜು ಹೇಳಿದ್ದಾರೆ.

bij farmers 4

ಇನ್ನೂ ಈ ಗ್ರಾಮದಲ್ಲಿ ಕುಡಿಯಲು ನೀರು ಸಹ ಇಲ್ಲ. ಸರ್ಕಾರದಿಂದ ಅಲ್ಲಲ್ಲಿ ಬೋರವೆಲ್‍ಗಳನ್ನು ಕೊರೆದ್ರೂ ಪ್ರಯೋಜನವಾಗಿಲ್ಲ. ಆಲಮಟ್ಟಿ ಜಲಾಶಯದ ಮಡಿಲಿನಲ್ಲಿರುವ ಗ್ರಾಮದಲ್ಲಿ ಮಾತ್ರ ಕುಡಿಯುವ ನೀರಿನ ತೊಂದರೆ ಮಾತ್ರ ತಪ್ಪಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ.

bij farmers 2

bij farmers 3

bij farmers 6

bij farmers 8

bij farmers 1

 

Share This Article
Leave a Comment

Leave a Reply

Your email address will not be published. Required fields are marked *