Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್: ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್: ರೇಣುಕಾಚಾರ್ಯ

Districts

ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್: ರೇಣುಕಾಚಾರ್ಯ

Public TV
Last updated: December 19, 2021 10:19 pm
Public TV
Share
3 Min Read
renukacharya 1
SHARE

ಶಿವಮೊಗ್ಗ: ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್, ಕೈ ಪಕ್ಷಕ್ಕೆ ಮತ್ತೊಂದು ಹೆಸರೇ ಭ್ರಷ್ಟಾಚಾರ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

1200px Flag of the Indian National Congress.svg

ಬಿಜೆಪಿ 40% ಕಮಿಷನ್ ಸರ್ಕಾರ ಆರೋಪ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಆರೋಪದ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಭ್ರಷ್ಟಾಚಾರ ಹುಟ್ಟು ಹಾಕಿದ್ದೆ ಕಾಂಗ್ರೆಸ್, ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್, ಕೈ ಪಕ್ಷಕ್ಕೆ ಮತ್ತೊಂದು ಹೆಸರೇ ಭ್ರಷ್ಟಾಚಾರ. ಅವರ ಒಳ ಜಗಳ, ಗುಂಪುಗಾರಿಕೆಯಿಂದ ಕಾಂಗ್ರೆಸ್ ಸಂಪೂರ್ಣ ನಶಿಸಿ ಹೋಗಿದೆ. ಅದನ್ನು ಮರೆ ಮಾಚುವ ಸಲುವಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಉಪಯೋಗಿ ಅಲ್ಲ, ನಿರುಪಯೋಗಿ: ಮೋದಿ ಬಣ್ಣನೆಗೆ ಅಖಿಲೇಶ್‌ ಯಾದವ್‌ ಲೇವಡಿ

sangolli rayanna 2 1 ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟದ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಈ ಘಟನೆಯನ್ನು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಖಂಡಿಸುತ್ತದೆ. ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಇದೇ ರೀತಿ ನಿಮ್ಮ ಪುಂಡಾಟಿಕೆ ಮಾಡಿದರೆ, ಕನ್ನಡಿಗರಿಗೆ ತಾಳ್ಮೆ, ಸಂಸ್ಕೃತಿ, ಸಂಸ್ಕಾರ ಇದೆ. ಇದನ್ನು ಮೀರಿದರೆ ಬೇರೆ ರೀತಿ ಉತ್ತರ ಕೊಡಬೇಕಾಗುತ್ತದೆ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿಕೃತಿಸಿದವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

Siddaramaiah Byrati Basavaraj

ಸಚಿವ ಭೈರತಿ ಬಸವರಾಜ್ ಭೂಮಿ ಖರೀದಿಯ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬಸವರಾಜ್ ಅವರು 19 ವರ್ಷದ ಹಿಂದೆ ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರೇ ಈ ಹಿಂದೆ ಈ ಪ್ರಕರಣಕ್ಕೆ ಬಿ-ರಿಪೋರ್ಟ್ ಹಾಕಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಸಚಿವರುಗಳನ್ನ ಅವರು ಟಾರ್ಗೆಟ್ ಮಾಡುತ್ತಿದ್ದಾರೆ ಎಂದರು.

siddaramaia dk shivakumar

ಬಿಜೆಪಿ ಸೇರಿರುವವರನ್ನು ವಾಪಸ್ ಕಾಂಗ್ರೆಸ್ ಗೆ ಕರೆತರುವ ಸಲುವಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಈ ರೀತಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವವರು ಯಾವುದೇ ಕಾರಣಕ್ಕೂ ಅವರು ವಾಪಸ್ ಹೋಗುವುದಿಲ್ಲ. ಬಿಜೆಪಿಯ ತತ್ವ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೇರಿದ್ದಾರೆ. ಶಾಸಕರಾಗಿ, ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಡಿದರು. ಇದನ್ನೂ ಓದಿ: ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ

DK RAVI SIDDARAMAIAH

ಡಿ.ಕೆ.ರವಿ ಕೇಸ್ ಏನಾಯ್ತು, ಡಿವೈಎಸ್ ಪಿ ಗಣಪತಿ ಅವರು ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡರು. ಆ ಕೇಸ್ ಏನಾಯ್ತು? ಈ ಪ್ರಕರಣದಲ್ಲಿ ಸಾಕ್ಷ್ಯವನ್ನು ಸಂಪೂರ್ಣವಾಗಿ ನಾಶ ಮಾಡಿ ಸಿಬಿಐಗೆ ವಹಿಸಿದರು. ನಿಮ್ಮ ದೌರ್ಜನ್ಯ, ಭ್ರಷ್ಟಾಚಾರದಿಂದ ಎಷ್ಟೋ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು. ನಿಮ್ಮ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ನುಡಿದರು.

BJP 2ಗುತ್ತಿಗೆದಾರರ ಭ್ರಷ್ಟ ಸರ್ಕಾರ ಆರೋಪದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗುತ್ತಿಗೆದಾರರು ದಾಖಲೆ ಬಿಡುಗಡೆ ಮಾಡಲಿ. ನಮ್ಮ ಸರ್ಕಾರ ಇದ್ದಾಗ ಪಾರದರ್ಶಕ ಆಡಳಿತ ಕೊಟ್ಟಿದ್ದು, ಮುಂದೆಯೂ ಕೊಡುತ್ತೇವೆ. 2023ಕ್ಕೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಉತ್ತರ ಕರ್ನಾಟಕದ ವಿರೋಧಿಗಳು, ರೈತರ ವಿರೋಧಿಗಳು. ಅಧಿವೇಶನದಲ್ಲಿ ರೈತರ ಜ್ವಲಂತ ಸಮಸ್ಯೆ ಬಗ್ಗೆ ಚರ್ಚೆ ಮಾಡಬೇಕಿತ್ತು. ಅದರ ಬದಲಾಗಿ ನೀವು ಧರಣಿ ಮಾಡುತ್ತೀರಿ, ಬಾವಿಗಿಳಿದು ಪ್ರತಿಭಟನೆ ಮಾಡ್ತೀರಿ ಅಂದರೆ ನಿಮಗೆ ರೈತರ ಬಗ್ಗೆ ಕಾಳಜಿ ಇಲ್ಲ. ನಾಳೆ ಅಧಿವೇಶನದಲ್ಲಿ ಏನು ಮಾತನಾಡ್ತಾರೋ, ಅದಕ್ಕೆ ತಕ್ಕ ಉತ್ತರ ನಾವು ಕೊಡುತ್ತೇವೆ ಎಂದು ತಿರುಗೇಟು ನೀಡಿದರು.

ಸಿ.ಟಿ.ರವಿ ವಿರುದ್ಧ ಡಿಕೆಶಿ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ ಆತ್ಮಾವಲೋಕನ ಮಾಡಿಕೊಳ್ಳಲಿ. ಅವರ ಮೇಲೆ ಏನೇನು ಆರೋಪ ಇದೆ ಅಂತಾ ಆತ್ಮಾವಲೋಕನ ಮಾಡಿಕೊಂಡ ಮತ್ತೊಬ್ಬರ ಬಗ್ಗೆ ಮಾತನಾಡಿಕೊಳ್ಳಲಿ ಎಂದು ನುಡಿದರು.

ct ravi

 

ಶಾಸಕ ಯತ್ನಾಳ್ ಅವರು ತನಗೆ ಗೃಹ ಸಚಿವ ನೀಡಲಿ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಅವರು ನಮ್ಮ ಸ್ನೇಹಿತರು. ನಾವು ರಾಜಕಾರಣದಲ್ಲಿ ಒಂದೇ ಪಕ್ಷದಲ್ಲಿ ಇದ್ದೇವೆ. ಯತ್ನಾಳ್ ನನ್ನ ಆತ್ಮೀಯ ಸ್ನೇಹಿತರು. ಕೇಂದ್ರ ಸಚಿವರಾಗಿದ್ದವರು. ಅವರಿಗೆ ಮಂತ್ರಿ ಆಗಬೇಕು ಎಂಬ ಬಗ್ಗೆ ಆಸೆ, ಅಪೇಕ್ಷೆ ಇದೆ. ಅದನ್ನು ತಪ್ಪು ಎಂದು ಹೇಳುವುದಿಲ್ಲ. ಅವರಿಗೆ ನಾಳೆ ನೇರವಾಗಿಯೇ ಹೇಳುತ್ತೇನೆ ಎಂದರು.

Yatnal 1

ಯತ್ನಾಳ್ ಅವರೇ ಈ ರೀತಿ ಮಾಧ್ಯಮದ ಎದುರು ಹೇಳಿಕೆ ಕೊಡಬೇಡಿ. ಈ ರೀತಿ ಆರೋಪ ಮಾಡಿದರೆ ನಮ್ಮ ಪಕ್ಷಕ್ಕೆ, ಸರ್ಕಾರಕ್ಕೆ ಮುಜುಗರ ಆಗುತ್ತದೆ. ನೀವು ಮಂತ್ರಿ ಆಗಬೇಕೆ, ನಾನು ಸಪೋರ್ಟ್ ಮಾಡುತ್ತೇನೆ ಇನ್ನು ಮುಂದೆ ಈ ರೀತಿ ಮಾತನಾಡಬಾರದು ಅಂತಾ ವಿನಂತಿ ಮಾಡುತ್ತೇನೆ ಎಂದು ಹೇಳಿದರು.

TAGGED:mesMP RenukaacharyaSangolli Rayannashivmoggaಎಂಇಎಸ್ರೇಣುಕಾಚಾರ್ಯಶಿವಮೊಗ್ಗಸಂಗೋಳ್ಳಿ ರಾಯಣ್ಣ ಪ್ರತಿಮೆ
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
22 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
44 minutes ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
2 hours ago
Hassan Innova Car Overturn
Districts

ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಇನ್ನೋವಾ ಕಾರು – ಚಾಲಕನಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?