Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಕೊಟ್ಟಿರೋ ಕೇಂದ್ರ ಮಂತ್ರಿ ಸ್ಥಾನ ಕರ್ನಾಟಕದ ಜನರಿಗೆ ಅರ್ಪಣೆ: ಹೆಚ್‌ಡಿಕೆ ಭಾವುಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನಗೆ ಕೊಟ್ಟಿರೋ ಕೇಂದ್ರ ಮಂತ್ರಿ ಸ್ಥಾನ ಕರ್ನಾಟಕದ ಜನರಿಗೆ ಅರ್ಪಣೆ: ಹೆಚ್‌ಡಿಕೆ ಭಾವುಕ

Bengaluru City

ನನಗೆ ಕೊಟ್ಟಿರೋ ಕೇಂದ್ರ ಮಂತ್ರಿ ಸ್ಥಾನ ಕರ್ನಾಟಕದ ಜನರಿಗೆ ಅರ್ಪಣೆ: ಹೆಚ್‌ಡಿಕೆ ಭಾವುಕ

Public TV
Last updated: June 14, 2024 4:30 pm
Public TV
Share
4 Min Read
HD Kumaraswamy 4
SHARE

– ಅಂದು ನಾನೂ ಕುತಂತ್ರಕ್ಕೆ ಬಲಿಯಾಗಿದ್ದೆ
– ಮೋದಿ ಮಾತು ಕೇಳಿದ್ದರೆ ನಾನೇ ಸಿಎಂ ಆಗಿರುತ್ತಿದ್ದೆ
– ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವರ ಮಾತು

ಬೆಂಗಳೂರು: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರಿಗಿಂದು ಅದ್ಧೂರಿ ಸ್ವಾಗತ ಕೋರಲಾಯಿತು. ಮಹಿಳಾ ಘಟದ ಕಾರ್ಯಕರ್ತರು ಆರತಿ ಬೆಳಗಿ ಸ್ವಾಗತ ಕೋರಿದರು. ಅಲ್ಲದೇ ಜೆಡಿಎಸ್ ವತಿಯಿಂದ ಇಲ್ಲಿನ ಜೆಪಿ ಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ (Felicitation Ceremony) ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕರ್ತರು ಪುಷ್ಪನಮನ ಸಲ್ಲಿಸಿ, ಕುಣಿದು ಕುಪ್ಪಳಿಸಿದರು.

HD Kumaraswamy 3

ಮಂತ್ರಿ ಸ್ಥಾನ ಕರ್ನಾಟಕದ ಜನರಿಗೆ ಅರ್ಪಣೆ: ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವ ಹೆಚ್‌ಡಿಕೆ, ಪಕ್ಷದ ಕಾರ್ಯಕರ್ತರ ದುಡಿಮೆಗೆ 2008 ರಿಂದ ಯಾವುದೇ ರೀತಿಯ ಪ್ರತಿಫಲ ಸಿಕ್ಕಿರಲಿಲ್ಲ. ಅಂತಹ ಸಮಯದಲ್ಲಿ ಪಕ್ಷವನ್ನ ಉಳಿಸಿದ ಬೆಳೆಸಿದ ಲಕ್ಷಾಂತರ ಕಾರ್ಯಕರ್ತರು ಈ ರಾಜ್ಯದಲ್ಲಿ ಇದ್ದೀರಿ. ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡ್ತೀನಿ. ಮೋದಿ (Narendra Modi) ಅವರು 2 ಬಾರಿ ಪ್ರಧಾನಿಯಾಗಿ ಉತ್ತಮವಾಗಿ ಕೆಲಸ ಮಾಡಿ, 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅವರ ಮಂತ್ರಿ ಮಂಡಲದಲ್ಲಿ ಕೇಂದ್ರದ ಮಂತ್ರಿ ಆಗಿದ್ದೇನೆ, ನನ್ನ ಪಾಲಿಗೆ ಬಂದಿರೋ ಈ ಮಂತ್ರಿ ಸ್ಥಾನವನ್ನ ಕರ್ನಾಟಕದ ಜನರಿಗೆ ಅರ್ಪಣೆ ಮಾಡ್ತೀನಿ ಎಂದು ಭಾವುಕರಾದರು.

HD Kumaraswamy 2

ಮೋದಿಗೆ ಧನ್ಯವಾದ: 2018ರ ದಿನವನ್ನ ನಾನು ನೆನಪು ಮಾಡಿಕೊಳ್ತೀನಿ. ಅವತ್ತು ಬಹುಮತ ಬಾರದೇ ಇದ್ದಾಗ ಕಾಂಗ್ರೆಸ್‌ನವರು ಬಂದರು. ಕಾಂಗ್ರೆಸ್‌ನ ದೆಹಲಿ ನಾಯಕರು ದೇವೇಗೌಡರ ಮನೆಗೆ ಬಂದು ಒತ್ತಾಯ ಹಾಕಿ ನನಗೆ ಬಲವಂತವಾಗಿ ಸಿಎಂ ಸ್ಥಾನ ಕೊಟ್ಟಿದ್ದರು. ಇವತ್ತು ನಾನು ದೆಹಲಿಯಿಂದ ಕನ್ನಡ ನಾಡಿನ ಮಣ್ಣಿಗೆ ಪಾದಾರ್ಪಣೆ ಮಾಡಿದ್ದೇನೆ. ಆವತ್ತು ನಾನು ಸಿಎಂ ಇದ್ದಾಗ ಇದೇ ಜಾಗದಲ್ಲಿ ಸನ್ಮಾನ ಮಾಡಿದ್ರಿ. ಅಂದು ಕಣ್ಣಲ್ಲಿ ನೀರು ಹಾಕಿದ್ದೆ. ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದಾಗ ನಮ್ಮನ್ನ ಯಾವ ರೀತಿ ನಡೆಸಿ ಕೊಂಡಿದ್ದರು ಅಂತ ಹೇಳಿದ್ದೆ. ವಿಷಕಂಠ ಆಗಿದ್ದೇ ಅಂತ ಹೇಳಿದ್ದೆ. ಆದರೆ ಇವತ್ತು ನಾನು ಅತ್ಯಂತ ಸಂತೋಷದಿಂದ ಯಾವುದೇ ಕಲ್ಮಷ ಇಟ್ಟುಕೊಳ್ಳದೇ ಪ್ರಾಮಾಣಿಕ ನನ್ನ ಮಾತು ಹೇಳ್ತಿದ್ದೇನೆ. ಮೊದಲಿಗೆ ಮೋದಿ ಅವರಿಗೆ ಕಾರ್ಯಕರ್ತ ಸಮ್ಮುಖದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದು ನುಡಿದರು.

ನಾನೂ ಕುತಂತ್ರಕ್ಕೆ ಬಲಿಯಾಗಿದ್ದೆ: ಕಾಂಗ್ರೆಸ್ ಜೊತೆ ರಾಜ್ಯದಲ್ಲಿ ಸರ್ಕಾರ ಮಾಡಿ ಏನ್ ಆಯ್ತು ಅಂತ ಜನರಿಗೆ ಗೊತ್ತಿದೆ. ಆವತ್ತು ಸಹ ಕಾಂಗ್ರೆಸ್ ನಮ್ಮ ಕಾರ್ಯಕರ್ತರಿಗೆ ಅಧಿಕಾರ ಕೊಡೋಕೆ ಬಿಡಲಿಲ್ಲ. ಹೀಗಾಗಿ ನಾನು ಶಾಸಕರ ಜೊತೆ ಸೇರಿ ಮುಂದೆ ಹೆಜ್ಜೆ ಇಟ್ಟಿದ್ವಿ. ಆದಾಗ ಬಳಿಕ ನಮ್ಮ ಮತ್ತು ಬಿಜೆಪಿ ಶಾಸಕರು ಸರ್ಕಾರ ಮಾಡೋಣ ಅಂತ ಹೋದ್ವಿ. ನಾನು ಆವತ್ತು ಎಂ.ಪಿ ಪ್ರಕಾಶ್ ಅವರಿಗೆ ನೀವೇ ಆಗಿ ಅಂತ ಹೇಳಿದ್ದೇ. ನಾನು ಯಡಿಯೂರಪ್ಪಗೆ ಅಧಿಕಾರ ಕೊಡಬೇಕು ಅಂತ ಇದ್ದವನು ನಾನು, ಆದ್ರೆ ಅವರಿಗೆ ಅಧಿಕಾರ ಕೊಡಬಾರದು ಅಂತ ಕುತಂತ್ರ ನಡೆಯಿತು. ನಾನೂ ಸಹ ಆ ಕುತಂತ್ರಕ್ಕೆ ಬಲಿಯಾದೆ. ನಾನು ಪಕ್ಷ ಉಳಿಸಿಕೊಳ್ಳೋಕೆ 20 ತಿಂಗಳು ಕೆಲಸ ಮಾಡಿದೆ. ಅಂದು ಸಹ ನಾನು ಹಣದ ವ್ಯಾಮೋಹ ಬಲಿಯಾಗಿಲ್ಲ. ಲಾಟರಿ ನಿಷೇಧ ಮಾಡಿದೆ, ಸಾರಾಯಿ ನಿಷೇಧ ಮಾಡಿದೆ. ಪಕ್ಷ ಕಟ್ಟಬೇಕು ಅಂತ ಗ್ರಾಮ ವಾಸ್ತವ್ಯ ಮಾಡಿದೆ. ಹಣ ಮಾಡೋಕೆ ಇಷ್ಟಪಡೆಯಲಿಲ್ಲ ಎಂದು ಭಾವುಕರಾದರು.

ಜೆಡಿಎಸ್‌ ನಾಶ ಮಾಡ್ತೀವಿ ಅಂದಿದ್ದರು: ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ತರೋಣ ಅಂತ ಪ್ರಯತ್ನ ಮಾಡಿದೆ, ನನ್ನ ಆರೋಗ್ಯ ಲೆಕ್ಕಿಸದೇ ಕೆಲಸ ಮಾಡಿದೆ. ನಾನು ಅದರಲ್ಲಿ ಯಶಸ್ವಿಯಾಗಲಿಲ್ಲ. ನಾನು ಹೋದ ಕಡೆ ಜನ ಸೇರುತ್ತಾರೆ. `ಪಂಚರತ್ನ’ ಯಾತ್ರೆಗೆ ಲಕ್ಷಾಂತರ ಜನ ಸೇರಿದ್ದರು. ವಿವಿಧ ಬಗೆಯ ಹಾರಗಳನ್ನ ಹಾಕಿದ್ರು, ಗಿನ್ನಿಸ್ ರೇಕಾರ್ಡ್ ಆಯ್ತು. ಇಷ್ಟೆಲ್ಲ ಶ್ರಮ ಹಾಕಿದರೂ 19 ಸೀಟ್‌ಗೆ ಇಳಿಯಿತು. ಜೆಡಿಎಸ್ ಮುಗಿದೇ ಹೋಯ್ತು. ಪಕ್ಷಕ್ಕೆ ಬನ್ನಿ ಅಂತ ಕಾಂಗ್ರೆಸ್ ಅವರು ಕರೆಯುತ್ತಿದ್ದರು, ಕ್ಷೇತ್ರದ ಕೆಲಸಕ್ಕೆ ಹೋದ್ರೆ ಹಣ ಕೊಡ್ತೀವಿ ಪಕ್ಷಕ್ಕೆ ಬನ್ನಿ ಅಂತ ಹಣ ಕೋಡೋಕೆ ಬಂದಿದ್ದರು. ಜೆಡಿಎಸ್ ನಾಶ ಮಾಡ್ತೀವಿ ಅಂತ ಹೋದ್ರು. ಇವತ್ತು ಎಲ್ಲಿಗೆ ಬಂದು ನಿಂತಿದೆ? 2018ರಲ್ಲಿ ರಾಜ್ಯದ ವಿಷಯಗಳ ಬಗ್ಗೆ ಮೋದಿ ಅವರಿಗೆ ಮಾತಾಡೋಕೆ ಹೋಗಿದ್ದೆ, ಆಗ ನಿನ್ನ ಕೆಲಸಕ್ಕೆ ಬೆಲೆ ಇಲ್ಲ. ನೀನು ರಾಜೀನಾಮೆ ಕೊಟ್ಟು ಬಾ, ನೀನೇ ಸಿಎಂ ಆಗು ಅಂತ ಮೋದಿ ಹೇಳಿದ್ದರು. ಆವತ್ತು ಮೋದಿ ಮಾತು ಕೇಳಿದ್ದರೆ ಕಾರ್ಯಕರ್ತರು ಇಷ್ಟು ಕಷ್ಟ ಪಡುತ್ತಿರಲಿಲ್ಲ. ಆ ಅವಕಾಶ ನಾನೇ ಕಳೆದುಕೊಂಡೆ ಎಂದು ಕಹಿ ಸತ್ಯಗಳನ್ನು ಕಾರ್ಯಕರ್ತರ ಮುಂದೆ ಬಿಟ್ಟಿಟ್ಟರು.

ಈಗಲೂ ನಮ್ಮ ಜೊತೆಗೂಡಿ ಕೆಲಸ ಮಾಡು ಅಂತ ಮೋದಿ ಅವರು ಗೌರವ ಕೊಟ್ಟಿದ್ದಾರೆ. ಈ ಗೌರವ ಕಾರ್ಯಕರ್ತರಿಗೆ ಸೇರುತ್ತದೆ. ಇಲ್ಲದೇ ಹೋಗಿದ್ದರೆ ನಮ್ಮನ್ನ ಕೇಳೋರು ಯಾರು? ಕಾರ್ಯಕರ್ತರ ಪ್ರೀತಿಗೆ ಫಲ ಸಿಕ್ಕಿದೆ. ನಾವು ಗೆದ್ದಿರೋದು ಎರಡು ಸ್ಥಾನ. ಹಾಸನ ಜನರಿಗೆ ದೋಷ ಕೊಡೊಲ್ಲ, ಹಾಸನದ ಜನ ಕೊಟ್ಟಿರೋ ಶಕ್ತಿ ಕೊನೆ ಉಸಿರು ಇರೋ ವರೆಗೂ ಮರೆಯೊಲ್ಲ. ಕೆಲವು ರಾಜಕೀಯ ಆಯ್ತು. ಅದಕ್ಕೂ ಕಾಲ ಬರುತ್ತದೆ ಎಂದು ಹೇಳಿದರು.

ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವ ಜಿ.ಟಿ ದೇವೇಗೌಡ, ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಮೃದ್ಧಿ ಮಂಜುನಾಥ್, ಸಂಸದ ಮಲ್ಲೇಶ್ ಬಾಬು, ವೈಎಸ್‌ವಿ ದತ್ತಾ ಸೇರಿ ಶಾಸಕರು, ಮಾಜಿ ಶಾಸಕರು, ಪಕ್ಷದ ನಾಯಕರು ಭಾಗಿ ಪಾಲ್ಗೊಂಡಿದ್ದರು.

TAGGED:BJP-JDS Alliancecentral ministerhd kumaraswamyPM Modiಕರ್ನಾಟಕಕೇಂದ್ರ ಸಚಿವಜೆಡಿಎಸ್ ಬಿಜೆಪಿ ಮೈತ್ರಿನರೇಂದ್ರ ಮೋದಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

A young man drowned in Tunga River and died in Thirthahalli
Crime

ತೀರ್ಥಹಳ್ಳಿ | ತುಂಗಾ ನದಿಯಲ್ಲಿ ಮುಳುಗಿ ಯುವಕ ದುರ್ಮರಣ

Public TV
By Public TV
12 minutes ago
Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
1 hour ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
2 hours ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
2 hours ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
2 hours ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?