Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್: ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್: ರೇಣುಕಾಚಾರ್ಯ

Districts

ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್: ರೇಣುಕಾಚಾರ್ಯ

Public TV
Last updated: December 19, 2021 10:19 pm
Public TV
Share
3 Min Read
renukacharya 1
SHARE

ಶಿವಮೊಗ್ಗ: ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್, ಕೈ ಪಕ್ಷಕ್ಕೆ ಮತ್ತೊಂದು ಹೆಸರೇ ಭ್ರಷ್ಟಾಚಾರ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

1200px Flag of the Indian National Congress.svg

ಬಿಜೆಪಿ 40% ಕಮಿಷನ್ ಸರ್ಕಾರ ಆರೋಪ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಆರೋಪದ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಭ್ರಷ್ಟಾಚಾರ ಹುಟ್ಟು ಹಾಕಿದ್ದೆ ಕಾಂಗ್ರೆಸ್, ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್, ಕೈ ಪಕ್ಷಕ್ಕೆ ಮತ್ತೊಂದು ಹೆಸರೇ ಭ್ರಷ್ಟಾಚಾರ. ಅವರ ಒಳ ಜಗಳ, ಗುಂಪುಗಾರಿಕೆಯಿಂದ ಕಾಂಗ್ರೆಸ್ ಸಂಪೂರ್ಣ ನಶಿಸಿ ಹೋಗಿದೆ. ಅದನ್ನು ಮರೆ ಮಾಚುವ ಸಲುವಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಉಪಯೋಗಿ ಅಲ್ಲ, ನಿರುಪಯೋಗಿ: ಮೋದಿ ಬಣ್ಣನೆಗೆ ಅಖಿಲೇಶ್‌ ಯಾದವ್‌ ಲೇವಡಿ

sangolli rayanna 2 1 ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟದ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಈ ಘಟನೆಯನ್ನು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಖಂಡಿಸುತ್ತದೆ. ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಇದೇ ರೀತಿ ನಿಮ್ಮ ಪುಂಡಾಟಿಕೆ ಮಾಡಿದರೆ, ಕನ್ನಡಿಗರಿಗೆ ತಾಳ್ಮೆ, ಸಂಸ್ಕೃತಿ, ಸಂಸ್ಕಾರ ಇದೆ. ಇದನ್ನು ಮೀರಿದರೆ ಬೇರೆ ರೀತಿ ಉತ್ತರ ಕೊಡಬೇಕಾಗುತ್ತದೆ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿಕೃತಿಸಿದವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

Siddaramaiah Byrati Basavaraj

ಸಚಿವ ಭೈರತಿ ಬಸವರಾಜ್ ಭೂಮಿ ಖರೀದಿಯ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬಸವರಾಜ್ ಅವರು 19 ವರ್ಷದ ಹಿಂದೆ ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರೇ ಈ ಹಿಂದೆ ಈ ಪ್ರಕರಣಕ್ಕೆ ಬಿ-ರಿಪೋರ್ಟ್ ಹಾಕಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಸಚಿವರುಗಳನ್ನ ಅವರು ಟಾರ್ಗೆಟ್ ಮಾಡುತ್ತಿದ್ದಾರೆ ಎಂದರು.

siddaramaia dk shivakumar

ಬಿಜೆಪಿ ಸೇರಿರುವವರನ್ನು ವಾಪಸ್ ಕಾಂಗ್ರೆಸ್ ಗೆ ಕರೆತರುವ ಸಲುವಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಈ ರೀತಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವವರು ಯಾವುದೇ ಕಾರಣಕ್ಕೂ ಅವರು ವಾಪಸ್ ಹೋಗುವುದಿಲ್ಲ. ಬಿಜೆಪಿಯ ತತ್ವ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೇರಿದ್ದಾರೆ. ಶಾಸಕರಾಗಿ, ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಡಿದರು. ಇದನ್ನೂ ಓದಿ: ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ

DK RAVI SIDDARAMAIAH

ಡಿ.ಕೆ.ರವಿ ಕೇಸ್ ಏನಾಯ್ತು, ಡಿವೈಎಸ್ ಪಿ ಗಣಪತಿ ಅವರು ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡರು. ಆ ಕೇಸ್ ಏನಾಯ್ತು? ಈ ಪ್ರಕರಣದಲ್ಲಿ ಸಾಕ್ಷ್ಯವನ್ನು ಸಂಪೂರ್ಣವಾಗಿ ನಾಶ ಮಾಡಿ ಸಿಬಿಐಗೆ ವಹಿಸಿದರು. ನಿಮ್ಮ ದೌರ್ಜನ್ಯ, ಭ್ರಷ್ಟಾಚಾರದಿಂದ ಎಷ್ಟೋ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು. ನಿಮ್ಮ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ನುಡಿದರು.

BJP 2ಗುತ್ತಿಗೆದಾರರ ಭ್ರಷ್ಟ ಸರ್ಕಾರ ಆರೋಪದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗುತ್ತಿಗೆದಾರರು ದಾಖಲೆ ಬಿಡುಗಡೆ ಮಾಡಲಿ. ನಮ್ಮ ಸರ್ಕಾರ ಇದ್ದಾಗ ಪಾರದರ್ಶಕ ಆಡಳಿತ ಕೊಟ್ಟಿದ್ದು, ಮುಂದೆಯೂ ಕೊಡುತ್ತೇವೆ. 2023ಕ್ಕೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಉತ್ತರ ಕರ್ನಾಟಕದ ವಿರೋಧಿಗಳು, ರೈತರ ವಿರೋಧಿಗಳು. ಅಧಿವೇಶನದಲ್ಲಿ ರೈತರ ಜ್ವಲಂತ ಸಮಸ್ಯೆ ಬಗ್ಗೆ ಚರ್ಚೆ ಮಾಡಬೇಕಿತ್ತು. ಅದರ ಬದಲಾಗಿ ನೀವು ಧರಣಿ ಮಾಡುತ್ತೀರಿ, ಬಾವಿಗಿಳಿದು ಪ್ರತಿಭಟನೆ ಮಾಡ್ತೀರಿ ಅಂದರೆ ನಿಮಗೆ ರೈತರ ಬಗ್ಗೆ ಕಾಳಜಿ ಇಲ್ಲ. ನಾಳೆ ಅಧಿವೇಶನದಲ್ಲಿ ಏನು ಮಾತನಾಡ್ತಾರೋ, ಅದಕ್ಕೆ ತಕ್ಕ ಉತ್ತರ ನಾವು ಕೊಡುತ್ತೇವೆ ಎಂದು ತಿರುಗೇಟು ನೀಡಿದರು.

ಸಿ.ಟಿ.ರವಿ ವಿರುದ್ಧ ಡಿಕೆಶಿ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ ಆತ್ಮಾವಲೋಕನ ಮಾಡಿಕೊಳ್ಳಲಿ. ಅವರ ಮೇಲೆ ಏನೇನು ಆರೋಪ ಇದೆ ಅಂತಾ ಆತ್ಮಾವಲೋಕನ ಮಾಡಿಕೊಂಡ ಮತ್ತೊಬ್ಬರ ಬಗ್ಗೆ ಮಾತನಾಡಿಕೊಳ್ಳಲಿ ಎಂದು ನುಡಿದರು.

ct ravi

 

ಶಾಸಕ ಯತ್ನಾಳ್ ಅವರು ತನಗೆ ಗೃಹ ಸಚಿವ ನೀಡಲಿ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಅವರು ನಮ್ಮ ಸ್ನೇಹಿತರು. ನಾವು ರಾಜಕಾರಣದಲ್ಲಿ ಒಂದೇ ಪಕ್ಷದಲ್ಲಿ ಇದ್ದೇವೆ. ಯತ್ನಾಳ್ ನನ್ನ ಆತ್ಮೀಯ ಸ್ನೇಹಿತರು. ಕೇಂದ್ರ ಸಚಿವರಾಗಿದ್ದವರು. ಅವರಿಗೆ ಮಂತ್ರಿ ಆಗಬೇಕು ಎಂಬ ಬಗ್ಗೆ ಆಸೆ, ಅಪೇಕ್ಷೆ ಇದೆ. ಅದನ್ನು ತಪ್ಪು ಎಂದು ಹೇಳುವುದಿಲ್ಲ. ಅವರಿಗೆ ನಾಳೆ ನೇರವಾಗಿಯೇ ಹೇಳುತ್ತೇನೆ ಎಂದರು.

Yatnal 1

ಯತ್ನಾಳ್ ಅವರೇ ಈ ರೀತಿ ಮಾಧ್ಯಮದ ಎದುರು ಹೇಳಿಕೆ ಕೊಡಬೇಡಿ. ಈ ರೀತಿ ಆರೋಪ ಮಾಡಿದರೆ ನಮ್ಮ ಪಕ್ಷಕ್ಕೆ, ಸರ್ಕಾರಕ್ಕೆ ಮುಜುಗರ ಆಗುತ್ತದೆ. ನೀವು ಮಂತ್ರಿ ಆಗಬೇಕೆ, ನಾನು ಸಪೋರ್ಟ್ ಮಾಡುತ್ತೇನೆ ಇನ್ನು ಮುಂದೆ ಈ ರೀತಿ ಮಾತನಾಡಬಾರದು ಅಂತಾ ವಿನಂತಿ ಮಾಡುತ್ತೇನೆ ಎಂದು ಹೇಳಿದರು.

TAGGED:mesMP RenukaacharyaSangolli Rayannashivmoggaಎಂಇಎಸ್ರೇಣುಕಾಚಾರ್ಯಶಿವಮೊಗ್ಗಸಂಗೋಳ್ಳಿ ರಾಯಣ್ಣ ಪ್ರತಿಮೆ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Gujarat Girls Suicide
Crime

ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ

Public TV
By Public TV
7 minutes ago
Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
32 minutes ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
51 minutes ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
1 hour ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
1 hour ago
UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?