Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಟ್ಟೆಯಿಂದ ಮಗನ ಕಟ್ಟಿಕೊಂಡು ನದಿಗೆ ಹಾರಿದ್ದ ತಂದೆ – 12 ದಿನದ ನಂತ್ರ ಶವ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಟ್ಟೆಯಿಂದ ಮಗನ ಕಟ್ಟಿಕೊಂಡು ನದಿಗೆ ಹಾರಿದ್ದ ತಂದೆ – 12 ದಿನದ ನಂತ್ರ ಶವ ಪತ್ತೆ

Districts

ಬಟ್ಟೆಯಿಂದ ಮಗನ ಕಟ್ಟಿಕೊಂಡು ನದಿಗೆ ಹಾರಿದ್ದ ತಂದೆ – 12 ದಿನದ ನಂತ್ರ ಶವ ಪತ್ತೆ

Public TV
Last updated: February 29, 2020 3:39 pm
Public TV
Share
2 Min Read
UDP 01
SHARE

– ನಾನೊಬ್ಬ ಮಗನನ್ನ ಕೊಲ್ಲುವ ಮಹಾ ಪಾಪಿ
– ಡೆತ್‍ನೋಟ್ ಬರೆದಿದ್ದ ತಂದೆ

ಉಡುಪಿ: ಆರು ವರ್ಷದ ಮಗನನ್ನು ಕಟ್ಟಿಕೊಂಡು ನೇತ್ರಾವತಿ ನದಿಗೆ ಹಾರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಮೃತದೇಹಗಳು ಉಡುಪಿಯಲ್ಲಿ ಪತ್ತೆಯಾಗಿದೆ. ದಕ್ಷಿಣ ಕನ್ನಡದ ಉಳ್ಳಾಲದಲ್ಲಿ ನೇತ್ರಾವತಿ ನದಿಗೆ ಹಾರಿದ್ದ ತಂದೆ ಮಗನ ಶವ ಸುಮಾರು 65 ಕಿ.ಮೀ ದೂರದ ಉಡುಪಿ ಜಿಲ್ಲೆಯ ಕಟಪಾಡಿ ಸಮುದ್ರ ಕಿನಾರೆಗೆ ತೇಲಿ ಬಂದಿದೆ.

ಗೋಪಾಲಕೃಷ್ಣ ರೈ ಹಾಗೂ ಪುತ್ರ ಅನೀಶ್ ರೈ ಮೃತ ತಂದೆ-ಮಗ. 12 ದಿನದ ನಂತರ ಕಟಪಾಡಿ ಸಮೀಪ ತಂದೆ ಮಗನ ಶವ ಕೊಳೆತ ಸ್ಥಿತಿಯಲ್ಲಿ ಒಟ್ಟಿಗೆ ಸಿಕ್ಕಿವೆ.

udp 2

ಏನಿದು ಪ್ರಕರಣ?
ಫೆಬ್ರವರಿ 16ರ ಮುಂಜಾನೆ 4.30ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ತಂದೆ ಹಾಗೂ ಪುತ್ರ ರಾಷ್ಟ್ರೀಯ ಹೆದ್ದಾರಿ 66ರಿಂದ ಕಣ್ಮರೆಯಾಗಿದ್ದರು. ನಾಪತ್ತೆಯಾದವರನ್ನು ಬಂಟ್ವಾಳದ ಬಾಳ್ತಿಲ ಶಂಭೂರು ಚರ್ಚ್ ಬಳಿಯ ನಿವಾಸಿ ಗೋಪಾಲಕೃಷ್ಣ ರೈ ಹಾಗೂ ಪುತ್ರ ಅನೀಶ್ ರೈ ಎಂದು ಗುರುತಿಸಲಾಗಿತ್ತು. ಪ್ರಸ್ತುತ ಮುಂಬೈಯಲ್ಲಿ ನೆಲೆಸಿರುವ ಗೋಪಾಲಕೃಷ್ಣ ರೈ ಆತ್ಮಹತ್ಯೆ ಮಾಡಿಕೊಳ್ಳುವ ಎರಡು ದಿನಗಳ ಹಿಂದೆ ಮುಂಬೈಯಿಂದ ಕೊಣಾಜೆಯ ಪಾವೂರಿಗೆ ಸಂಬಂಧಿಕರ ಮನೆಗೆ ದೈವದ ನೇಮೋತ್ಸವಕ್ಕೆ ಬಂದಿದ್ದನು. ಭಾನುವಾರ ನಸುಕಿನ ಜಾವ 4.30ರ ವೇಳೆ ಮಗ ಅನೀಶ್ ರೈಯೊಂದಿಗೆ ಗೋಪಾಕೃಷ್ಣ ರೈ ಕಾರು ಚಲಾಯಿಸಿ ಮನೆಯಿಂದ ಹೊರಗೆ ಹೊರಟಿದ್ದನು.

udp 11

ಈ ಕಾರು ಫೆಬ್ರವರಿ 16 ರಂದು ಭಾನುವಾರ ಬೆಳಗ್ಗಿನ ಜಾವ ಉಳ್ಳಾಲ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ನೇತ್ರಾವತಿ ಸೇತುವೆಯಲ್ಲಿ ಕಾರು ನಿಂತಿದ್ದು, ವಾಹನದಲ್ಲಿ ಯಾರೂ ಇಲ್ಲದ್ದು ನೋಡಿ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ನೀಡಿದ್ದರು. “ತನಗೆ ಒಂದು ವಾರದಿಂದ ನಿದ್ರೆ ಬರುತ್ತಿಲ್ಲ. ನಾನೊಬ್ಬ ಮಗನನ್ನು ಕೊಲ್ಲುವ ಮಹಾ ಪಾಪಿ. ಇದಕ್ಕಾಗಿ ನನ್ನ ಕ್ಷಮಿಸಿರಿ. ಪತ್ನಿ ಅಶ್ವಿನಿ ರೈ ನಿನ್ನನ್ನು ಬಿಟ್ಟು ಇಬ್ಬರೂ ದೂರ ಹೋಗುತ್ತಿದ್ದೇವೆ ಎಂದು ಡೆತ್‍ನೋಟ್” ಬರೆದಿಟ್ಟಿದ್ದನು. ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಕ್ಕಾಗಿ ರಾತ್ರಿ ಹಗಲು ಶೋಧಕಾರ್ಯ ನಡೆಸಿದ್ದರು.

udp 1 1

ಘಟನೆಗೆ ಸಂಬಂಧಿಸಿದಂತೆ ಯಾವುದೇ ಕುರುಹುಗಳು ಪತ್ತೆಯಾಗಿರಲಿಲ್ಲ. ಆದರೆ ಶುಕ್ರವಾರ ರಾತ್ರಿ ಕಟಪಾಡಿ ಸಮೀಪ ತಂದೆ ಮಗನ ಶವ ಕೊಳೆತ ಸ್ಥಿತಿಯಲ್ಲಿ ಒಟ್ಟಿಗೆ ಸಿಕ್ಕಿವೆ. ಕುಟುಂಬಸ್ಥರು ಮೃತದೇಹಗಳ ಗುರುತು ಪತ್ತೆ ಮಾಡಿದ್ದಾರೆ. ತಂದೆ ಮಗ ಬಟ್ಟೆ ಸುತ್ತಿಕೊಂಡು ನೀರಿಗೆ ಹಾರಿದ್ದಾರೆ ಎಂದು ಮೃತದೇಹ ಮೇಲಕ್ಕೆತ್ತಿದವರು ಮಾಹಿತಿ ನೀಡಿದ್ದಾರೆ. ಮೃತದೇಹ 12 ದಿನ ನೀರನಲ್ಲಿದ್ದರಿಂದ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ. ಉಡುಪಿಯ ಅಜ್ಜರಕಾಡು ಶವಾಗಾರದಲ್ಲಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಮಂಗಳೂರಿಗೆ ರವಾನಿಸಲಾಗಿದೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

udp 2 1

ಆಪತ್ಬಾಂಧವ ಕಾಪು ಸೂರಿ ಶೆಟ್ಟಿ ಮಾತನಾಡಿ, ಶವ ಕಲ್ಲುಗಳ ನಡುವೆ ಸಿಲುಕಿತ್ತು. ಮೇಲೆತ್ತಲು ಬಹಳ ಕಷ್ಟವಾಯಿತು. ಜೊತೆಗೆ ಪ್ರಾಣ ಕಳೆದುಕೊಳ್ಳುವ ಉದ್ದೇಶದಿಂದ ಬಟ್ಟೆಯಿಂದ ಪರಸ್ಪರ ಸುತ್ತಿಕೊಂಡಿದ್ದರು. ಅಂತ್ಯಸಂಸ್ಕಾರ ಕೂಡ ಜೊತೆಗೆ ಆಗಬೇಕೆಂಬ ಇಚ್ಛೆ ಅವರದ್ದಾಗಿತ್ತು ಅಂತ ಕುಟುಂಬಸ್ಥರು ಹೇಳಿದ್ದಾರೆ ಎಂದರು.

ಮೃತರ ಸಹೋದರ ಹರೀಶ್ ರೈ ಮಾತನಾಡಿ, ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇ ಇರಲಿಲ್ಲ. ಆರ್ಥಿಕ, ಕೌಟುಂಬಿಕ ಸಮಸ್ಯೆಗಳೂ ಇರಲಿಲ್ಲ. ಯಾಕೆ ಹೀಗೆ ಮಾಡಿಕೊಂಡರು ಎಂದು  ಗೊತ್ತಾಗುತ್ತಿಲ್ಲ ಎಂದರು.

udp 3

 

TAGGED:carfatherpolicePublic TVseasonudupiಉಡುಪಿಕಾರುತಂದೆಪಬ್ಲಿಕ್ ಟಿವಿಪೊಲೀಸ್ಮಂಗಸಮುದ್ರ
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
46 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
58 minutes ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
1 hour ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
2 hours ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
2 hours ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?