Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಂಡು ಹಾರಿಸಿ ತಂದೆ, ಮಗನ ಹತ್ಯೆ – ನಿರ್ಲಕ್ಷ್ಯ ತೋರಿದ ಇಬ್ಬರು ಪೊಲೀಸರ ಅಮಾನತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗುಂಡು ಹಾರಿಸಿ ತಂದೆ, ಮಗನ ಹತ್ಯೆ – ನಿರ್ಲಕ್ಷ್ಯ ತೋರಿದ ಇಬ್ಬರು ಪೊಲೀಸರ ಅಮಾನತು

Crime

ಗುಂಡು ಹಾರಿಸಿ ತಂದೆ, ಮಗನ ಹತ್ಯೆ – ನಿರ್ಲಕ್ಷ್ಯ ತೋರಿದ ಇಬ್ಬರು ಪೊಲೀಸರ ಅಮಾನತು

Public TV
Last updated: November 8, 2021 1:38 pm
Public TV
Share
2 Min Read
police
SHARE

ಜೈಪುರ: ತಂದೆ ಮತ್ತು ಮಗನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದ್ದು, ಈ ವೇಳೆ ನಿರ್ಲಕ್ಷ್ಯ ತೋರಿದ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾದ ಘಟನೆ ರಾಜಸ್ಥಾನದ ಭರತ್‍ಪುರದಲ್ಲಿ ನಡೆದಿದೆ.

ಸುರೇಂದ್ರ ಸಿಂಗ್(46) ಮತ್ತು ಮಗ ಸಚಿನ್(17) ಮೃತ ದುರ್ದೈವಿಗಳು. ಭಾನುವಾರ ರಾಜಸ್ಥಾನದ ಭರತ್‍ಪುರ ಜಿಲ್ಲೆಯಲ್ಲಿ ಸುರೇಂದ್ರ ಸಿಂಗ್ ಅವರ ನಿವಾಸದ ಮುಂದೆಯೇ ಈ ಘಟನೆ ನಡೆದಿದ್ದು, ತಂದೆ ಮಗನ ಚಿಕಿತ್ಸೆ ಘಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅದು ಅಲ್ಲದೇ ಇವರಿಬ್ಬರ ಮೇಲೆ ಗುಂಡು ಹಾರಿಸಿದ್ದ ದಿಲಾವರ್ ಎಂಬವರ ಕಾಲಿಗೆ ಗುಂಡು ತಗುಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಯಾನ್ಸರ್‌ನಿಂದ ಗೆದ್ದು ಬಂದವರು ತಮ್ಮ ಕಥೆಗಳನ್ನು ಹೇಳಬೇಕು: ಮನಿಷಾ ಕೊಯಿರಾಲಾ

FotoJet 9

ಶನಿವಾರ ರಾತ್ರಿ ಸುರೇಂದ್ರ ಸಿಂಗ್ ಮತ್ತು ಲಖನ್ ಶರ್ಮಾ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಸಿಂಗ್ ಅವರು ಲಖನ್ ಕಪಾಳಕ್ಕೆ ಹೊಡೆದಿದ್ದಾರೆ. ಈ ವೇಳೆ ಅಲ್ಲೇ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಕೊತ್ವಾಲಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ವಿಜಯ್ ಪಾಲ್ ಮತ್ತು ಹೆಡ್ ಕಾನ್‍ಸ್ಟೆಬಲ್ ಮಾನ್ ಸಿಂಗ್ ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ಸಮಾಧಾನಪಡಿಸಿದ್ದು, ಅಲ್ಲಿಂದ ಕಳುಹಿಸಿದ್ದಾರೆ.

ಮರುದಿನ ಭಾನುವಾರ ಬೆಳಗ್ಗೆ ಸುಭಾಷ್‍ನಗರದಲ್ಲಿರುವ ಸುರೇಂದ್ರ ಸಿಂಗ್ ಅವರ ಮನೆಯ ಬಳಿ ಇಬ್ಬರು ಸದಸ್ಯರು ಸಭೆ ಸೇರಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತಿದ್ದರು. ಆದರೆ ಸಭೆಯಲ್ಲಿ ಲಖನ್ ಶರ್ಮಾ ಅವರ ಸಹೋದರ ದಿಲಾವರ್ ಅವರು ಸುರೇಂದ್ರ ಸಿಂಗ್ ಮತ್ತು ಅವರ ಮಗ ಸಚಿನ್ ಮೇಲೆ ಗುಂಡು ಹಾರಿಸಿದ್ದಾನೆ. ತಕ್ಷಣ ಕೊತ್ವಾಲಿ ಪೊಲೀಸ್ ಠಾಣೆಗೆ ಕರೆ ಮಾಡಿ, ಸುರೇಂದ್ರ ಸಿಂಗ್ ಮೊದಲು ತನ್ನ ಮೇಲೆ ಗುಂಡು ಹಾರಿಸಿದ್ದು, ನಾನು ಅವರ ಮೇಲೆ ಗುಂಡು ಹಾರಿಸಿದ್ದೇನೆ ಎಂದು ಹೇಳಿದ್ದಾನೆ. ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ – ಕಣ್ಣು ದಾನ ಮಾಡಿದ ಅಪ್ಪು ಅಭಿಮಾನಿ 

FotoJet 6 9

ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು, ದಿಲಾವರ್, ಸುರೇಂದ್ರ ಸಿಂಗ್ ಮತ್ತು ಸಚಿನ್ ಮೂವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುರೇಂದ್ರ ಸಿಂಗ್ ಮತ್ತು ಸಚಿನ್ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಕುಟುಂಬ ಸದಸ್ಯರು ಆಸ್ಪತ್ರೆಯ ಹೊರಗೆ ಧರಣಿ ನಡೆಸಿ, ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಕೆಲಕಾಲ ರಸ್ತೆಯನ್ನು ತಡೆ ಹಿಡಿದಿದ್ದರು. ಆದರೆ ಪೊಲೀಸರು ಅವರನ್ನು ಸಮಾಧಾನ ಮಾಡಿ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ದೇವೇಂದ್ರ ಕುಮಾರ್ ಅವರು ವಿಜಯ್ ಪಾಲ್ ಮತ್ತು ಮಾನ್ ಸಿಂಗ್ ಅವರ ನಿರ್ಲಕ್ಷ್ಯವೇ ಈ ಕೃತ್ಯಕ್ಕೆ ಕಾರಣ ಎಂದು ಅವರನ್ನು ಅಮಾನತುಗೊಳಿಸಿದ್ದಾರೆ.

TAGGED:Devendra KumarpolicePublic TVrajasthanದೇವೇಂದ್ರ ಕುಮಾರ್ಪಬ್ಲಿಕ್ ಟಿವಿಪೊಲೀಸರುರಾಜಸ್ಥಾನ
Share This Article
Facebook Whatsapp Whatsapp Telegram

Cinema news

Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories

You Might Also Like

team india pakistan surykumar yadav
Cricket

‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ

Public TV
By Public TV
17 minutes ago
Indian Rural Village
Belgaum

ಅಕ್ಕನ ಹಿಂದೆ ಬಿದ್ದ ಲವ್ವರ್‌ಗೆ ದೇವಸ್ಥಾನದಲ್ಲೇ ಚಟ್ಟ ಕಟ್ಟಿದ ಅಪ್ರಾಪ್ತ ಸಹೋದರ!

Public TV
By Public TV
24 minutes ago
Nitin Nabin 3
Latest

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ

Public TV
By Public TV
2 hours ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಯಬಹುದೇ ಮದ್ದು?

Public TV
By Public TV
2 hours ago
Haveri Accident
Crime

ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸವಾರ ಸಾವು

Public TV
By Public TV
2 hours ago
Gadag Lakkundi Excavation
Districts

ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?