– ಇನ್ನೂ ನಮ್ಮ ಸಮಸ್ಯೆ ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ವಾ?
ಮೈಸೂರು: ಚುನಾವಣಾ (Lok Sabha Election 2024) ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ (Yathindra Siddaramaiah) ಅವರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ನಂಜನಗೂಡಿನ ಮಲ್ಲುಪುರ ಗ್ರಾಮದಲ್ಲಿ ನಡೆದಿದೆ.
- Advertisement 2
ಚಾಮರಾಜನಗರ (Chamarajanagar) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಯತೀಂದ್ರ ಸಿದ್ದರಾಮಯ್ಯ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ಗ್ರಾಮದಲ್ಲಿರುವ ಸಕ್ಕರೆ ಕಾರ್ಖಾನೆ ಬಳಿ ವಿವಿಧ ಬೇಡಿಕೆ ಈಡೇರಿಸುವಂತೆ ಎರಡು ತಿಂಗಳಿಂದ ರೈತರು ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರು ಯತೀಂದ್ರ ಅವರ ಬಳಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಬೇಡಿಕೆ ಈಡೇರದಿದ್ದರೆ ಮೂರು ಗ್ರಾಮಗಳಿಂದ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ. ಇದನ್ನೂ ಓದಿ: ತಾಲಿಬಾನ್ಗಳ ಪ್ರೇರಣೆ, ನಗರ ನಕ್ಸಲಿಯರ ಸಹಾಯದಿಂದ ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದೆ: ಸಿಟಿ ರವಿ
- Advertisement 3
- Advertisement 4
ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ. ನೀವು ಚುನಾವಣೆಗಾಗಿ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಇಲ್ಲಿಗೆ ಬರುತ್ತಿರಲಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಈ ವಿಚಾರವನ್ನು ನಮ್ಮ ತಂದೆಯವರ ಗಮನಕ್ಕೆ ತರುತ್ತೇನೆ ಎಂದು ಯತೀಂದ್ರ ಹೇಳಿದ್ದಾರೆ. ಈ ವೇಳೆ ರೈತರು, ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವಾ ಎಂದು ಆಕ್ರೋಶದಿಂದ ಪ್ರಶ್ನಿಸಿದ್ದಾರೆ. ಬಳಿಕ ಪ್ರತಿಭಟನಕಾರರಿಗೆ ಉತ್ತರಿಸಲಾಗದೆ ಯತೀಂದ್ರ ವಾಪಸ್ ತೆರಳಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಮುಗಿಯದ ವೈಮನಸ್ಸು- ಪ್ರಚಾರದ ವಿಚಾರದಲ್ಲೂ ಅಡ್ಡಗೋಡೆ ಮೇಲೆ ದೀಪವಿಟ್ಟ ಪ್ರೀತಂ