ಉಡುಪಿ: ಭಾರತ್ ಬಂದ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಹಿಂದೂಪರ ಸಂಘಟನೆ ಕಾರ್ಯಕರ್ತರ ನಡುವೆ ಜಟಾಪಟಿಯಾಗಿರುವ ಘಟನೆ ಜಿಲ್ಲೆಯ ಕಡಿಯಾಳಿಯಲ್ಲಿ ವರದಿಯಾಗಿದೆ.
ಭಾರತ್ ಬಂದ್ ಹಿನ್ನೆಲೆಯಲ್ಲಿ ಒತ್ತಾಯದ ಬಂದ್ ಮಾಡಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿಗೆ ಧಿಕ್ಕಾರ ಕೂಡಿ, ಅಂಗಡಿಗಳನ್ನು ಬಲವಂತವಾಗಿ ಬಂದ್ ಮಾಡಿಸುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಪ್ರಧಾನಿ ಮೋದಿಗೆ ಜೈಕಾರ ಕೂಗಿದರು. ಆಗ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ.
ಹಿಂದೂ ಕಾರ್ಯಕರ್ತೆಯೊಬ್ಬರ ನಡುವೆ ವಾಗ್ಯುದ್ಧ ಶುರುವಾಯ್ತು. ಪರಸ್ಪರ ತಳ್ಳಾಟ ಮಾಡಿಕೊಂಡ ಕಾರ್ಯಕರ್ತರನ್ನು ಬಿಡಿಸಲು ಪೊಲೀಸರು ಹರಸಾಹಸಪಟ್ಟರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಲಾಟೆ ಬಿಡಿಸುವಷ್ಟರಲ್ಲಿ ಹೈರಾಣಾಗಿ ಹೋದರು. ಎರಡು ಗುಂಪುಗಳ ಮನವೊಲಿಸುವಷ್ಟರಲ್ಲಿ ಖಾಕಿಧಾರಿಗಳು ಸುಸ್ತಾಗಿ ಹೋದರು.
ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಹಿಂದೂ ಕಾರ್ಯಕತೆ, ಧಮ್ಕಿ ಹಾಕಿ, ರೌಡೀಸಂ ಮಾಡಿ ಅಂಗಡಿ ಮುಚ್ಚಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾದಾಗ ನಾನು ಅಲ್ಲೇ ಇದ್ದೆ. ಇದು ಕಾನೂನು ಬಾಹಿರ ಮತ್ತು ಅನ್ಯಾಯದ ಚಟುವಟಿಕೆಯಾಗಿದೆ. ನಾವು ಮಾಡಿದ ಸ್ಥಳದಲ್ಲೇ ಖಂಡಿಸಿದ್ದೇನೆ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv