ಹೈದರಾಬಾದ್: ತಮ್ಮ ಪ್ರೀತಿಯನ್ನು ಪೋಷಕರು ನಿರಾಕರುಸುತ್ತಾರೆ ಎಂಬ ಭಯಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಪಟ್ಟಣದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ವಿಕಾರಾಬಾದ್ ಜಿಲ್ಲೆಯ ಬೈಗರಿ ಶಿವ(22) ಮತ್ತು ಸಂಗಾರೆಡ್ಡಿಯ ಬೊಗ್ಗುಲ ಅಮೃತ(20) ಎಂದು ಗುರುತಿಸಲಾಗಿದ್ದು, ಇಬ್ಬರು ಫಾರ್ಮಸಿ ವಿದ್ಯಾರ್ಥಿಗಳಾಗಿದ್ದಾರೆ. ಇದನ್ನೂ ಓದಿ: BBMP ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ
ಸಂಗಾರೆಡ್ಡಿಯ ಮುನಿಪಲ್ಲಿ ಮಂಡಲದ ಬುಧೇರಾ ಗ್ರಾಮದ ಹೊರವಲಯದಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಪತ್ರವೊಂದು ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂಬುವುದನ್ನು ಬರೆದಿದ್ದಾರೆ. ಪತ್ರದಲ್ಲಿ ಪ್ರೇಮಿಗಳು ಪ್ರೀತಿಯಲ್ಲಿ ಬಿದ್ದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಮದುವೆಗೆ ಮನೆಯವರು ಒಪ್ಪುವುದಿಲ್ಲ ಎಂದು ಹೆದರಿ ಪ್ರಾಣ ಬಿಡುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪರ್ಷಿಯನ್ ಬೆಕ್ಕುಗಳಿಗೆ ಸೀಮಂತ ಮಾಡಿ ಸುದ್ದಿಯಾದ ಉದ್ಯಮಿ!
ಶಿವ ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ಪದವಿ ವ್ಯಾಸಂಗ ಮಾಡುತ್ತಿದ್ದು, ಯುವತಿ ಲ್ಯಾಬ್ ಟೆಕ್ನಿಷಿಯನ್ ಕೋರ್ಸ್ ಮಾಡುತ್ತಿದ್ದಳು. ಸದ್ಯ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಸಿಆರ್ಪಿಸಿ 174 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.