Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಕಬ್ಬು ಬೆಳೆಯುವ ಉತ್ಸಾಹ – 20 ವರ್ಷಗಳಿಂದ ಮುಚ್ಚಿದ ಸಕ್ಕರೆ ಫ್ಯಾಕ್ಟರಿಯನ್ನು ತೆರೆಯಲು ಸರ್ಕಾರದ ಬೆನ್ನತ್ತಿದ ರೈತರು

Public TV
Last updated: October 26, 2023 7:13 pm
Public TV
Share
2 Min Read
Chitradurga Hiriyur Sugar Factory
SHARE

ಚಿತ್ರದುರ್ಗ: ಅದೊಂದು ಬರದ ನಾಡು. ಅಲ್ಲಿನ ಜನರು ಹನಿನೀರಿಗೂ ಪರದಾಡುತ್ತಿದ್ದರು. ಆದರೆ ವಾಣಿವಿಲಾಸ ಸಾಗರ ಜಲಾಶಯ (Vanivilasa Reservoir) ಭರ್ತಿಯಾಗಿರೋ ಹಿನ್ನೆಲೆ ಅಲ್ಲಿನ ರೈತರಲ್ಲಿ ಕಬ್ಬು (Sugarcane) ಬೆಳೆಯುವ ಉತ್ಸಾಹ ಮೂಡಿದೆ. ಹೀಗಾಗಿ ಮುಚ್ಚಿರೋ ಶುಗರ್ ಫ್ಯಾಕ್ಟರಿಯನ್ನು (Sugar Factory) ಆರಂಭಿಸುವಂತೆ ರೈತರು ಸರ್ಕಾರದ ಬೆನ್ನತ್ತಿದ್ದಾರೆ.

ವರ್ಷಗಳಿಂದ ಮುಚ್ಚಿರೋ ಸಕ್ಕರೆ ಕಾರ್ಖಾನೆ, ಸ್ವಚ್ಛತೆಯೇ ಕಾಣದೆ ಮುಳ್ಳಿನ ಗಿಡ ಬೆಳೆದ ಕಾರ್ಖಾನೆ ಆವರಣ. ಈ ದೃಶ್ಯಗಳಿಗೆ ಸಾಕ್ಷಿಯಾಗಿದ್ದು ಕೋಟೆನಾಡು ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿನ ವಾಣಿವಿಲಾಸ ಸಕ್ಕರೆ ಕಾರ್ಖಾನೆ. 1976 ರಲ್ಲಿ ಈ ಭಾಗದ ರೈತರ ಕೈ ಬಲಪಡಿಸಲು ಸರ್ಕಾರ ಸಕ್ಕರೆ ಕಾರ್ಖಾನೆ ಆರಂಭಿಸಿತ್ತು. ಆದರೆ ಕಬ್ಬು ಪೂರೈಸಲಾಗದೇ 2002 ರಲ್ಲಿ ಮುಚ್ಚಲಾಯಿತು. ಅಂದಿನಿಂದ ಇಂದಿನವರೆಗೆ ಈ ಭಾಗದಲ್ಲಿ ಕಬ್ಬು ಬೆಳೆಯಲ್ಲವೆಂಬ ನೆಪವೊಡ್ಡಿ ಈ ಕಾರ್ಖಾನೆ ಆರಂಭಿಸಲು ಸರ್ಕಾರ ಮುಂದಾಗಿಲ್ಲ. ಹೀಗಾಗಿ ಈ ಭಾಗದ ರೈತರು ಸತತ 10 ವರ್ಷಗಳಿಂದ ಯಾವುದೇ ಬೆಳೆ ಬೆಳೆದರೂ, ತೀವ್ರ ನಷ್ಟ ಅನುಭವಿಸಿ ಸುಸ್ತಾಗಿದ್ದಾರೆ.

Chitradurga Hiriyur Sugar Factory 1

ದಾಳಿಂಬೆ, ಅಡಿಕೆ ಸೇರಿದಂತೆ ಇತರ ಬೆಳೆಗಳು ರೈತರ ಕೈ ಸುಟ್ಟು, ಕೋಟೆನಾಡಿನ ರೈತರನ್ನು ಸಾಲದ ಸುಳಿಗೆ ಸಿಲುಕಿಸಿದೆ. ಇಂತಹ ವೇಳೆ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನಲೆಯಲ್ಲಿ ರೈತರಲ್ಲಿ ಕಬ್ಬು ಬೆಳೆಯುವ ಉತ್ಸಾಹ ಮೂಡಿದೆ. ಆದ್ದರಿಂದ ಸರ್ಕಾರವು ಸಕ್ಕರೆ ಕಾರ್ಖಾನೆಯನ್ನು ಮತ್ತೆ ಆರಂಭಿಸಿ, ಈ ಭಾಗದ ರೈತರನ್ನು ಸಂಕಷ್ಟದಿಂದ ಪಾರು ಮಾಡುವಂತೆ ಒತ್ತಾಯಿಸಿದ್ದಾರೆ.

Chitradurga Hiriyur Sugar Factory vanivilasa Reservoir

ಇನ್ನು ರೈತರ ಒತ್ತಡಕ್ಕೆ ಮಣಿದಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಶೀಘ್ರದಲ್ಲೇ ಹಿರಿಯೂರಿನ ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭಕ್ಕೆ ತಜ್ಞರ ಸಮಿತಿ ರಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ಸರ್ಕಾರ ಬದಲಾದ ಪರಿಣಾಮ ಆ ಆಶ್ವಾಸನೆ ಈಡೇರಿಲ್ಲ. ಅಲ್ಲದೇ ಈ ಭಾಗದಲ್ಲಿ ಬಹುತೇಕ ಜನರು ಕೂಲಿ ಕಾರ್ಮಿಕರಿದ್ದು, ಪ್ರತಿವರ್ಷ ಉದ್ಯೋಗ ಅರಸಿ, ವಿವಿಧೆಡೆಗೆ ಹೋಗುತ್ತಾರೆ. ಆದ್ದರಿಂದ ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಸಕ್ಕರೆ ಕಾರ್ಖಾನೆ ರೀ ಓಪನ್ ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದೆಹಲಿ ವಾಯು ಮಾಲಿನ್ಯಕ್ಕೆ ಮೂಲ ಗೊತ್ತಿಲ್ಲ – ಆಪ್ ಸಚಿವೆ ವಿವಾದ್ಮಕ ಹೇಳಿಕೆ

ವಾಣಿವಿಲಾಸ ಸಾಗರ ಭರ್ತಿಯಾಗಿ ನೀರು ಭೋರ್ಗರೆಯುತ್ತಿರುವ ಪರಿಣಾಮ ಹಿರಿಯೂರಿನ ರೈತರು ಕಬ್ಬು ಬೆಳೆಯುವ ಉತ್ಸಾಹದಲ್ಲಿದ್ದಾರೆ. ಹೀಗಾಗಿ ಇಲ್ಲಿನ ರೈತರ ಬವಣೆ ನೀಗಿಸಲು ಸಕ್ಕರೆ ಕಾರ್ಖಾನೆಯನ್ನು ಸರ್ಕಾರ ಪುನರ್ ಆರಂಭಿಸಿದರೆ ಕೋಟೆನಾಡಿನ ಅನ್ನದಾತರಿಗೆ ಅನುಕೂಲವಾಗಲಿದೆ. ಇದನ್ನೂ ಓದಿ: ನಕಲಿ ಹುಲಿ ಉಗುರು ಧರಿಸದಂತೆ ಈಶ್ವರ್ ಖಂಡ್ರೆ ಮನವಿ – ಸರ್ಕಾರಕ್ಕೆ ಮರಳಿಸಲು ಅವಕಾಶಕ್ಕೆ ಚಿಂತನೆ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್

TAGGED:ಕಬ್ಬುಚಿತ್ರದುರ್ಗಸಕ್ಕರೆ ಕಾರ್ಖಾನೆ
Share This Article
Facebook Whatsapp Whatsapp Telegram

You Might Also Like

HD Kumaraswamy 1
Bengaluru City

ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

Public TV
By Public TV
15 minutes ago
Mumbai Rain
Latest

ಮುಂಬೈ, ಪುಣೆಯಲ್ಲಿ ಇಂದು ಭಾರೀ ಮಳೆ ಸಾಧ್ಯತೆ – IMD

Public TV
By Public TV
26 minutes ago
spicejet
Latest

ತಿರುಪತಿಗೆ ಹೊರಟಿದ್ದ ವಿಮಾನ ವಾಪಸ್‌ – ಹೈದರಾಬಾದ್‌ನಲ್ಲಿ ಯೂಟರ್ನ್‌ ಹೊಡೆದ ಸ್ಪೈಸ್‌ಜೆಟ್‌ ಫ್ಲೈಟ್‌

Public TV
By Public TV
27 minutes ago
kamal haasan supreme court
Court

Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

Public TV
By Public TV
32 minutes ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ – ನ್ಯಾ.ವರ್ಮಾ ವಜಾಗೆ ಸುಪ್ರೀಂ ಸಮಿತಿ ಶಿಫಾರಸು

Public TV
By Public TV
38 minutes ago
Rajinikanth Jailer 2 Shah Rukh Khan
Cinema

ರಜನಿಕಾಂತ್ ನಟನೆಯ ‘ಜೈಲರ್ 2’ ಚಿತ್ರದಲ್ಲಿ ಶಾರುಖ್ ಖಾನ್?

Public TV
By Public TV
39 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?