ನವದೆಹಲಿ: ಭಾರತದಾದ್ಯಂತ ಗುರುವಾರ ಪ್ರತಿಭಟನೆ ಕಹಳೆ ಮೊಳಗಲಿದ್ದು, ಹಲವು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ (Bharat Band) ಘೋಷಣೆ ಮಾಡಿವೆ.
ಕೇಂದ್ರದ ಕೃಷಿ ಹಾಗೂ ಆರ್ಥಿಕ ನೀತಿ ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳು ಮತ್ತು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ (Strike) ಕರೆ ನೀಡಿವೆ. ಕೇಂದ್ರ ಕಾರ್ಮಿಕ ಸಂಘಗಳು ಸಿಐಟಿಯು, ಎಐಟಿಯುಸಿ, ಐಎನ್ಟಿಯುಸಿ, ಹೆಚ್ಎಂಎಸ್, ಎಐಸಿಸಿಟಿಯು, ಎಲ್ಪಿಎಫ್, ಯುಟಿಯುಸಿ ಸೇರಿದಂತೆ 10ಕ್ಕೂ ಸಂಘಗಳು ಮುಷ್ಕರಕ್ಕೆ ಕರೆ ನೀಡಿವೆ.
ಬೆಂಗಳೂರಿನಲ್ಲೂ ಆಟೋ, ಟ್ಯಾಕ್ಸಿ ಹಾಗೂ ಸಾರಿಗೆ ಚಾಲಕರು ಮುಷ್ಕರಕ್ಕೆ ಬೆಂಬಲ ನೀಡಿದ್ಧಾರೆ. ಆದರೆ ಆಟೋ ಸಂಚಾರ ಯಥಾಸ್ಥಿತಿಯಲ್ಲಿರಲಿದೆ ಅಂತ ಆಟೋ ಅಸೋಸಿಯೇಷನ್ ಹೇಳಿದೆ. ಇದನ್ನೂ ಓದಿ: ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್
ಬೆಳಗ್ಗೆ 10 ಗಂಟೆಗೆ ಟೌನ್ ಹಾಲ್ ಬಳಿ ನಡೆಯಲಿರೋ ಪ್ರತಿಭಟನೆಯಲ್ಲಿ ಆಟೋ ಚಾಲಕರು ಭಾಗಿಯಾಗಲಿದ್ದಾರೆ. ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನು ಸುಗ್ರಿವಾಜ್ಞೆ ಮೂಲಕ ನಿಷೇಧಿಸಬೇಕು. ಮೋಟಾರ್ ವಾಹನ ತಿದ್ದುಪಡಿ ಕಾಯ್ದೆ -2019ನ್ನು ವಾಪಸ್ ಪಡೆಯಬೇಕು. ಹಿಟ್ ಆಂಡ್ ರನ್ ಕೇಸ್ ವಾಪಸ್ ಪಡೆಯಬೇಕು. ಬೇಡಿಕೆ ಸೇರಿದಂತೆ, ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಭಾರತ್ ಬಂದ್ಗೆ ಬೆಂಬಲ ಕೊಡಲಾಗಿದೆ. ಇದನ್ನೂ ಓದಿ: ಕೊಲೆ ಕೇಸ್; ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರವರೆಗೆ ನ್ಯಾಯಾಂಗ ಬಂಧನ

