ಹೈದರಾಬಾದ್: ಮಗಳು ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾಳೆ ಎಂದು ಶಂಕಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ತಂದೆಯೇ ಹತ್ಯೆಗೈದಿರುವ ಘಟನೆ ತೆಲಂಗಾಣದ (Telangana) ವನಪರ್ತಿಯಲ್ಲಿ (Wanaparthy)ನಡೆದಿದೆ.
ಆರೋಪಿಯನ್ನು ರಾಜಶೇಖರ್ ಎಂದು ಗುರುತಿಸಲಾಗಿದ್ದು, ಮಗಳು ಗೀತಾ(15) ಮೃತ ದುರ್ದೈವಿಯಾಗಿದ್ದಾಳೆ. ಬೇರೆ ಹುಡುಗರೊಂದಿಗೆ ಮಾತನಾಡಬೇಡ ಎಂದರೂ, ಗ್ರಾಮದ ಕೆಲ ಹುಡುಗರೊಂದಿಗೆ ಮಾತನಾಡುತ್ತಿದ್ದಳು ಎಂದು ರಾಜಶೇಖರ್ ಆರೋಪಿಸಿದ್ದಾನೆ. ಇದನ್ನೂ ಓದಿ: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್
ಪೆಬ್ಬೇರು ಮಂಡಲದ (Pebberu Mandal) ಪಾತಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಗಳು ಪ್ರೀತಿಸುತ್ತಿದ್ದ ವಿಚಾರ ತಿಳಿದ ರಾಜಶೇಖರ್ ಕುಟುಂಬದ ಮರ್ಯಾದೆಗೆ ಹಾನಿಯಾಗುತ್ತದೆ ಎಂದು ಗೀತಾಳಿಗೆ ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಕೇಳದ ಕಾರಣ ಮಗಳನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ್ಳು!
ಈ ಘಟನೆ ಸಂಬಂಧ ಪ್ರತಿಕ್ರಿಯಿಸಿದ ವನಪರ್ತಿ ಪೊಲೀಸ್ ವರಿಷ್ಠಾಧಿಕಾರಿ ಕೆ ಅಪೂರ್ವ ಅವರು, ತಮ್ಮ ಹಳ್ಳಿಯಲ್ಲಿರುವ ಕೆಲವು ಯುವಕರೊಂದಿಗೆ ಮಾತನಾಡುವುದನ್ನು ನೋಡಿದ ಬಾಲಕಿಯ ತಂದೆ ಆಕೆ ಅವರಲ್ಲಿ ಒಬ್ಬರನ್ನು ಪ್ರೀತಿಸುತ್ತಿದ್ದಾಳೆ ಎಂಬ ಅನುಮಾನ ಹೊಂದಿದ್ದನು. ಇದರಿಂದ ಕೋಪಗೊಂಡು ಬಾಲಕಿಯನ್ನು ತಂದೆಯೇ ಕೊಲೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಇದೀಗ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು, ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಘಟನೆ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ.