ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಯನ್ನು (Karnataka Election) ಬಿಜೆಪಿ (BJP) ಹೈಕಮಾಂಡ್ ಸವಾಲಾಗಿ ಸ್ವೀಕರಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ದೊಡ್ಡ ಜಿಲ್ಲೆಗಳ ಬಿಜೆಪಿ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಮ್ಯಾಜಿಕ್ ಮಾಡಲು ಫೆ.27ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಳಗಾವಿಗೆ (Belagavi) ಭೇಟಿ ನೀಡಲಿದ್ದಾರೆ.
ಶಿವಮೊಗ್ಗ (Shivamogga) ಕಾರ್ಯಕ್ರಮ ಮುಗಿಸಿ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಮಧ್ಯಾಹ್ನ 2.15ರಿಂದ 3.30ರವರೆಗೆ ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ. ಸಾವಗಾವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನ ಭದ್ರತಾ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ ಬಳಿಕ ಸಮಾವೇಶದ ಸ್ಥಳ ನಿಗದಿ ಆಗಲಿದೆ.
ಅಂದು ಬೆಳಗಾವಿ ರೈಲು ನಿಲ್ದಾಣ ಉದ್ಘಾಟಿಸಲಿರುವ ಮೋದಿ ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣ ಬಿಡುಗಡೆಗೂ ಚಾಲನೆ ನೀಡಲಿದ್ದಾರೆ. ಜತೆಗೆ ಬೆಳಗಾವಿಯಲ್ಲಿ 18 ಕ್ಷೇತ್ರಗಳಿಂದ 2 ಲಕ್ಷಕ್ಕೂ ಹೆಚ್ಚು ಜನ ಸೇರಿಸಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಈಗಿನಿಂದಲೇ ತಯಾರಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರೋಹಿಣಿ ಬಗ್ಗೆ ಮಾತನಾಡೋದಕ್ಕೆ ರೂಪಾ ಯಾರು?: ಸುಧೀರ್ ರೆಡ್ಡಿ ಆಕ್ರೋಶ
ಈ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ್ ಸುರಾನಾ ಮಾತನಾಡಿ, ಬೆಳಗಾವಿ ಜಿಲ್ಲೆಯ ಮೂರು ಸಂಘಟನಾತ್ಮಕ ಜಿಲ್ಲೆಗಳಿಂದ ತಯಾರಿ ಮಾಡಿಕೊಳ್ಳಲಾಗಿದೆ. ಸಮಾವೇಶ ನಡೆಸುವ ಸ್ಥಳದ ಬಗ್ಗೆ ಸರ್ಕಾರದಿಂದ ಪರಿಶೀಲನೆ ನಡೆಸಲಾಗುತ್ತಿದೆ ಎಂದರು. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತ – ಅರ್ಧದಷ್ಟು ತಂತಿಗಳಿಗೆ ತುಕ್ಕು ಹಿಡಿದಿದ್ದೇ ಕಾರಣ: ತನಿಖಾ ವರದಿ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k