Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೊಸೈಟಿ ಚುನಾವಣೆಯಲ್ಲಿ ಅನರ್ಹಗೊಳಿಸಿದ್ದನ್ನು ಖಂಡಿಸಿ ರೈತರ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸೊಸೈಟಿ ಚುನಾವಣೆಯಲ್ಲಿ ಅನರ್ಹಗೊಳಿಸಿದ್ದನ್ನು ಖಂಡಿಸಿ ರೈತರ ಪ್ರತಿಭಟನೆ

Districts

ಸೊಸೈಟಿ ಚುನಾವಣೆಯಲ್ಲಿ ಅನರ್ಹಗೊಳಿಸಿದ್ದನ್ನು ಖಂಡಿಸಿ ರೈತರ ಪ್ರತಿಭಟನೆ

Public TV
Last updated: December 24, 2019 12:45 pm
Public TV
Share
3 Min Read
KPL FARMERS PROTEST
SHARE

ಕೊಪ್ಪಳ: ರೈತರಿಗೆ ಆರ್ಥಿಕ ಸಹಕಾರಿಯಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶೇರುದಾರರ ಪೈಕಿ ಶೇ.90ರಷ್ಟು ಸದಸ್ಯರನ್ನ ಅನರ್ಹಗೊಳಿಸಿ, ಅರ್ಹತೆ ಪಟ್ಟಿ ಸಿದ್ದಪಡಿಸಿ ಚುನಾವಣೆ ನಡೆಸಲು ಸಂಘ ಮುಂದಾಗಿದೆ. ಈ ಹಿನ್ನೆಲೆ ಇಡೀ ಗ್ರಾಮಸ್ಥರು ಸಹಕಾರಿ ಸಂಘದ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳದ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ನಡೆದಿದೆ.

ಗುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಈ ಸಂಘದಲ್ಲಿ ಗುಂಡೂರು, ಗುಂಡೂರು ಕ್ಯಾಂಪ್, ಕಾಮಗುಂಡಮ್ಮ ಕ್ಯಾಂಪ್, ತಿಮ್ಮರೇಶ ಕ್ಯಾಂಪ್ ಹಾಗೂ ಲಕ್ಷ್ಮೀ ಕ್ಯಾಂಪ್‍ನ ಸುಮಾರು 1,289 ರೈತ ಸದಸ್ಯರು ಶೇರು ಹೊಂದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಮತದಾನ ಮಾಡಲು ಶೇ 10ರಷ್ಟು ಜನರಿಗೆ ಮಾತ್ರ ಅರ್ಹರು ಎನ್ನುವ ಪಟ್ಟಿಯನ್ನು ಸಂಘ ಬಹಿರಂಗ ಪಡಿಸಿದೆ. ಈ ಹಿನ್ನೆಲೆ ಕ್ಯಾಂಪ್ ಮತ್ತು ಗ್ರಾಮಗಳ ಎಲ್ಲಾ ರೈತ ಶೇರುದಾರರು ಹೋರಾಟ ನಡೆಸಿ, ಸಂಘದಲ್ಲಿ ರಾಜಕೀಯ ನುಸುಳಿ, ಕುತಂತ್ರ ನಡೆದಿದೆ ಎಂದು ಆರೋಪಿಸಿದ್ದಾರೆ.

KPL FARMERS PROTEST 1

ಸೊಸೈಟಿಯ ಚುನಾವಣೆ ಪ್ರಾರಂಭವಾಗುತ್ತದೆ ಎನ್ನುವ ಮುನ್ಸೂಚನೆ ಅರಿತಿದ್ದ ಗ್ರಾಮಸ್ಥರಿಗೆ ಅಸಲಿ ವಿಷಯ ತಿಳಿದಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ನಿಗದಿತ ವೇಳೆ ಪ್ರಾರಂಭವಾಗುತ್ತಿದ್ದಂತೆ ಅರ್ಹತೆ, ಅರ್ನಹತೆ ಬಗ್ಗೆ ಸಂಘದ ನೋಟಿಸ್ ಬೋರ್ಡಿನಲ್ಲಿ ಬಹಿರಂಗಗೊಂಡಿದ್ದರಿಂದ ಸೊಸೈಟಿ ಮುಂದೆ ನೂರಾರು ರೈತರು ಜಮಾಗೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವ ಮತ್ತು ಮತದಾನದ ಹಕ್ಕು ಕಳೆದುಕೊಂಡ ನೂರಾರು ರೈತರು ರಸ್ತೆ ಮಧ್ಯದಲ್ಲಿಯೇ ಕುಳಿತುಕೊಂಡು ಪ್ರತಿಭಟನೆ ನಡೆಸಿದರು. ರೈತರಿಗೆ ಸಹಾಯ, ಸಹಕಾರಕ್ಕೆ ಅನುಕೂಲವಾಗಬೇಕಾಗಿದ್ದ ಸೊಸೈಟಿಯಲ್ಲಿ ರಾಜಕೀಯ ನುಸುಳಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಇಡೀ ಚುನಾವಣೆ ಪ್ರಕ್ರಿಯೆ ಬಹಿಷ್ಕರಿಸಲು ತೀರ್ಮಾನಿಸಿದರು. ಜೊತೆಗೆ ಸೊಸೈಟಿ ಕೇವಲ ವ್ಯವಸ್ಥಿತ ಗುಂಪಿನ ಕಪಿಮುಷ್ಠಿಯೊಳಗೆ ಸೇರುವ ಹುನ್ನಾರವಿದು ಎಂದು ಆತಂಕ ವ್ಯಕ್ತಪಡಿಸಿದರು. ಚುನಾವಣೆ ಪ್ರಕ್ರಿಯೆಯನ್ನು ರದ್ದು ಪಡಿಸಬೇಕು, ಸೊಸೈಟಿಯವರ ಕುತಂತ್ರದಿಂದ ಸಿದ್ಧಪಡಿಸಿದ ಅವೈಜ್ಞಾನಿಕ ಪ್ರಕಟಣೆಯನ್ನು ಸಂಪೂರ್ಣ ರದ್ದುಗೊಳಿಸಿ ಹೊಸ ಪಟ್ಟಿ ತಯಾರು ಮಾಡಿ. ಎಲ್ಲ ರೈತರಿಗೆ ತಮ್ಮ ಹಕ್ಕು ಚಲಾಯಿಸುವಂತೆ ಅವಕಾಶ ಕೊಡಿ ಎಂದು ಒತ್ತಾಯಿಸಿ ಸಹಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಜಿಲ್ಲಾಧಿಕಾರಿಗಳ ಬಳಿ ಗ್ರಾಮಸ್ಥರ ನಿಯೋಗ ತೆರಳಿ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

KPL FARMERS PROTEST 2

ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೂ ಮುನ್ನ ಸಾಲಗಾರರು ಮತ್ತು ಸಾಲಗಾರರಲ್ಲದವರ ಪಟ್ಟಿ ಮಾಡಲಾಗಿದೆ. ಒಟ್ಟು 1,289 ಶೇರುದಾರ ಮತದಾರರು ಇದ್ದಾರೆ. ಅದರಲ್ಲಿ 864 ಜನ ಸಾಲಗಾರರಲ್ಲದ ಕ್ಷೇತ್ರದ ಮತದಾರರು. 485 ಜನರು ಸಾಲಗಾರರ ಕ್ಷೇತ್ರದ ಮತದಾರರು. ಒಟ್ಟು 1,289 ಮತದಾರರು ಈ ಸೊಸೈಟಿಯ ವ್ಯವಹಾರಕ್ಕೆ ಒಳಪಟ್ಟವರಾಗಿದ್ದಾರೆ. ಆದರೆ ಸೊಸೈಟಿ ಆಡಳಿತ ಮಂಡಳಿ ಕೇವಲ 111 ಜನರನ್ನು ಮಾತ್ರ ಚುನಾವಣೆಗೆ ಅರ್ಹರು ಎಂದು ಅಂತಿಮ ಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ ಸಾಲಗಾರರ ಕ್ಷೇತ್ರದ 85 ಮತದಾರರು ಮತ್ತು ಸಾಲಗಾರರಲ್ಲದ 26 ಮಂದಿಯನ್ನು ಸೇರಿಸಿ ಒಟ್ಟು 111 ಜನರನ್ನು ಮಾತ್ರ ಚುನಾವಣೆ ಸ್ಪರ್ಧಿಸಲು ಮತ್ತು ಮತದಾನ ಮಾಡಲು ಸಹಕಾರಿ ಕಾಯ್ದೆ ಅಡಿಯಲ್ಲಿ ಅರ್ಹರನ್ನಾಗಿ ಮಾಡಿದ್ದಾರೆ. ಈ ಗೊಂದಲದ ಹಿನ್ನೆಲೆ ಚುನಾವಣೆಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

KPL FARMERS PROTEST 3

ಇದರಿಂದಾಗ 1,178 ರೈತರು ಎಲ್ಲಾ ಅರ್ಹತೆ ಹಕ್ಕು ಕಳೆದುಕೊಂಡಿದ್ದ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೊಸೈಟಿಯ ಈ ನಡೆಯನ್ನು ಖಂಡಿಸಿ ಗ್ರಾಮಸ್ಥರೆಲ್ಲರೂ ಚುನಾವಣೆ ಬಹಿಷ್ಕರಿಸಲು ಸಿದ್ಧರಾಗಿದ್ದಾರೆ. ಸೊಸೈಟಿಯ ಆಡಳಿತ ಮಂಡಳಿ ತಮಗೆ ಬೇಕಾದವರಿಗೆ ಮಾತ್ರ ಅರ್ಹತೆ ನೀಡಿ ಸರ್ಕಾರದ ನೀತಿ ನಿಯಮಾವಳಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಐದು ವರ್ಷದಲ್ಲಿ ನಮಗೆ ಸಾಮಾನ್ಯ ಸಭೆ ಕುರಿತಾಗಿ ಒಂದು ದಿನವೂ ಸರಿಯಾದ ಮಾಹಿತಿ ನೀಡದೆ ನಮ್ಮನ್ನು ದಾರಿ ತಪ್ಪಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

TAGGED:electionfarmerskoppalaprotestPublic TVSocietyಕೊಪ್ಪಳಚುನಾವಣೆಪಬ್ಲಿಕ್ ಟಿವಿಪ್ರತಿಭಟನೆರೈತರುಸೊಸೈಟಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Cyber Crime
Crime

ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ 21.76 ಲಕ್ಷ ವಂಚನೆ

Public TV
By Public TV
23 minutes ago
Congress MLC Abdul Jabbar
Davanagere

ಯಜಮಾನರು ವೇದಿಕೆ ಮೇಲೆ ಬಿಎಸ್‌ವೈ ಪುತ್ರನನ್ನು ಗೆಲ್ಲಿಸಿ ಅಂದಾಗ ಯಾಕೆ ಕ್ರಮ ಕೈಗೊಂಡಿಲ್ಲ: ಅಮಾನತುಗೊಂಡ ಬೆನ್ನಲ್ಲೇ ಅಬ್ದುಲ್ ಜಬ್ಬರ್ ಆಕ್ರೋಶ

Public TV
By Public TV
25 minutes ago
bulldozer action on maharashtra man accused of sexually assaulting 180 minors
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ – ವಿಕೃತ ಕಾಮುಕನ ಮನೆಗೆ ಬುಲ್ಡೋಜರ್‌ ದಾಳಿ

Public TV
By Public TV
32 minutes ago
yogesh gowda
Bengaluru City

ಯೋಗೇಶ್ ಗೌಡ ಹತ್ಯೆ ಕೇಸ್‌ | ಮಧ್ಯಾಹ್ನ 3 ಗಂಟೆಗೆ ತೀರ್ಪು – ಆರೋಪಿಗಳ ಎದೆಯಲ್ಲಿ ಢವಢವ

Public TV
By Public TV
35 minutes ago
congress mlas ram mandir
Bengaluru City

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್ ಶಾಸಕರು

Public TV
By Public TV
41 minutes ago
AAP Rajya Sabha MP Ashok Mittal
Latest

ಆಪ್ ರಾಜ್ಯಸಭಾ ಸಂಸದ ಅಶೋಕ್ ಮಿತ್ತಲ್ ಮನೆ ಮೇಲೆ ಇ.ಡಿ ದಾಳಿ

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?