Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಬ್ಬು ಬೆಳೆ ಬೆಲೆ ನಿಗದಿಗೆ ಆಗ್ರಹ – ಕಟ್ಟೆಯೊಡೆದ ರೈತರ ಕಿಚ್ಚು; ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಬ್ಬು ಬೆಳೆ ಬೆಲೆ ನಿಗದಿಗೆ ಆಗ್ರಹ – ಕಟ್ಟೆಯೊಡೆದ ರೈತರ ಕಿಚ್ಚು; ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ

Belgaum

ಕಬ್ಬು ಬೆಳೆ ಬೆಲೆ ನಿಗದಿಗೆ ಆಗ್ರಹ – ಕಟ್ಟೆಯೊಡೆದ ರೈತರ ಕಿಚ್ಚು; ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ

Public TV
Last updated: November 4, 2025 4:35 pm
Public TV
Share
3 Min Read
Farmers 4 2
SHARE

– 6ನೇ ದಿನಕ್ಕೆ ಕಾಲಿಟ್ಟ ಹೋರಾಟ; ರೈತರಿಗೆ ವಿಜಯೇಂದ್ರ ಸಾಥ್‌

ಬೆಳಗಾವಿ/ಬಾಗಲಕೋಟೆ: ಕಬ್ಬು ದರ ನಿಗದಿ ಮತ್ತು ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿಯ ರೈತರ ಪ್ರತಿಭಟನೆ (Farmers Protest) ತೀವ್ರ ಸ್ವರೂಪ ಪಡೆದಿದೆ. ಜಿಲ್ಲೆಯ ಅಥಣಿಯಲ್ಲಿ ರೈತರು, ಕನ್ನಡಪರ ಸಂಘಟನೆಗಳ ಬೆಂಬಲದೊಂದಿಗೆ ಬಂದ್‌ಗೆ ಕರೆ ನೀಡಿದ್ದಾರೆ. ಬೆಳಗಾವಿಯ (Belagavi) ಅಥಣಿ, ಚಿಕ್ಕೋಡಿ, ಗುರ್ಲಾಪುರ, ಜಾಂಬೋಟಿ, ಗೋಕಾಕ್ ಸೇರಿದಂತೆ ವಿವಿಧ ಕಡೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಅಂಗಡಿ ಮಳಿಗೆಗಳು ಸ್ವಯಂಪ್ರೇರಿತವಾಗಿ ಮುಚ್ಚಲ್ಪಟ್ಟಿವೆ. ಗೋಕಾಕ್-ಅಥಣಿ ರಸ್ತೆ, ದರೂರ ಹಲ್ಯಾಳ ಸೇತುವೆ ಮೆಲೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

Farmers 4 1

ಇನ್ನೂ, ಕಬ್ಬಿನ (Sugarcane Crop) ಬೆಲೆ ನಿಗದಿಗೆ ಆಗ್ರಹಿಸಿ ಇಂದು ಹುಕ್ಕೇರಿ ಪಟ್ಟಣ ಬಂದ ಕರೆ ನೀಡಲಾಗಿತ್ತು. ರೈತ ಸಂಘಟನೆಗಳಿಂದ ಬಂದ್ ಕರೆ ನೀಡಲಾಗಿದ್ದು ರೈತ ಸಂಘಟನೆಗೆ ವಿವಿಧ ಸಂಘಟನೆಗಳ ಬೆಂಬಲ ನೀಡಿವೆ. ಬಂದ್ ಕರೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಹುಕ್ಕೇರಿ ಪಟ್ಟಣದ ಅಡವಿಸಿದ್ದೇಶ್ವರ ಮಠದಿಂದ ಕೋರ್ಟ ವೃತ್ತದ ವರೆಗೆ ಪ್ರತಿಭಟನಾ ರ‍್ಯಾಲಿ ನಡೆದಿದ್ದು ರ‍್ಯಾಲಿ ಬಳಿಕ ಹೆದ್ದಾರಿ ಬಂದ್ ಮಾಡಿ ಅಹೋರಾತ್ರಿ ಧರಣಿ ಜೋರಾಗಿದೆ. ಹೆದ್ದಾರಿ ಬಂದ್ ಮಾಡಿರುವ ಕಾರಣ ಪರ್ಯಾಯ ಮಾರ್ಗಗಳ ಮೂಲಕ ವಾಹನ ಸಂಚಾರಕ್ಕೆ ಪೊಲೀಸರು ವ್ಯವಸ್ಥೆ ಕಲ್ಪಿಸಿದ್ದಾರೆ. ಇನ್ನೂ ಬಂದ್ ಹಿನ್ನೆಲೆಯಲ್ಲಿ ರೈತರು ಒತ್ತಾಯ ಪೂರ್ವಕವಾಗಿ ಅಂಗಡಿ ಹಾಗೂ ರಸ್ತೆಗಳನ್ನ ಬಂದ್ ಮಾಡಿಸಿದ್ದಾರೆ. ಬ್ಯಾರಿಕೇಡ್ ಹಾಗೂ ಜೆಸಿಬಿ ಅಳವಡಿಸಿ ರೈತರು ರಸ್ತೆ ಬಂದ್ ಮಾಡಿಸಿದ್ದಾರೆ.

BY Vijayendra

ರೈತರ ಪ್ರತಿಭಟನೆಗೆ ವಿಜಯೇಂದ್ರ ಸಾಥ್‌
ಶಿವಯೋಗಿ ವೃತ್ತದಲ್ಲಿ ಜತ್ತ ಜಂಬೋಟಿ- ಸಂಕೇಶ್ವರ ಜೇವರ್ಗಿ ರಾಜ್ಯ ಹೆದ್ದಾರಿ ತಡೆದು ನೂರಕ್ಕೂ ಹೆಚ್ಚು ರೈತರು ಪ್ರತಿಭಟನೆ ಮಾಡಿದ್ರು. ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಆಗಮಿಸಿ ಪ್ರತಿಭಟನಾ ನಿರತ ರೈತರಿಗೆ ಸಾಥ್ ನೀಡಿದರು. ಬಾಗಲಕೋಟೆ-ನಿಪ್ಪಾಣಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಯುತ್ತಿದ್ದು, 1 ಟನ್ ಕಬ್ಬಿಗೆ 3,500 ರೂಪಾಯಿ ದರ ನಿಗದಿಗೆ ರೈತರು ಒತ್ತಾಯಿಸಿದ್ರು. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸರ್ಕಾರದ ವಿರುದ್ಧ ಕಿಡಿಕಾರಿದ್ರು.

Farmers 2 1

ರೈತರು ಇಂದು ಸಂಕಷ್ಟದಲ್ಲಿದ್ದಾರೆ. ಭೀಕರ ಮಳೆಯಿಂದ ತೊಂದರೆಗಿಡಾದಾಗ ಉಸ್ತುವಾರಿ ಸಚಿವರು, ಕಂದಾಯ ಸಚಿವರು ಯಾರೊಬ್ಬರು ಉತ್ತರ ಕರ್ನಾಟಕ ಪ್ರವಾಸ ಮಾಡಲಿಲ್ಲ. ರೈತರು ಇಂದು ಮತ್ತೆ ಬೀದಿಗಿಳಿದು ಹೋರಾಟ ಮಾಡ್ತಿದ್ದಾರೆ. ಸರ್ಕಾರ ಕಿಂಚಿತ್ತೂ ತಲೆಕಡೆಸಿಕೊಳ್ತಿಲ್ಲ, ಸಂಜೆ ವರೆಗೂ ಸಮಯ ನೀಡಲಾಗುತ್ತೆ. ಸರ್ಕಾರ ಸರಿಯಾಗಿ ಸ್ಪಂದಿಸದಿದ್ದರೆ, ಉಗ್ರ ಹೋರಾಟ ಫಿಕ್ಸ್ ಎಂದ್ರು.

ಇತ್ತ ಸಿ.ಟಿ ರವಿ ಮಾತನಾಡಿ, ಸಕ್ಕರೆ ಕಾರ್ಖಾನೆಗಳು ಕಾಂಗ್ರೆಸ್‌ನವರದ್ದೂ ಇದೆ, ಬಿಜೆಪಿಯವರದ್ದೂ ಇದೆ, ಬೆರಳೆಣಿಕೆ ಮಾಲೀಕರ ಹಿತಾಸಕ್ತಿ ಮುಖ್ಯ ಅಲ್ಲ. ನಮ್ಮ ಧನಿ ಮಾಲೀಕರ ಪರ ಇರಬಾರದು, ರೈತರ ಪರ ಇರಬೇಕು. ರೈತರ ತಾಳ್ಮೆ ಕಟ್ಟೆ ಒಡೆಯುವ ಮುನ್ನ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ರೈತರಿಗೂ.. ಮಾಲೀಕರಿಗೂ ಅನ್ಯಾಯವಾಗಬಾರದು
ಇನ್ನು, ಇದೇ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್‌ ಮಾತನಾಡಿ, ಕಬ್ಬಿಗೆ ಬೆಲೆ ನಿಗದಿ ಮಾಡಿ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ. ಆ ಭಾಗದ ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸುವ ವಿಶ್ವಾಸ ಇದೆ ಎಂದ್ರು. ಇತ್ತ ಸತೀಶ್ ಜಾರಕಿಹೊಳಿ ಕೂಡ ರಿಯಾಕ್ಟ್ ಮಾಡಿದ್ದು, ಡಿಸಿ ಅವರು ರೈತರ ಜೊತರ ನಿರಂತರ ಸಂಪರ್ಕದಲ್ಲಿ ಇದ್ದಾರೆ. ಅವಶ್ಯಕತೆ ಬಿದ್ದರೆ ನಾವು ಹೋಗಿ ಭೇಟಿ ಮಾಡುತ್ತೇವೆ. ನಮ್ಮ ಪರವಾಗಿ ಡಿಸಿ ಅವರು ಭೇಟಿ ಮಾಡುತ್ತಿದ್ದಾರೆ ಎಂದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾತನಾಡಿ, ರೈತರಿಗೂ ಅನ್ಯಾಯ ಆಗಬಾರದು, ಮಾಲೀಕರಿಗೂ ಅನ್ಯಾಯ ಆಗಬಾರದು, ಈಗಾಗಲೇ ಎರಡು ಬಾರಿ ಮೀಟಿಂಗ್ ಆಗಿವೆ. ನಾನು ಬ್ಯುಸಿ ಇದ್ದ ಕಾರಣ ಮೀಟಿಂಗ್‌ನಲ್ಲಿ ಇರಲಿಲ್ಲ. ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ. ಕುಳಿತು ಸಮಸ್ಯೆ ಬಗ್ಗೆ ಚರ್ಚಿಸಿ. ಪರಿಹಾರಕ್ಕೆ ಪ್ಲಾನ್ ರೂಪಿಸಲಾಗುವುದು ಎಂದ್ರು.

TAGGED:bagalkotebelagavibjpBY VijayendracongressFarmers protestsugarcane cropಕಬ್ಬು ಬೆಳೆಕಾಂಗ್ರೆಸ್ಚಿಕ್ಕೋಡಿಬಾಗಲಕೋಟೆಬಿ.ವೈ.ವಿಜಯೇಂದ್ರಬಿಜೆಪಿಬೆಳಗಾವಿರೈತರ ಪ್ರತಿಭಟನೆ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Lieutenant General Retired Syed Ata Hasnain Takes Oath as bihar governor
Latest

ಬಿಹಾರದ ನೂತನ ರಾಜ್ಯಪಾಲರಾಗಿ ಲೆ.ಸಯ್ಯದ್ ಅತಾ ಹಸ್ನೈನ್ ಪ್ರಮಾಣವಚನ

Public TV
By Public TV
29 minutes ago
Dog squad searches for those who set fire to Muthodi forest in Chikkamagaluru
Chikkamagaluru

ಚಿಕ್ಕಮಗಳೂರು | ಮುತ್ತೋಡಿ ಅರಣ್ಯಕ್ಕೆ ಬೆಂಕಿ ಇಟ್ಟವರ ಶೋಧಕ್ಕಿಳಿದ ಶ್ವಾನದಳ

Public TV
By Public TV
46 minutes ago
Hyderabad Woman HIV Positive Injection
Crime

ಮದುವೆಯಾಗಲು ನಿರಾಕರಿಸಿದ ಯುವತಿಗೆ HIV ಪಾಸಿಟಿವ್ ಇಂಜೆಕ್ಷನ್ ನೀಡಿದ ಯುವಕ

Public TV
By Public TV
2 hours ago
asha nath
Latest

ಉಡುಪಿ ಕೃಷ್ಣ ಮಠಕ್ಕೆ ತಿರುವನಂತಪುರಂ ಬಿಜೆಪಿ ಉಪಮೇಯರ್ ಭೇಟಿ

Public TV
By Public TV
2 hours ago
Abu Dhabi Police
Crime

ಯುಎಇಯಲ್ಲಿ ಇರಾನ್ ದಾಳಿ ವೀಡಿಯೋ ಮಾಡಿದ್ರೆ ಅರೆಸ್ಟ್‌ – ಇಲ್ಲಿವರೆಗೂ 45 ಮಂದಿ ಅಂದರ್‌

Public TV
By Public TV
2 hours ago
R Ashok
Bengaluru City

ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?