Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬೊಮ್ಮಾಯಿ

Bengaluru City

ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬೊಮ್ಮಾಯಿ

Public TV
Last updated: October 20, 2024 4:01 pm
Public TV
Share
3 Min Read
bengaluru basavaraj bommai 1
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaih) ಅವರು ಅಧಿಕಾರ ಕಳೆದುಕೊಳ್ಳುವ ಭಯದಿಂದ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಮೊದಲು ಅದನ್ನು ಬಹಿರಂಗ ಪಡೆಸಲಿ. ಸಾರ್ವಜನಿಕ ಚರ್ಚೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯ ಪಟ್ಟಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಇದು ಜಾತಿ ಗಣತಿಯಲ್ಲ. ಸಾಮಾಜಿಕ ಆರ್ಥಿಕ ಸಮೀಕ್ಷೆ, ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಜನಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ (Supreme Court) ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಜನಗಣತಿಯ ಲೇಪನ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸರೋಜಕ್ಕ ಸಾಕ್ಷಾತ್ ಅನ್ನಪೂರ್ಣೇಶ್ವರಿ ಆಗಿದ್ದರು: ನಟ ಸುದೀಪ್ ತಾಯಿ ನಿಧನಕ್ಕೆ ಬೊಮ್ಮಾಯಿ ಸಂತಾಪ

cm siddaramaiah 2

ಇನ್ನು ಈ ವರದಿ ವೈಜ್ಞಾನಿಕವಾಗಿಯೂ ಇಲ್ಲ, ಅಂಕಿ ಅಂಶ ಸಮರ್ಪಕವಾಗಿಲ್ಲ. ಹಲವು ಸಮುದಾಯಗಳಿಂದ ಆಕ್ಷೇಪಣೆ ಬಂದಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ಸಿದ್ಧಪಡಿಸಿದ್ದ ವರದಿ ಸಮರ್ಪಕವಾಗಿಲ್ಲ ಎಂದು ಅಂದಿನ ಆಯೋಗದ ಕಾರ್ಯದರ್ಶಿ ಹಾಗೂ ಸದಸ್ಯರು ಸಹಿ ಹಾಕಿರಲಿಲ್ಲ. ನಂತರ ಬಂದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗಡೆ ಅವರು, ಯಾವುದೇ ಸಮೀಕ್ಷೆ ನಡೆಸದೇ ಹಿಂದಿನ ಆಯೋಗದ ಅಧ್ಯಕ್ಷರು ಸಿದ್ಧಪಡಿಸಿದ್ದ ವರದಿಯನ್ನೇ ಪರಿಷ್ಕರಿಸಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ವರದಿಯನ್ನು ಒಕ್ಕಲಿಗ ಸಮುದಾಯದವರು ವಿರೋಧಿಸಿದ್ದಾರೆ. ಸ್ವತ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ (Congress) ಮುಖಂಡರು ಇದನ್ನು ವಿರೋಧಿಸಿದ್ದಾರೆ ಎಂದರು. ಇದನ್ನೂ ಓದಿ: UG-NEET: ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಕಾಲೇಜಿನಲ್ಲೇ ದಾಖಲೆ ಸಲ್ಲಿಸಿ – ಕೆಇಎ ಸೂಚನೆ

ಇದನ್ನು ಅಖಿಲ ಭಾರತ ವೀರಶೈವ ಮಹಾಸಭೆ ಕೂಡ ವಿರೋಧಿಸಿದೆ. ಎಲ್ಲ ಸಮುದಾಯಗಳ ಅನುಮಾನ ದೂರ ಮಾಡುವ ಕೆಲಸ ಸಿಎಂ ಮಾಡುತ್ತಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚಿಸಲಿ. ಇಷ್ಟೆಲ್ಲ ವಿರೋಧ ಇದ್ದರೂ ಜಾರಿ ಮಾಡುತ್ತೇವೆ ಅಂತಿದ್ದಾರೆ. ಮೊದಲು ವರದಿ ಬಹಿರಂಗಪಡಿಸಲಿ, ಸಾರ್ವಜನಿಕವಾಗಿ ಚರ್ಚೆ ಆಗಲಿ. ಸಿಎಂ ಅವರು ವರದಿಯಲ್ಲಿ ಏನಿದೆ ಎಂದು ನೋಡಿಲ್ಲ ಅಂತಿದ್ದಾರೆ, ಆದರೆ ವರದಿ ತಯಾರಿ ಮಾಡಿಸಿದವರೇ ಸಿಎಂ. ದಿವಂಗತ ವಿ.ಪಿ. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಧಿಕಾರ ಹೋಗುವ ಸಂದರ್ಭದಲ್ಲಿ ಮಂಡಲ್ ವರದಿ ಜಾರಿ ಮಾಡಿದ್ದರು. ಅದೇ ರೀತಿ ಇವರು ಈಗ ಜಾತಿ ಗಣತಿ ಜಾರಿ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

ಸಂವಿಧಾನಬದ್ಧ ತೀರ್ಮಾನ:
ಪರಿಶಿಷ್ಟ ಜಾತಿ, ಪಂಗಡಗಳ ಮೀಸಲು ಪ್ರಮಾಣ ಹೆಚ್ಚಳ, ಎಸ್‌ಸಿ ಮೀಸಲು ವರ್ಗೀಕರಣ, ಪಂಚಮಸಾಲಿ ಸಮುದಾಯದವರಿಗೆ ಪ್ರವರ್ಗ 2ಡಿಗೆ ಸೇರ್ಪಡೆ, ಮುಸ್ಲಿಮರಿಗೆ ಪ್ರತ್ಯೇಕ ಮೀಸಲು ರದ್ದು ಸೇರಿ ಎಲ್ಲವನ್ನು ನನ್ನ ಅವಧಿಯಲ್ಲಿ ಸಂವಿಧಾನಬದ್ಧವಾಗಿ ತೀರ್ಮಾನ ಮಾಡಲಾಗಿತ್ತು. ಬಿಜೆಪಿ ಸರ್ಕಾರ ಕೈಗೊಂಡ ಈ ನಿರ್ಧಾರಗಳನ್ನು ಪ್ರಶ್ನಿಸಿ ಕಾಂಗ್ರೆಸ್‌ನ ಕೆಲವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು. ವಿಧಾನಸಭೆ ಚುನಾವಣೆ ಹತ್ತಿರವಾಗಿದ್ದರಿಂದ ಮುಂದಿನ ವಿಚಾರಣೆವರೆಗೆ ಜಾರಿಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದ್ದನ್ನು ಸುಪ್ರೀಂ ಕೋರ್ಟ್ ಒಪ್ಪಿದೆಯೇ ಹೊರತು ತಡೆಯಾಜ್ಞೆ ನೀಡಿಲ್ಲವೆಂದು ಹೇಳಿದರು. ಇದನ್ನೂ ಓದಿ: ಕನ್ನಡದಲ್ಲೇ ಪತ್ರ ಬರೆದು ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದ ಪವನ್ ಕಲ್ಯಾಣ್

ಎಸ್‌ಸಿ, ಎಸ್‌ಟಿ ಮೀಸಲು ಹೆಚ್ಚಳ, ಎಸ್‌ಸಿ ಒಳಮೀಸಲು, ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಮೀಸಲು ಕೊಡುವ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ನೈಜ ಕಾಳಜಿಯಿದ್ದರೆ ಈ ನಿಟ್ಟಿನಲ್ಲಿ ಮುಂದುವರಿಯಬೇಕು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂಬ ತಪ್ಪು ಮಾಹಿತಿ ನೀಡಿ ವಿವಿಧ ಸಮುದಾಯಗಳಿಗೆ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ಮಾಡಿದರು. ಇದನ್ನೂ ಓದಿ: ಕ್ಯಾಬಿನೆಟ್‍ಗೂ ಮುನ್ನವೇ ವೀರಶೈವ ಮುಖಂಡರ ಸಭೆ: ಶಾಮನೂರು ಶಿವಶಂಕರಪ್ಪ

ಸೇಡಿಗಾಗಿ ರಾಜೀನಾಮೆ ಕೇಳುತ್ತಿದ್ದಾರೆ:
ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ (Pralhad Joshi) ಅವರ ಸಹೋದರ ಗೋಪಾಲ್ ಜೋಷಿ ಬಂಧನವಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದವರು ಪ್ರಲ್ಹಾದ್ ಜೋಷಿಯವರ ರಾಜೀನಾಮೆ ಕೇಳುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಲ್ಹಾದ್ ಜೋಷಿಯವರು ಅವರ ಸೋದರನ ಜತೆ ಯಾವುದೇ ವ್ಯವಹಾರಿಕ ಹಾಗೂ ಕೌಟಿಂಬಿಕ ಸಂಬಂಧ ಇಟ್ಟುಕೊಂಡಿಲ್ಲ. ನನಗೆ ಅವರ ಕುಟುಂಬದ ಬಗ್ಗೆ ಚೆನ್ನಾಗಿ ಗೊತ್ತಿದೆ. ಕಾಂಗ್ರೆಸ್‌ನವರು ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಅವರ ವಿರುದ್ಧ ಯಾರು ಮಾತನಾಡುತ್ತಾರೆ ಅವರ ವಿರುದ್ಧ ಸೇಡಿಗಾಗಿ ಕಾಂಗ್ರೆಸ್‌ನವರು ಎಫ್‌ಐಆರ್ ಹಾಕಿಸುತ್ತಿದ್ದಾರೆ ಎಂದು ಹರಿಯಾಯ್ದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಗೆಲ್ಲುವ ಅಭ್ಯರ್ಥಿ ಸಿಪಿವೈ – ಬೆಲ್ಲದ್ ಬ್ಯಾಟಿಂಗ್

TAGGED:Basavaraj BommaibengaluruCaste Censuscm siddaramaiahಜಾತಿ ಜನಗಣತಿಬಸವರಾಜ ಬೊಮ್ಮಾಯಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Harry Brook
Cricket

ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Public TV
By Public TV
5 hours ago
Mantralaya Guruvaibhavotsava Rishab Shetty Jaggesh
Districts

ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ – ಶ್ರೀಗಳಿಂದ ನಟ ರಿಷಬ್ ಶೆಟ್ಟಿ, ಜಗ್ಗೇಶ್‌ಗೆ ಸನ್ಮಾನ

Public TV
By Public TV
5 hours ago
Ballari Kanaka Durgamma Sidi Bandi Rathotsava 1
Bengaluru City

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
6 hours ago
Kadalur Uday
Districts

ವಾರದೊಳಗೆ ಸಿಎಂ ಗೊಂದಲಕ್ಕೆ ತೆರೆ ಎಳೆಯಿರಿ: ಕದಲೂರು ಉದಯ್

Public TV
By Public TV
6 hours ago
DK Shivakumar and Munirathna
Bengaluru City

ನಿಂತ ಕೆಲಸ ಮತ್ತೆ ಆರಂಭಿಸಿ – ಡಿಕೆಶಿ ನಿವಾಸಕ್ಕೆ ತೆರಳಿ ಮುನಿರತ್ನ ಮನವಿ

Public TV
By Public TV
7 hours ago
Shivamogga Hindu Student Murder Siddaramaiah
Bengaluru City

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?