ರಾಯಚೂರು: ದೇವಾಲಯದ ಮಹಿಳಾ ಅರ್ಚಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಡೊಂಗರಾಂಪೂರ (Dongarampura) ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು 42 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಶಿರೂರು ಭೂ ಕುಸಿತ ದುರಂತ – ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ
- Advertisement
ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಒಂಟಿಯಾಗಿ ವಾಸಿಸುತ್ತಿದ್ದರು. ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
- Advertisement
ಸದ್ಯ ಯಾಪಲದಿನ್ನಿ (Yapaladinni) ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: 1 ವರ್ಷ ದೇವಿಯ ಆಶೀರ್ವಾದ ಸಿಗಲಿ ಎನ್ನುತ್ತಾ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ರಾ? – ಕುತೂಹಲ ಮೂಡಿಸಿದ ಸಿಎಂ ಮಾತು