ನಟಿ ರಾಗಿಣಿಗಾಗಿ ಪ್ರೇಮಿಗಳಿಬ್ಬರ ಕಿತ್ತಾಟ

Public TV
1 Min Read
Ragini Dwivedi copy

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗಾಗಿ ಅವರ ಇಬ್ಬರು ಬಾಯ್ ಫ್ರೆಂಡ್ಸ್ ಕಿತ್ತಾಡಿಕೊಂಡಿರುವ ಘಟನೆ ನಗರದ ಖಾಗಿಸಿ ಹೋಟೆಲ್ ನಲ್ಲಿ ನಡೆದಿದ್ದು, ನಟಿಯ ಮುಂದೆಯೇ ಇಬ್ಬರು ಗೆಳೆಯರು ಬಾಟಲಿಯಿಂದ ಬಡಿದಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ರಾಗಿಣಿ ಅವರ ಮಾಜಿ ಗೆಳೆಯ ಗಣಿ ಉದ್ಯಮಿ, ಶಿವಪ್ರಕಾಶ್ ಚಿಪ್ಪಿ ಹಾಗೂ ಆರ್ ಟಿಒ ಅಧಿಕಾರಿ ರವಿ ನಡುವೆ ಗಲಾಟೆ ನಡೆದಿದೆ. ನಿನ್ನೆ ರಾತ್ರಿ ರಿಟ್ಜ್ ಕಾರ್ಲ್ ಟನ್ ಹೋಟೆಲ್ ನಲ್ಲಿ ಶಿವಪ್ರಕಾಶ್ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ನಟಿ ತಮ್ಮ ಗೆಳೆಯ ರವಿರೊಂದಿಗೆ ಹೋಟೆಲ್ ತೆರಳಿದ್ದು, ಇದನ್ನು ಕಂಡ ಶಿವಪ್ರಕಾಶ್, ರವಿರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ. ಅಲ್ಲದೇ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ. ಇಬ್ಬರ ನಡುವೆ ಜಗಳ ಆರಂಭವಾಗಿ ಬಿಯರ್ ಬಾಟೆಲ್‍ನಿಂದ ಬಡಿದಾಡಿಕೊಂಡಿದ್ದಾರೆ.

ASHOK NAGAR POLICE STATION

ಅಂದಹಾಗೇ ಉದ್ಯಮಿ ಶಿವಪ್ರಕಾಶ್ ನನ್ನ ಮೊದಲು ನಟಿ ರಾಗಿಣಿ ದ್ವಿವೇದಿ ಪ್ರೀತಿಸುತ್ತಿದ್ದರು. ಆದರೆ ಆ ಬಳಿಕ ರವಿ ಅವರೊಂದಿಗೆ ಒಡನಾಟ ಹೆಚ್ಚಿತ್ತು. ನಿನ್ನೆ ರಾತ್ರಿ ನಡೆದ ಗಲಾಟೆ ಬಳಿಕ ಶಿವಪ್ರಕಾಶ್, ರಾಗಿಣಿ ಅವರ ಬಳಿ ಇದ್ದ ಮರ್ಸಿಡೀಸ್ ಬೆಂಜ್ ಕಾರು ಕಿತ್ತುಕೊಂಡಿದ್ದಾರೆ. ಕೋರಮಂಗಲ ಆರ್ ಟಿಒ ಕಚೇರಿಯಲ್ಲಿ ಆಫೀಸರ್ ಆಗಿ ರವಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಗಿಣಿ ಅವರ ಬಳಿ ಇದ್ದ ಕಾರನ್ನು ಶಿವಪ್ರಕಾಶ್ ಕೊಡಿಸಿದ್ದರು ಎನ್ನಲಾಗಿದ್ದು, ಅದ್ದರಿಂದಲೇ ಕಾರನ್ನು ಕಿತ್ತುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಗಲಾಟೆಯಲ್ಲಿ ಗಾಯಗೊಂಡಿದ್ದ ರವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಆ ಬಳಿಕ ಅಶೋಕನಗರ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಪರಿಸ್ಥಿತಿ ಚೇತರಿಸಿ ಕೊಂಡಿದ್ದು, ರವಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್‍ಐಆರ್ ದಾಖಲಿಸಿ ಶಿವಪ್ರಕಾಶ್ ರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

Ragini Dwivedi 1 copy

Share This Article
Leave a Comment

Leave a Reply

Your email address will not be published. Required fields are marked *