ಬೆಂಗಳೂರು: ಬಿ.ಫಾರ್ಮಾ ಕೋರ್ಸ್ (B Pharma Course) ಪ್ರವೇಶ ಸಂದರ್ಭದಲ್ಲಿ 8 ವಿದ್ಯಾರ್ಥಿಗಳಿಂದ ನಿಗದಿಗಿಂತ ಹೆಚ್ಚಾಗಿ 5.40 ಲಕ್ಷ ರೂ. ಶುಲ್ಕ ಕಟ್ಟಿಸಿಕೊಂಡಿದ್ದ ನಗರದ ಆಚಾರ್ಯ ಮತ್ತು ಬಿ.ಎಂ ರೆಡ್ಡಿ ಫಾರ್ಮಸಿ ಕಾಲೇಜಿನಿಂದ ಅಷ್ಟೂ ಹಣವನ್ನು ಶುಲ್ಕ ನಿಯಂತ್ರಣ ಸಮಿತಿ (Fee Control Committee) ವಾಪಸ್ ಕೊಡಿಸಿದೆ.
Advertisement
ಹೆಚ್ಚುವರಿ ಶುಲ್ಕ ಕಟ್ಟಿಸಿಕೊಂಡಿದ್ದ ಸಂಬಂಧ 8 ವಿದ್ಯಾರ್ಥಿಗಳು ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.ಶ್ರೀನಿವಾಸಗೌಡ ಅವರ ನೇತೃತ್ವದ ಸಮಿತಿಗೆ ದೂರು ಕೊಟ್ಟಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳನ್ನು ಕರೆಸಿ, ವಿಚಾರಣೆ ನಡೆಸಿದ ನಂತರ ಹೆಚ್ಚುವರಿ ಶುಲ್ಕ ವಾಪಸ್ ಮಾಡಲು ಆದೇಶಿಸಿದ್ದು, ಆ ಪ್ರಕಾರ ಡಿಡಿ ರೂಪದಲ್ಲಿ ಹಣ ಹಿಂದಿರುಗಿಸಲಾಗಿದೆ ಎಂದು ಶ್ರೀನಿವಾಸಗೌಡ ತಿಳಿಸಿದ್ದಾರೆ.
Advertisement
8 ಲಕ್ಷ ವಾಪಸ್:
ಮಂಗಳೂರಿನ ಜಿ.ಆರ್ ವೈದ್ಯಕೀಯ ಕಾಲೇಜು, ವಿದ್ಯಾರ್ಥಿಗಳಾದ ಪೂಜಿತಾ ಜೆ.ಅಂಗಡಿ ಹಾಗೂ ತುಷಾರ್ ಬಿ.ಭಾಸ್ಮೆ ಅವರಿಗೆ ನೀಡಬೇಕಿದ್ದ ಕ್ರಮವಾಗಿ 7 ಲಕ್ಷ ರೂ. ಮತ್ತು 1 ಲಕ್ಷ ರೂಪಾಯಿ ಶುಲ್ಕ ವಾಪಸ್ ಕೊಡಿಸುವ ಕೆಲಸವನ್ನೂ ಸಮಿತಿ ಮಾಡಿದೆ. ಇದನ್ನೂ ಓದಿ: ಕೆಲಸ ಮಾಡದ ಮೋದಿಯನ್ನು ಕೆಳಗಿಳಿಸಿ, ಗಡ್ಕರಿಯನ್ನು ಪ್ರಧಾನಿ ಮಾಡಿ: ಸಂತೋಷ್ ಲಾಡ್
Advertisement
Advertisement
ಕಾಲೇಜಿನ ಮಾನ್ಯತೆ ರದ್ದಾದ ಸಂದರ್ಭದಲ್ಲಿ ಆ ಕಾಲೇಜಿನ ವಿದ್ಯಾರ್ಥಿಗಳನ್ನು ಅನ್ಯ ಕಾಲೇಜುಗಳಿಗೆ ವರ್ಗಾಯಿಸಲಾಗಿತ್ತು. ಆ ಸಂದರ್ಭದಲ್ಲಿ ಶುಲ್ಕ ವರ್ಗಾವಣೆ ಆಗಿರಲಿಲ್ಲ. ಈ ಸಂಬಂಧ ವಿದ್ಯಾರ್ಥಿಗಳು ಸಮಿತಿಗೆ ದೂರು ನೀಡಿದ್ದರು. ಇದನ್ನೂ ಓದಿ: ಐರಿಷ್-ಬ್ರಿಟಿಷ್ ಪ್ರವಾಸಿ ಯುವತಿಯ ರೇಪ್ & ಮರ್ಡರ್ ಕೇಸ್ – ಗೋವಾ ನಿವಾಸಿಗೆ ಜೀವಾವಧಿ ಶಿಕ್ಷೆ
ಅಲ್ಲದೇ ಎಂಬಿಎ ಕೋರ್ಸ್ ಪ್ರವೇಶ ಸಂಬಂಧ ಮೂವರು ವಿದ್ಯಾರ್ಥಿಗಳಿಂದ ಆಚಾರ್ಯ ಬೆಂಗಳೂರು ಬಿ-ಸ್ಕೂಲ್ ಸಂಗ್ರಹಿಸಿದ್ದ ಹೆಚ್ಚುವರಿ ಶುಲ್ಕವನ್ನೂ ಸಮಿತಿ ವಾಪಸ್ ಕೊಡಿಸಿದೆ. ಕೆಇಎ ನಿಗದಿಪಡಿಸಿದ ಶುಲ್ಕದ ಜೊತೆಗೆ 31 ಸಾವಿರ ರೂ. ಮಾತ್ರ ಕಟ್ಟಿಸಿಕೊಳ್ಳಲು ಸೂಚಿಸಲಾಗಿದೆ. ಇದಕ್ಕೆ ದೂರುದಾರ ವಿದ್ಯಾರ್ಥಿಗಳು ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್ನಿಂದಾಗಿ ಫರ್ನಿಚರ್ ಅಂಗಡಿ, ಗೋಡೌನ್ಗೆ ಬೆಂಕಿ – 1.50 ಕೋಟಿ ರೂ. ಮೌಲ್ಯದ ವಸ್ತುಗಳು ಭಸ್ಮ