ನೀರಿನಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಿ ಪ್ರಾಣಬಿಟ್ಟ ತಂದೆ

Public TV
1 Min Read
MND FATHER DEATH

ಮಂಡ್ಯ: ನೀರಿನಲ್ಲಿ ಮುಳುಗುತ್ತಿದ್ದ ಒಂದು ವರ್ಷದ ಮಗನನ್ನು ರಕ್ಷಿಸಿ ತಂದೆ ಪ್ರಾಣಬಿಟ್ಟಿರುವ ಮನಕಲಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರೇಶ್ವರ ಗ್ರಾಮದ ಕೆರೆಯಲ್ಲಿ ಈ ಘಟನೆ ಸಂಭವಿಸಿದೆ. ಫಿರೋಜ್ ಮಗನನ್ನು ರಕ್ಷಿಸಲು ಹೋಗಿ ಮೃತಪಟ್ಟಿದ್ದಾರೆ.

ಫಿರೋಜ್ ಪತ್ನಿ ಜಬಿನ್ ತಾಜ್ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದರು. ಬಟ್ಟೆ ತೊಳೆಯುವ ಸಮಯದಲ್ಲಿ ಜಬಿನ್ ತಾಜ್ ಜೊತೆಯಲ್ಲಿ ಪತಿ ಫಿರೋಜ್ ಮತ್ತು ಒಂದು ವರ್ಷದ ಮಗ ಇದ್ದರು. ಈ ವೇಳೆ ಆಕಸ್ಮಿಕವಾಗಿ ಮಗ ನೀರಿಗೆ ಬಿದ್ದಿದ್ದಾನೆ. ಆಗ ಮಗನನ್ನು ರಕ್ಷಿಸಲು ಫಿರೋಜ್ ನೀರಿಗಿಳಿದಿದ್ದಾರೆ. ನಂತರ ಮಗನನ್ನು ರಕ್ಷಿಸಿದ್ದಾರೆ. ಆದರೆ ಸರಿಯಾಗಿ ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

MND 2

ನಂತರ ಸ್ಥಳದಲ್ಲಿದ್ದವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಬಂದು ಕಾರ್ಯಚರಣೆ ಮಾಡಿ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ಇನ್ನು ನೀರಿನಲ್ಲಿ ಮುಳುಗಿದ್ದ ಮಗ ಅಸ್ವಸ್ಥನಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ನಾಗಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *