Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾ ಪಡೆದಿರುವ ಜಮೀನಿಗೆ ಬದಲಾಗಿ ರೈತರಿಗೆ 50:50 ಸೈಟ್ ಕೊಡಲೇಬೇಕು: ಜಿಟಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮುಡಾ ಪಡೆದಿರುವ ಜಮೀನಿಗೆ ಬದಲಾಗಿ ರೈತರಿಗೆ 50:50 ಸೈಟ್ ಕೊಡಲೇಬೇಕು: ಜಿಟಿಡಿ

Dakshina Kannada

ಮುಡಾ ಪಡೆದಿರುವ ಜಮೀನಿಗೆ ಬದಲಾಗಿ ರೈತರಿಗೆ 50:50 ಸೈಟ್ ಕೊಡಲೇಬೇಕು: ಜಿಟಿಡಿ

Public TV
Last updated: November 16, 2024 8:30 pm
Public TV
Share
3 Min Read
MUDA Scam GT Devegowda Hits back at HD Kumaraswamys Calls For Siddaramaiahs Resignation Mysuru Dasara
SHARE

ಮಂಗಳೂರು: ಮುಡಾ ಪಡೆದಿರುವ ಜಮೀನಿಗೆ ಬದಲಾಗಿ ರೈತರಿಗೆ 50:50 ಸೈಟ್ ಕೊಡಲೇಬೇಕು ಎಂದು ಶಾಸಕ ಜಿ.ಟಿ ದೇವೇಗೌಡ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ (Mangaluru) ಅವರು ಮಾಧ್ಯಮಗಳೊಂದಿಗೆ  ಮಾತನಾಡಿದರು.  ಈ ವೇಳೆ ಮುಡಾದಲ್ಲಿ ದೇವೇಗೌಡರ ಪ್ರಭಾವ ಬಳಸಿ ಮಹೇಂದ್ರ 19 ಸೈಟ್ ಪಡೆದಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಸ್ನೇಹಮಯಿ ಕೃಷ್ಣ ಬುದ್ಧಿವಂತ, ಅವನಲ್ಲಿ ಶಕ್ತಿ ಇದೆ. ಒಂದು ಎಕರೆ ಭೂಮಿ ಸ್ವಾಧೀನ ಪಡಿಸಿ ದುಡ್ಡಿನ ಪರಿಹಾರ ನೀಡಿದ್ರೆ ಒಂದು ಸೈಟ್ ಕೊಡ್ತಾರೆ. ಆ ಜಮೀನಿಗೆ ಪರಿಹಾರ ಕೊಡದೇ ಇದ್ರೆ 50:50 ನಲ್ಲಿ ಸೈಟ್ ಕೊಡಬೇಕು. ರೈತರ ಜಮೀನಿಗೆ ಇದನ್ನು ಕಾನೂನು ಬದ್ಧವಾಗಿ ಕೊಡಬೇಕು ಎಂದು ಹೇಳಿದರು. ಇದನ್ನೂ ಓದಿ: ಬೈಡನ್ ರೀತಿ ಮೋದಿ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

ಮುಡಾ ಪಡೆದಿರುವ ಜಮೀನಿಗೆ 50:50 ಸೈಟ್ ಕೊಡಲೇಬೇಕು. ಕೊಡುವ ಪ್ರಕ್ರಿಯೆಯಲ್ಲಿ ತಪ್ಪಾಗಿದ್ರೆ ಶಿಕ್ಷೆ ಅನುಭವಿಸುತ್ತಾರೆ. ನನ್ನ ಸಂಬಂಧಿಯೇ ಆಗಲಿ, ಯಾರೇ ಆಗಲಿ ಶಿಕ್ಷೆಯಾಗಬೇಕು. ಭೂಮಿ ನೀಡಿದ ರೈತನಿಗೆ 50:50ನಲ್ಲಿ ಸೈಟ್ ಕೊಡಲೇಬೇಕು. ಹೀಗೆ ಮಾಡುವ ಸಂದರ್ಭದಲ್ಲಿ ಕೆಲವು ನ್ಯೂನತೆಗಳಾಗಿದೆ. ರೈತರಿಗೆ ಅಧಿಕೃತವಾಗಿ 50:50 ಕೊಡೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ. 50:50 ಕೊಡೋದ್ರಲ್ಲಿ ದುರುಪಯೋಗ ಆಗಿದ್ರೆ ಅವರಿಗೆ ಶಿಕ್ಷೆಯಾಗಬೇಕು. ಕಾನೂನು ಉಲ್ಲಂಘನೆ ಆಗಿದ್ರೆ ಎಲ್ಲರಿಗೂ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

snehamayi krishna

ವಿರೋಧ ಪಕ್ಷದ ನಾಯಕನ ಆಯ್ಕೆ ಸಂದರ್ಭದಲ್ಲಿ ಕೋರ್ ಕಮಿಟಿ ಮೀಟಿಂಗ್ ಕರೆದಿದ್ದರು. ನಾನೂ ಪಬ್ಲಿಕ್ ಅಕೌಂಟ್ಸ್ ಕಮಿಟಿ ಟೂರ್ ಹೋಗಿದ್ದೆ. ಆ ಸಂದರ್ಭದಲ್ಲಿ ಮೀಟಿಂಗ್ ಕರೆದು ನನ್ನ ಬಿಟ್ಟು ನಾಯಕನ ಆಯ್ಕೆ ಮಾಡಿದ್ರು. ನಿಖಿಲ್ ಕುಮಾರಸ್ವಾಮಿ ಮೈಸೂರಿಗೆ ಬಂದಾಗ ಕರೆದಿದ್ದರು. ಆ ಸಭೆಯಲ್ಲಿ ನಾನು ಭಾಗವಹಿಸಿದ್ದೆ. ಅಲ್ಲಿ ಸಾ.ರಾ ಮಹೇಶ್ ಇನ್ನು ಎಚ್.ಡಿ ಕುಮಾರಸ್ವಾಮಿ, ಎಚ್.ಡಿ ದೇವೆಗೌಡ್ರು ಇಲ್ಲ. ಇನ್ನು ನಾನೇ ಬಿ.ಫಾರಂ ಕೊಡೋದೆಂದು ಭಾಷಣ ಮಾಡಿದ್ದರು. ಆಗ ನಿಖಿಲ್ ಕುಮಾರಸ್ವಾಮಿ ಬಂದು ಕ್ಷಮಿಸಿ ತಪ್ಪಾಗಿ ಭಾಷಣ ಮಾಡಿದ್ದಾರೆ ಎಂದು ಹೇಳಿದರು. ನಾನು ಪಕ್ಷ ಕಟ್ಟುವ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇನೆ. ಯಾಕೇ ನನ್ನನ್ನು ಬಿಟ್ಟಿದ್ದಾರೆಂದು ಅವರೇ ಹೇಳಬೇಕು ಎಂದು ಹೇಳಿದರು. ಇದನ್ನೂ ಓದಿ: ತಿಮ್ಮಸಂದ್ರ ವಕ್ಫ್‌ ಆಸ್ತಿ ಪ್ರಕರಣ – ರೈತರಿಗೆ ಭೂಮಿ ಮಂಜೂರು ಆಗಿರೋ ದಾಖಲೆಗಳಿಲ್ಲ ಎಂದ ಡಿಸಿ

ಚನ್ನಪಟ್ಟಣ (Channapatna) ಉಪಚುನಾವಣಾ ಪ್ರಚಾರದಲ್ಲಿ ತಾವು ಹೊರಗುಳಿದಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾರು ಸಹ ನನ್ನನ್ನು ಚುನಾವಣೆಗೆ ಬನ್ನಿ ಎಂದು ಕರೆದಿಲ್ಲ. ಕೋರ್ ಕಮಿಟಿ ಅಧ್ಯಕ್ಷನಾಗಿದ್ದರು ಸಹ ಪ್ರಚಾರದ ಪಟ್ಟಿಯಿಂದ ನನ್ನ ಹೆಸರನ್ನು ತೆಗೆದಿದ್ದಾರೆ. ದೂರವಾಣಿ ಮೂಲಕನೂ ನನ್ನ ಕರೆದಿಲ್ಲ, ಹಾಗಾಗಿ ನಾನು ಭಾಗವಹಿಸಿಲ್ಲ. ಕೋರ್ ಕಮಿಟಿ ಅಧ್ಯಕ್ಷನನ್ನು ಬಿಟ್ಟೇ ಮೀಟಿಂಗ್ ಮಾಡಿದ್ದಾರೆ. ಯಾಕಾಗಿ ಈ ರೀತಿ ಮಾಡಿದ್ದಾರೆಂದು ಅವರೇ ಹೇಳಬೇಕು. ಚಾಮುಂಡಿ ಬೆಟ್ಟದಲ್ಲಿ ಅಂತದ್ದೇನು ತಪ್ಪು ಮಾತನಾಡಿಲ್ಲ. ಸಿದ್ದರಾಮಯ್ಯನವರು 135 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿದ್ದಾರೆ. ಎಚ್.ಡಿ ಕುಮಾರಸ್ವಾಮಿ 2ಲಕ್ಷ ಲೀಡ್‌ನಲ್ಲಿ ಗೆದ್ದು ಎಂಪಿ ಆಗಿದ್ದಾರೆ. ಅಶೋಕ್ ಅವರು ಗೆದ್ದು ವಿರೋಧ ಪಕ್ಷದ ನಾಯಕರಾಗಿದ್ದಾರೆ ಎಂದು ತಿಳಿಸಿದರು.

ಕೇಂದ್ರದಲ್ಲೂ ಕೆಲವರ ಮೇಲೆ ಎಫ್‌ಐಆರ್ ಆಗಿದೆ. ಇಲ್ಲಿ ಯಾರ ಮೇಲೆ ಎಫ್ಐಆರ್ ಆಗಿದೆ ಎಂದು ಗೊತ್ತು. ನ್ಯಾಯಾಲಯದ ತೀರ್ಪು ಬಂದು ತಪ್ಪಿತಸ್ಥ ಅಂದ ಮೇಲೆ ಅವರಿಗೆ ಶಿಕ್ಷೆ ಆಗುತ್ತೋ, ರಾಜೀನಾಮೆ ಕೊಡಬೇಕೋ, ಜೈಲಿಗೆ ಹಾಕಬೇಕೋ ಅದನ್ನ ಮಾಡಬೇಕು. ಅದು ಬಿಟ್ಟು ಕಾಂಗ್ರೆಸ್ ಮಂತ್ರಿಗಳು ಪ್ರತೀ ದಿವಸ ಕುಮಾರಸ್ವಾಮಿ ರಾಜೀನಾಮೆ ಕೊಡಿ ಎಂದು ಕೇಳೋದು, ಬಿಜೆಪಿ ದಳದವರು ಸೇರಿ ಸಿದ್ದರಾಮಯ್ಯ (Siddaramaih) ರಾಜೀನಾಮೆ ಕೊಡಿ ಎಂದು ಕೇಳೋದು ಇದು ಯಾವುದು ಸರಿಯಲ್ಲ. ನ್ಯಾಯಾಲಯದ ತೀರ್ಪು ಬರುವವರೆಗೆ ಯಾರು ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಕೊಟ್ರೆ ಇಡೀ ವಿಧಾನಸೌಧದಲ್ಲಿರುವ 75% ಶೇಕಡಾ ರಾಜೀನಾಮೆ ಕೊಡಬೇಕಾಗುತ್ತದೆ. ಕೇಂದ್ರ ರಾಜ್ಯದಲ್ಲಿ ಬಹಳಷ್ಟು ಜನ ಇದ್ದಾರೆ. ಇಷ್ಟು ಹೇಳಿದ್ದೆ ದೊಡ್ಡ ಅಪರಾಧ ಎಂದು ತಿಳ್ಕೊಂಡ್ರೆ ನಾನೇನು ಮಾಡೋಕೆ ಆಗುತ್ತೆ ಇಷ್ಟು ಹೇಳಿದ್ದೆ ದೊಡ್ಡ ಅಪರಾಧ ಅಂತಾ ತಿಳ್ಕೊಂಡ್ರೆ ನಾನೇನು ಮಾಡೋಕೆ ಆಗುತ್ತೆ ಎಂದು ಹರಿಹಾಯ್ದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ 2,021 ಬಿಪಿಎಲ್ ಕಾರ್ಡುಗಳು ಎಪಿಎಲ್‌ಗೆ ಮಾರ್ಪಾಡು

ಕೇಂದ್ರ ಸಚಿವ ಕುಮಾರಸ್ವಾಮಿ (HDKumaraswamy) ಅವರನ್ನು ಕರಿಯಾ ಎಂದು ಸಚಿವ ಜಮೀರ್ ಹೇಳಿಕೆ ವಿಚಾರ ಪ್ರತಿಕ್ರಿಯೆ ನೀಡಿ, ಜಮೀರ್ ಕುಮಾಸ್ವಾಮಿಗೆ ಆ ರೀತಿ ಮಾತನಾಡಬಾರದಿತ್ತು ಎಂಬ ಅರಿವಾಗಿದೆ ಹೀಗಾಗಿ ಕ್ಷಮೆಯನ್ನು ಸಹ ಕೇಳಿದ್ದಾರೆ. ಯಾವುದೇ ವ್ಯಕ್ತಿ ಸಚಿವರಾದ ಮೇಲೆ ಆ ಸಚಿವ ಸ್ಥಾನದ ಗೌರವವನ್ನು ಕಾಪಾಡೋದು ಅವರೆಲ್ಲರ ಕರ್ತವ್ಯ ಯಾರೂ ಕೂಡಾ ಆ ರೀತಿ ಮಾತನಾಡಬಾರದು ಎಂದರು. ಇದನ್ನೂ ಓದಿ: ಸಚಿವ ಕೆ.ಜೆ ಜಾರ್ಜ್ ಪುತ್ರನ ಅರಣ್ಯದೊಳಗಿನ ಜಮೀನಿಗೆ ದಾರಿ ಬಂದ್‌ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

TAGGED:dakshina kannadafarmersG.T DevegowdaMangaluruMUDA Scamಎಚ್ ಡಿ ಕುಮಾರಸ್ವಾಮಿಚನ್ನಪಟ್ಟಣಜಿ.ಟಿ.ದೇವೇಗೌಡಮಂಗಳೂರುಮುಡಾ
Share This Article
Facebook Whatsapp Whatsapp Telegram

Cinema news

Toxic Teaser
Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!
Bollywood Cinema Latest Main Post Sandalwood
yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories

You Might Also Like

Siddaramaiah HC Balakrishna
Districts

ಈ ರಾಜ್ಯಕ್ಕೆ ಸಿದ್ದರಾಮಯ್ಯನವರ ಅವಶ್ಯಕತೆ ಇದೆ: ಹೆಚ್‌ಸಿ ಬಾಲಕೃಷ್ಣ

Public TV
By Public TV
6 minutes ago
Zameer Ahmed Khan
Bengaluru City

161 ಮನೆ ನೆಲಸಮ ಆಗಿದೆ, 26 ಜನಕ್ಕೆ ಇವತ್ತೇ ಮನೆ ಕೊಡಬಹುದು: ಜಮೀರ್

Public TV
By Public TV
26 minutes ago
IED neutralised
Latest

ರಾಜೌರಿಯಲ್ಲಿ 4 Kg ಐಇಡಿ ನಿಷ್ಕ್ರಿಯ – ಭಯೋತ್ಪಾದಕರ ಸಂಜು ವಿಫಲ, ತಪ್ಪಿದ ಅನಾಹುತ

Public TV
By Public TV
37 minutes ago
Santosh Lad
Dharwad

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಹರಿದುಕೊಂಡಿದ್ದಾಳೆ: ಸಂತೋಷ್ ಲಾಡ್

Public TV
By Public TV
51 minutes ago
Traffic Police
Districts

ಸಹ ಸಿಬ್ಬಂದಿಯಿಂದ ಕಿರುಕುಳ – ಸಂಚಾರ ಪೊಲೀಸ್‌ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

Public TV
By Public TV
1 hour ago
Chikkaballapura Devanahalli Train Rams On Hand
Chikkaballapur

ರೈಲು ಹರಿದು ಕೈ ಕಟ್ – ಗಾಂಜಾ ಮತ್ತಿನಲ್ಲಿ ಚಿಕಿತ್ಸೆ ಬೇಡ ಅಂತ ಓಡಿದ ಭೂಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?