ಬೆಂಗಳೂರು: ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ (BJP) ಆಳ್ವಿಕೆಯಲ್ಲಿ ರೈತರ ಸಂಕಷ್ಟ ಡಬಲ್ ಆಗಿದೆ. ರೈತರ ಆತ್ಮಹತ್ಯೆ ಡಬಲ್ ಆಗಿದೆ, ರೈತರ ಖರ್ಚು ಡಬಲ್ ಆಗಿದೆ ಎಂದು ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ (Congress) ವಾಗ್ದಾಳಿ ನಡೆಸಿದೆ.
ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ ಆಳ್ವಿಕೆಯಲ್ಲಿ ರೈತರ ಸಂಕಷ್ಟ ಡಬಲ್ ಆಗಿದೆ,
ರೈತರ ಆತ್ಮಹತ್ಯೆ ಡಬಲ್ ಆಗಿದೆ,
ರೈತರ ಖರ್ಚು ಡಬಲ್ ಆಗಿದೆ.
ರೈತ ಮುಖಂಡರು, ಸಾಲಬಾದೆ, ಬೆಳೆ ನಷ್ಟಗಳಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಸ್ಥರೊಂದಿಗೆ @RahulGandhi ಅವರು ಸಂವಾದ ನಡೆಸಿ, ಅವರ ನೋವು ಆಲಿಸಿದರು.#BharatJodoYatra pic.twitter.com/k3xohqqUXn
— Karnataka Congress (@INCKarnataka) October 6, 2022
ಟ್ವೀಟ್ನಲ್ಲೇನಿದೆ?
ಮಂಗಳೂರಿನ ದಸರಾ ಆಚರಣೆಯಲ್ಲಿ ಯುಪಿ ಮಾಡೆಲ್ ಬುಲ್ಡೋಜರ್ ಬಿಂಬಿಸುವ ಟ್ಯಾಬ್ಲೋ ಮೆರವಣಿಗೆ. ಕರ್ನಾಟಕದಲ್ಲಿ ಯುಪಿ ಮಾದರಿಯ ಅರಾಜಕತೆ ಸೃಷ್ಟಿಸಲು ಬಿಜೆಪಿ ಯತ್ನಿಸಿದೆ. ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ವಿಕೃತಿ ಮೆರೆದ ಬಿಜೆಪಿ. ನಮ್ಮದು ಸಂವಿಧಾನಿಕ ನ್ಯಾಯ. ಬಿಜೆಪಿಯದ್ದು ಬುಲ್ಡೋಜರ್ ನ್ಯಾಯ. ಇದನ್ನೂ ಓದಿ: ರಾಹುಲ್ ಗಾಂಧಿ ತಲೆ ರೈಲ್ವೇ ಹಳಿ ಇದ್ದಂತೆ: ಸಿ.ಸಿ ಪಾಟೀಲ್ ವ್ಯಂಗ್ಯ
ಮಂಗಳೂರಿನ ದಸರಾ ಆಚರಣೆಯಲ್ಲಿ ಯುಪಿ ಮಾಡೆಲ್ ಬುಲ್ಡೋಜರ್ ಬಿಂಬಿಸುವ ಟ್ಯಾಬ್ಲೋ ಮೆರವಣಿಗೆ. ಕರ್ನಾಟಕದಲ್ಲಿ ಯುಪಿ ಮಾದರಿಯ ಅರಾಜಕತೆ ಸೃಷ್ಟಿಸಲು ಬಿಜೆಪಿ ಯತ್ನ.
ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ವಿಕೃತಿ ಮೆರೆದ ಬಿಜೆಪಿ.
ನಮ್ಮದು ಸಂವಿಧಾನಿಕ ನ್ಯಾಯ. ಬಿಜೆಪಿಯದ್ದು ಬುಲ್ಡೋಜರ್ ನ್ಯಾಯ. @DgpKarnataka @JnanendraAraga pic.twitter.com/Q7VTOIZjjG
— Karnataka Congress (@INCKarnataka) October 6, 2022
ತಮ್ಮ ಹತಾಶೆ, ಸೋಲು, ನೋವುಗಳನ್ನು ಜಾಹಿರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ. ಒಂದೇ ವಾರದಲ್ಲಿ ಎರಡೆರೆಡು ಭಾರಿ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡುತ್ತಿರುವ ಬಿಜೆಪಿಯ ಹತಾಶೆ ಹಿಮಾಲಯದೆತ್ತರಕ್ಕೆ ಏರಿದೆ. ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದೊಂದೆ ಬಾಕಿ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ.
ತಮ್ಮ ಹತಾಶೆ, ಸೋಲು, ನೋವುಗಳನ್ನು ಜಾಹಿರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ @BJP4Karnataka!
ಒಂದೇ ವಾರದಲ್ಲಿ ಎರಡೆರೆಡು ಭಾರಿ ಪತ್ರಿಕೆಗಳಲ್ಲಿ ಮುಖಪುಟದ ಜಾಹಿರಾತು ನೀಡುತ್ತಿರುವ ಬಿಜೆಪಿಯ ಹತಾಶೆ ಹಿಮಾಲಯದೆತ್ತರಕ್ಕೆ ಏರಿದೆ,
ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದೊಂದೆ ಬಾಕಿ!#BharatJodoYatra
— Karnataka Congress (@INCKarnataka) October 6, 2022