ರಾಯಚೂರು: 2ನೇ ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಪಾಪಿ ತಂದೆಯೊಬ್ಬ 14 ತಿಂಗಳ ತನ್ನ ಹಸುಗೂಸನ್ನು ಕೊಂದಿರುವ ಘಟನೆ ರಾಯಚೂರು (Raicur) ಜಿಲ್ಲೆಯ ಲಿಂಗಸುಗೂರು (Lingasur) ತಾಲೂಕಿನ ಕನಸಾವಿ ಗ್ರಾಮದಲ್ಲಿ ನಡೆದಿದೆ.
14 ತಿಂಗಳ ಅಭಿನವ್ ಪಾಪಿ ತಂದೆಯ ಕೈಯಲ್ಲೇ ಪ್ರಾಣ ಬಿಟ್ಟ ನತದೃಷ್ಟ ಮಗು. ತನ್ನ ಮಗುವನ್ನೇ ಕೊಂದು 3 ದಿನ ಕಲ್ಲಿನ ಅಡಿಯಲ್ಲಿ ಮುಚ್ಚಿಟ್ಟ ಪಾಪಿ ತಂದೆ ಮಹಾಂತೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಮದುವೆಯಾಗುವ ಆಸೆಯಿಂದ ಮಗುವನ್ನು ಕೊಂದು ಕಲ್ಲಿನ ಅಡಿಯಲ್ಲಿ 3 ದಿನ ಮುಚ್ಚಿಟ್ಟಿದ್ದ ಆರೋಪಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ.
ಪರ ಪುರುಷನೊಂದಿಗೆ ಪತ್ನಿ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಅನುಮಾನ ಹೊಂದಿದ್ದ ಮಹಾಂತೇಶ್ ಮತ್ತೊಂದು ಮದುವೆಗೆ ತಯಾರಿ ನಡೆಸಿದ್ದ. ಮರು ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: 2.5 ಕೋಟಿ ರೂ.ಗೆ ಬೇಡಿಕೆ, ಕೊಡದಿದ್ದರೆ ಎನ್ಕೌಂಟರ್ ಬೆದರಿಕೆ – 9 ಪೊಲೀಸರು ಅರೆಸ್ಟ್
ಅನುಮಾನದ ಮೇಲೆ ಪೊಲೀಸರು ಹಂತಕ ತಂದೆಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಮೊದಲು ಮಗುವನ್ನು ಸುಟ್ಟು ಹಾಕಿರುವುದಾಗಿ ಮಾಹಿತಿ ನೀಡಿದ್ದ. ಬಳಿಕ ಕಲ್ಲಿನ ಅಡಿ ಮುಚ್ಚಿಟ್ಟ ಮಗುವನ್ನು ತೋರಿಸಿದ್ದಾನೆ. ಘಟನೆ ಹಿನ್ನೆಲೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೈದಿಗಳಿಗೆ ಸೇಬು, ಮೂಸಂಬಿ ಹಣ್ಣಿನಲ್ಲಿ ಗಾಂಜಾ ಸಪ್ಲೈ – ಮೂವರು ಅರೆಸ್ಟ್
Web Stories