ಮೈಸೂರು: ವ್ಯಕ್ತಿಯೊಬ್ಬರು ಮಗಳ ಓದಿಗೆ ಫೀಸ್ ಕಟ್ಟಲಾಗದೆ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಮೈಸೂರಿನಲ್ಲಿ ನಡೆದಿದೆ.
51 ವರ್ಷದ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡವರು. ಇವರು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿಯಾಗಿದ್ದು, ಬಡಾವಣೆಯ ಗಣಪತಿ ದೇವಸ್ಥಾನದಲ್ಲಿ ಪ್ರಸಾದ ತಯಾರಕರಾಗಿದ್ದರು. ಇವರ ಮಗಳು ಬಿಎಸ್ಸಿ ಅಂತಿಮ ವರ್ಷದಲ್ಲಿ ಓದುತ್ತಿದ್ದಾರೆ. ಮಗಳ ಓದಿಗಾಗಿ 12,500 ರೂ. ಕಾಲೇಜು ಫೀಸ್ ಕಟ್ಟಬೇಕಿತ್ತು.
ಆದ್ರೆ ಹಣ ಹೊಂದಿಸಲು ಸಾಧ್ಯವಾಗದೆ ದೇವಸ್ಥಾನದ ಆವರಣದಲ್ಲಿನ ಮನೆಯಲ್ಲಿಯೇ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆಯನ್ನು ಕಳೆದುಕೊಂಡ ಮಗಳ ಆಕ್ರಂದನ ಮುಗಿಲು ಮುಟ್ಟಿದೆ.