Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೌರವದಿಂದ ಬಾಳಿ ಬದುಕೋಣ, ದಾಳಿ ನಿಲ್ಲಿಸಿ – ಪಾಕಿಸ್ತಾನಕ್ಕೆ ಫಾರೂಕ್‌ ಅಬ್ದುಲ್ಲಾ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗೌರವದಿಂದ ಬಾಳಿ ಬದುಕೋಣ, ದಾಳಿ ನಿಲ್ಲಿಸಿ – ಪಾಕಿಸ್ತಾನಕ್ಕೆ ಫಾರೂಕ್‌ ಅಬ್ದುಲ್ಲಾ ಮನವಿ

Latest

ಗೌರವದಿಂದ ಬಾಳಿ ಬದುಕೋಣ, ದಾಳಿ ನಿಲ್ಲಿಸಿ – ಪಾಕಿಸ್ತಾನಕ್ಕೆ ಫಾರೂಕ್‌ ಅಬ್ದುಲ್ಲಾ ಮನವಿ

Public TV
Last updated: October 21, 2024 7:48 pm
Public TV
Share
3 Min Read
farooq abdullah And omar abdullah
SHARE

– ಬುದ್ಗಾಮ್‌ ಕ್ಷೇತ್ರ ತ್ಯಜಿಸಿದ ಜಮ್ಮು & ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu-Kashmir) ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ 6 ಮಂದಿ ವಲಸೆ ಕಾರ್ಮಿಕರು ಮತ್ತು ವೈದ್ಯರೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿರುವ ಘಟನೆ ಒಂದು ದಿನದ ಹಿಂದೆಯಷ್ಟೇ ನಡೆದಿದೆ. ಈ ಘಟನೆಯನ್ನು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ (Farooq Abdullah) ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಜೀವನಕ್ಕಾಗಿ ಕಷ್ಟಪಟ್ಟು ದುಡಿಯುವ ಬಡ ಕಾರ್ಮಿಕರು ಮತ್ತು ಒಬ್ಬ ವೈದ್ಯರು ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ದಾಳಿಯಿಂದ ಭಯೋತ್ಪಾದಕರು (Terror Attack) ಏನನ್ನು ಸಾಧಿಸುತ್ತಾರೆ? ಇಂತಹ ದಾಳಿಗಳಿಂದ ಪಾಕಿಸ್ತಾನವನ್ನು ಇಲ್ಲಿ ಸೃಷ್ಟಿಸಬಹುದು ಎಂದು ಭಾವಿಸುತ್ತಾರೆಯೇ? ದಾಳಿಗಳು ನಡೆದ ಮಾತ್ರಕ್ಕೆ ಕಾಶ್ಮೀರ ಪಾಕಿಸ್ತಾನ ಆಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ

india pakistan

ಜಮ್ಮು ಮತ್ತು ಕಾಶ್ಮೀರ (Jammu and Kashmir) ಹಲವು ವರ್ಷಗಳಿಂದ ಉಗ್ರರ ದಾಳಿಗೆ ಸಾಕ್ಷಿಯಾಗಿದೆ. ಇದನ್ನು ಯಾವಾಗ ಕೊನೆಗೊಳಿಸಬಹುದು ಎಂಬುದರ ಕುರಿತು ಅನೇಕ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ. ಪಾಕಿಸ್ತಾನ ಭಾರತದೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಲು ಉತ್ಸುಕವಾಗಿದ್ದರೆ, ಇಂತಹ ದಾಳಿಗಳನ್ನು ನಿಲ್ಲಿಸಬೇಕು. ಏಕೆಂದರೆ ಇದು ಭಯೋತ್ಪಾದನೆಯನ್ನು ಕೊನೆಗೊಳಿಸುವ ಸಮಯ. ಅಮಾಯಕರ ಹತ್ಯೆಯಿಂದ ಮಾತುಕತೆ ಹೇಗೆ ಸಾಧ್ಯ? ಇಂತಹ ಭಯೋತ್ಪಾದಕ ದಾಳಿಗಳು ನಮ್ಮೆಲರ ಮೇಲೆ ಪರಿಣಾಮ ಬೀರುತ್ತದೆ. ಪಾಕಿಸ್ತಾನಕ್ಕೆ ಈಗಲೂ ಹೇಳುತ್ತಿದ್ದೇನೆ ಇಂತಹ ದಾಳಿಗಳನ್ನು ನಿಲ್ಲಿಸಿ, ಗೌರವದಿಂದ ಬಾಳಿ ಬದುಕೋಣ ಎಂದು ಮನವಿ ಮಾಡಿದ್ದಾರೆ.

Farooq Abdullah

ವಲಸೆ ಕಾರ್ಮಿಕರ ಹತ್ಯೆಯನ್ನು ಉಗ್ರರ ದಾಳಿ ಎಂದ ಸಿಎಂ:
ಈ ಘಟನೆಯನ್ನು ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್‌ ಅಬ್ದುಲ್ಲಾ (Omar Abdullah)  ʻಉಗ್ರರ ದಾಳಿʼ ಕರೆದಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ J&K ಸಿಎಂ, ಸೋನಾಮಾರ್ಗ್ ಪ್ರದೇಶದ ಗಗಾನ್‌ಗೀರ್‌ನಲ್ಲಿ ಸ್ಥಳೀಯರಲ್ಲದ ವಲಸೆ ಕಾರ್ಮಿಕರ ಮೇಲೆ ಉಗ್ರರ ಭೀಕರ ಮತ್ತು ಹೇಡಿತನದ ದಾಳಿಯ ಅತ್ಯಂತ ದುಃಖದ ಸುದ್ದಿ. ಉಗ್ರರ ದಾಳಿಯಲ್ಲಿ ಕೆಲವರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ. ನಿರಾಯುಧ ಮುಗ್ಧ ಜನರ ಮೇಲಿನ ದಾಳಿಉನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅವರ ಕುಟುಂಬಕ್ಕೆ ನನ್ನ ಸಂತಾಪ ತಿಳಿಸುತ್ತೇನೆ. ಇನ್ನೂ ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶೀಘ್ರವೇ ಅವರು ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುವುದಾಗಿ ಬರೆದುಕೊಂಡಿದ್ದಾರೆ.

JAMMU KASHMIR PAK TERRORIST ATTACK

ಒಮಾರ್‌ ಅಬ್ದುಲ್ಲಾ ಅವರ ಹೇಳಿಕೆಗೆ ಸೋಶಿಯಲ್‌ ಮೀಡಿಯಾದಲ್ಲಿ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರು ʻಭಯೋತ್ಪಾದಕರುʼ ಅನ್ನುವ ಬದಲಿಗೆ, ಉಗ್ರರು ಎಂಬ ಪದವನ್ನು ಏಕೆ ಆಯ್ಕೆ ಮಾಡಕೊಂಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಪಿಡಿಪಿ ಮುಖ್ಯಸ್ಥೆ ಮಹಬೂಬಾ ಮುಫ್ತಿ ಸಹ ಇದಕ್ಕೆ ಆಕ್ಷೇಪ ವ್ಯಕ್ತಪಸಿದ್ದಾರೆ. ಇದನ್ನೂ ಓದಿ: ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ | ಕಾಯ್ದೆ ತಿದ್ದುಪಡಿ ಮಾಡಿ ಕಠಿಣ ಕ್ರಮಕ್ಕೆ ಚಿಂತನೆ : ರಾಮ್ ಮೋಹನ್ ನಾಯ್ಡು

ಬಡ್‌ಗಾಂವ್ ಕ್ಷೇತ್ರಕ್ಕೆ ಒಮರ್ ಅಬ್ದುಲ್ಲಾ ಗುಡ್‌ಬೈ:
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ಸೋಮವಾರ ಬುದ್ಗಾಮ್ ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಭದ್ರಕೋಟೆಯಾಗಿರುವ ಗಂದರ್‌ಬಾಲ್ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

Omar Abdullah

ದಶಕದ ನಂತರ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಮರ್‌ ಅಬ್ದುಲ್ಲಾ, ಗಂದರ್‌ಬಲ್ ಮತ್ತು ಬುದ್ಗಾಮ್ ಎರಡೂ ಕ್ಷೇತ್ರಗಳಲ್ಲೂ ಪ್ರತಿನಿಧಿಸಿ ಗೆದ್ದಿದ್ದರು. ಗಂದರ್‌ಬಲ್‌ನಲ್ಲಿ ಪಿಡಿಪಿಯ ಬಶೀರ್ ಅಹ್ಮದ್ ಮಿರ್ ಅವರನ್ನು 10,000ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದರು. ಬುದ್ಗಾಮ್‌ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿ ಮೀರ್ ವಿರುದ್ಧ 10,574 ಮತಗಳ ಅಂತರದಿಂದ ಗೆದ್ದಿದ್ದರು. ಇದೀಗ ಭದ್ರಕೋಟೆಯನ್ನು ಉಳಿಸಿಕೊಂಡು ಬುದ್ಗಾಮ್‌ ಕ್ಷೇತ್ರಕ್ಕೆ ಗುಡ್‌ಬೈ ಹೇಳಿದ್ದಾರೆ. ಇದನ್ನೂ ಓದಿ: ಕೌರವರನ್ನು ಶಕುನಿ ಮುಗಿಸಿದಂತೆ ಸಿದ್ದರಾಮಯ್ಯರನ್ನು ಬೈರತಿ ಸುರೇಶ್‌ ಮುಗಿಸುತ್ತಿದ್ದಾರೆ: ಕರಂದ್ಲಾಜೆ

TAGGED:Farooq AbdullahindiaJammu and KashmirOmar abdullahpakistanTerror attackಉಗ್ರರ ದಾಳಿಒಮರ್ ಅಬ್ದುಲ್ಲಾಜಮ್ಮು ಮತ್ತು ಕಾಶ್ಮೀರಪಾಕಿಸ್ತಾನಫಾರೂಕ್ ಅಬ್ದುಲ್ಲಾ
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

01 4
Belgaum

Video | ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಪುಟ ಅಸ್ತು!

Public TV
By Public TV
3 hours ago
RCB Team
Bengaluru City

IPL 2026 | ಗುಡ್‌ನ್ಯೂಸ್‌; ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಕ್ರಿಕೆಟ್‌ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌

Public TV
By Public TV
3 hours ago
Tilak Varma
Cricket

ಕಳಪೆ ಬೌಲಿಂಗ್‌ – ಭಾರತಕ್ಕೆ ಹೀನಾಯ ಸೋಲು, ಆಫ್ರಿಕಾಗೆ 51 ರನ್‌ಗಳ ಭರ್ಜರಿ ಗೆಲುವು

Public TV
By Public TV
3 hours ago
Chinnaswamy Stadium
Bengaluru City

IPL 2026 | RCB ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಗುತ್ತಾ? – ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಮತ್ತೆ ಮ್ಯಾಚ್ ನಡೆಯುತ್ತಾ?

Public TV
By Public TV
4 hours ago
Dinesh Gundu Rao
Belgaum

ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್

Public TV
By Public TV
4 hours ago
Cotton 2
Districts

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ – ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಭಸ್ಮ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?