Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆ.13ರಂದು ದೆಹಲಿಯಲ್ಲಿ ರೈತರ ಪ್ರತಿಭಟನೆ- ಹರಿಯಾಣದ ಕೆಲವೆಡೆ ಇಂಟರ್ನೆಟ್ ಬ್ಯಾನ್, ಸೆಕ್ಷನ್ 144 ಜಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫೆ.13ರಂದು ದೆಹಲಿಯಲ್ಲಿ ರೈತರ ಪ್ರತಿಭಟನೆ- ಹರಿಯಾಣದ ಕೆಲವೆಡೆ ಇಂಟರ್ನೆಟ್ ಬ್ಯಾನ್, ಸೆಕ್ಷನ್ 144 ಜಾರಿ

Latest

ಫೆ.13ರಂದು ದೆಹಲಿಯಲ್ಲಿ ರೈತರ ಪ್ರತಿಭಟನೆ- ಹರಿಯಾಣದ ಕೆಲವೆಡೆ ಇಂಟರ್ನೆಟ್ ಬ್ಯಾನ್, ಸೆಕ್ಷನ್ 144 ಜಾರಿ

Public TV
Last updated: February 11, 2024 1:09 pm
Public TV
Share
3 Min Read
Farmers Protest Delhi
SHARE

ನವದೆಹಲಿ: ಫೆಬ್ರವರಿ 13ರಂದು ದೆಹಲಿಯಲ್ಲಿ (New Delhi) ರೈತರ ಪ್ರತಿಭಟನೆ (Farmer’s Protest) ಹಿನ್ನೆಲೆ ಹರಿಯಾಣ (Haryana) ಸರ್ಕಾರವು ರಾಜ್ಯದ ಏಳು ಜಿಲ್ಲೆಗಳಾದ ಅಂಬಾಲಾ, ಜಿಂದ್, ಕುರುಕ್ಷೇತ್ರ, ಹಿಸಾರ್, ಕೈತಾಲ್, ಫತೇಹಾಬಾದ್ ಮತ್ತು ಸಿರ್ಸಾದಲ್ಲಿ ಇಂಟರ್ನೆಟ್ ಸೇವೆಗಳನ್ನು (Internet Service) ನಿಷೇಧಿಸಿದೆ. ಅಲ್ಲದೇ ಚಂಡೀಗಢಕ್ಕೆ ಸಮೀಪವಿರುವ ಪಂಚಕುಲದಲ್ಲಿ ಸೆಕ್ಷನ್ 144ನ್ನು (Section 144) ಜಾರಿಗೊಳಿಸಿದೆ.

ಈ ಕುರಿತು ಮಾತನಾಡಿದ ಪಂಚಕುಲ (Panchakula) ಡಿಸಿಪಿ ಸುಮೇರ್ ಸಿಂಗ್ ಪ್ರತಾಪ್, ಪಾದಚಾರಿಗಳು ಅಥವಾ ಟ್ರ‍್ಯಾಕ್ಟರ್ ಟ್ರಾಲಿಗಳು ಮತ್ತು ಇತರ ವಾಹನಗಳಲ್ಲಿ ಯಾವುದೇ ರಾಡ್‌ಗಳು, ಆಯುಧಗಳನ್ನು ಸಾಗಿಸುವಂತಿಲ್ಲ. ಮತ್ತು ರ‍್ಯಾಲಿ, ಪ್ರತಿಭಟನೆಗಳು ಅಥವಾ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಮಲಲ್ಲಾ ದರ್ಶನಕ್ಕೆ ಅಯೋಧ್ಯೆಗೆ ಬಸ್‌ನಲ್ಲಿ ತೆರಳಿದ ಯುಪಿ ಶಾಸಕರು

Farmers Protest Delhi 1

ಫೆಬ್ರವರಿ 13 ರಂದು ರೈತ ಸಂಘಟನೆಗಳು ದೆಹಲಿಗೆ ತಮ್ಮ ಮೆರವಣಿಗೆಯನ್ನು ಘೋಷಿಸಿದ ನಂತರ, ರಾಷ್ಟ್ರ ರಾಜಧಾನಿಯನ್ನು ತಲುಪುವುದನ್ನು ತಡೆಯಲು ಪಂಜಾಬ್-ಹರಿಯಾಣ ಗಡಿ (Punjab-Haryana Border) ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪಂಜಾಬ್-ಹರಿಯಾಣ ಗಡಿಯನ್ನು ಮುಚ್ಚಲಾಗಿದೆ. ಬ್ಯಾರಿಕೇಡ್‌ಗಳು, ಬಂಡೆಗಳು, ಮರಳು ತುಂಬಿದ ಟಿಪ್ಪರ್‌ಗಳು ಮತ್ತು ಮುಳ್ಳುತಂತಿಗಳಿಂದ ಗಡಿಗಳನ್ನು ಮುಚ್ಚಲಾಗಿದೆ. ಇದನ್ನೂ ಓದಿ: ಮದುವೆಯಲ್ಲಿ ಡಿಜೆಗಾಗಿ ಜಗಳ, ಠಾಣೆ ಮೆಟ್ಟಿಲೇರಿದ ಕುಟುಂಬಸ್ಥರು

ಇಂಟರ್ನೆಟ್ ನಿಷೇಧ: ಅಧಿಕೃತ ಆದೇಶದ ಪ್ರಕಾರ, ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 11 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 13 ರಂದು ರಾತ್ರಿ 11.30 ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಇದನ್ನೂ ಓದಿ: ನಿಮ್ಮ ಪೋಷಕರು ನನಗೆ ಮತ ಹಾಕದಿದ್ರೆ 2 ದಿನ ಊಟ ಮಾಡ್ಬೇಡಿ- ಶಾಸಕರ ವಿವಾದಾತ್ಮಕ ಹೇಳಿಕೆ

ಇನ್ನು ಗಡಿಯನ್ನು ಮುಚ್ಚುವುದರ ಜೊತೆಗೆ ಸಂಚಾರ ಸಲಹೆಯನ್ನು ಸಹ ಬಿಡುಗಡೆ ಮಾಡಲಾಗಿದೆ. ಪಂಜಾಬ್ ಮತ್ತು ಹರಿಯಾಣದ ಪ್ರಮುಖ ಮಾರ್ಗಗಳಲ್ಲಿ ಸಂಭವನೀಯ ಟ್ರಾಫಿಕ್ ಅಡೆತಡೆಗಳನ್ನು ನಿರೀಕ್ಷಿಸುವ ಮೂಲಕ ಹರಿಯಾಣ ಪೊಲೀಸರು ಸಂಚಾರ ಸಲಹೆಯನ್ನು ನೀಡಿದ್ದಾರೆ. ಆದರೆ ರಾಜ್ಯದ ಇತರ ಎಲ್ಲ ಮಾರ್ಗಗಳಲ್ಲಿ ಸಂಚಾರ ಮುಂದುವರಿಯಲಿದೆ. ಈ ಸಮಯದಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗದಂತೆ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸುವಂತೆ ಆಡಳಿತ ಮಂಡಳಿ ಜನರಿಗೆ ಮನವಿ ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಆಚಾರ್ಯ ಪ್ರಮೋದ್ ಕೃಷ್ಣಂ ಉಚ್ಛಾಟನೆ- ಕೈ ನಾಯಕ ಹೇಳಿದ್ದೇನು?

ಹರಿಯಾಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ), ಮಮತಾ ಸಿಂಗ್ ಈ ಕುರಿತು ಮಾತನಾಡಿದ್ದು, ಪ್ರಸ್ತುತ ಟ್ರಾಫಿಕ್ ಪರಿಸ್ಥಿತಿಯನ್ನು ತಿಳಿಯಲು, ಹರಿಯಾಣ ಪೊಲೀಸರ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಅನುಸರಿಸಿ. ಅಥವಾ ಹರಿಯಾಣ ಪೊಲೀಸ್ ಫೇಸ್‌ಬುಕ್ ಖಾತೆಯಲ್ಲಿ ತಿಳಿದುಕೊಳ್ಳಬಹುದು. ಯಾವುದೇ ಸಂದರ್ಭದಲ್ಲಾದರೂ 112 ನಂಬರ್ ಅನ್ನು ಸಂಪರ್ಕಿಸಿ ಸಹಾಯ ಪಡೆದುಕೊಳ್ಳಬಹುದು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: 1 ವರ್ಷದಲ್ಲಿ ಚುನಾವಣಾ ಬಾಂಡ್‌ಗಳಿಂದ BJPಗೆ 1,300 ಕೋಟಿ ರೂ. ಗಳಿಕೆ – ಹೆಲಿಕಾಪ್ಟರ್‌ ಬಳಕೆಗೆ 78.2 ಕೋಟಿ ರೂ. ಖರ್ಚು

ಕುರುಕ್ಷೇತ್ರದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಅಲ್ಲದೇ ಆಡಳಿತ ಮಂಡಳಿ ಹರಿಯಾಣ ಪಂಜಾಬ್ ಗಡಿಯನ್ನು ಪೆಹೋವಾ ಗ್ರಾಮದ ತ್ಯುಕರ್‌ನಲ್ಲಿ ಮುಚ್ಚಿದೆ. ಫೆಬ್ರವರಿ 13 ರಂದು ದೆಹಲಿಗೆ ರೈತರ ಮೆರವಣಿಗೆಯಿಂದಾಗಿ ಹರಿಯಾಣ ಆಡಳಿತ ಫುಲ್ ಅಲರ್ಟ್ ಆಗಿದೆ. ಇದನ್ನೂ ಓದಿ: 17ನೇ ಲೋಕಸಭೆಯಲ್ಲಿ 221 ಮಸೂದೆ ಅಂಗೀಕಾರ: ಪ್ರಹ್ಲಾದ್ ಜೋಶಿ

ರೈತರ ಬೇಡಿಕೆಗಳೇನು?: ಎಂಎಸ್‌ಪಿಗೆ ಕಾನೂನು ಖಾತರಿ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ಕೃಷಿ ಸಾಲ ಮನ್ನಾ, ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವುದು, ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಕೊಡಿಸುವುದು ರೈತರ ಪ್ರಮುಖ ಬೇಡಿಕೆಯಾಗಿದೆ. ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ಹಲವು ರೈತ ಸಂಘಟನೆಗಳು ಈ ವಿಷಯವಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿವೆ. ಇದನ್ನೂ ಓದಿ: ಮುಂದಿನ 25 ವರ್ಷಗಳಲ್ಲಿ ‘ವಿಕಸಿತ ಭಾರತ’ ಕನಸು ನನಸಾಗುತ್ತೆ: ಮೋದಿ ಭರವಸೆ

TAGGED:Farmers protestHaryanaInternet serviceNew Delhisection 144ಇಂಟರ್‌ನೆಟ್ ಸೇವೆನವದೆಹಲಿರೈತರ ಪ್ರತಿಭಟನೆಸೆಕ್ಷನ್ 144ಹರಿಯಾಣ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
25 minutes ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
47 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
1 hour ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 hours ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
2 hours ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?