ಕಸದ ಮುಸುರಿ ಚೆಲ್ಲುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Public TV
1 Min Read
BGK MURDER COLLAGE

ಬಾಗಲಕೋಟೆ: ಕಸದ ಮುಸುರಿ ಚೆಲ್ಲುವ ವಿಷಯಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಕಟಗಿನ ಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಡವಾಗಿ ಬೆಳಕಿಗೆ ಬಂದ ಈ ಘಟನೆಯಲ್ಲಿ ಮೂಶೆಪ್ಪ ವಿಗ್ನೇಶಪ್ಪ ಗೌಡರ (60) ಮೃತಪಟ್ಟಿದ್ದಾರೆ. ಕಳೆದ ಶುಕ್ರವಾರ ರಾತ್ರಿ ಮೃತ ಮೂಶೆಪ್ಪ ಅದೇ ಗ್ರಾಮದ ಧಾಮಸಪ್ಪ ಗೌಡ ಹಾಗೂ ಚವರಪ್ಪ ಗೌಡ ನಡುವೆ ಕಸದ ಮುಸುರಿ ಚೆಲ್ಲುವ ವಿಚಾರದಲ್ಲಿ ಜಗಳವಾಗಿದೆ.

BGK MURDER 3

ಜಗಳ ಕೈ ಕೈ ಮಿಲಾಯಿಸುವ ಹಂತ ತಲುಪಿ, ವಿಕೋಪಕ್ಕೆ ತಿರುಗಿದ ಪರಿಣಾಮ ಗಲಾಟೆಯಲ್ಲಿ ಮೂಶೆಪ್ಪ ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನ ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಅವರು ಮೃತಪಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಮಸಪ್ಪ ಹಾಗೂ ಚವರಪ್ಪ ಎಂಬವರನ್ನು ಬಂಧಿಸಿ, ತನಿಖೆಗೆ ಒಳಪಡಿಸಲಾಗಿದೆ ಎಂದು ಸ್ಥಳೀಯ ಠಾಣೆಯ ಪಿಎಸ್‍ಐ ಬಸವರಾಜ ಲಮಾಣಿ ತಿಳಿಸಿದ್ದಾರೆ.

BGK MURDER 2

BGK MURDER 1

Share This Article
Leave a Comment

Leave a Reply

Your email address will not be published. Required fields are marked *