ವಿಜಯನಗರ (ಬಳ್ಳಾರಿ): ಬಿಜೆಪಿಯ ಮಾಜಿ ಶಾಸಕ ನೇಮಿರಾಜನಾಯ್ಕ್ ಮೇಲೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಾ ನಾಯಕ್ ಚಪ್ಪಲಿಯಿಂದ ಹಲ್ಲೆಗೆ ಯತ್ನಸಿದ್ದಾರೆ.
ನಿನ್ನೆ ನಡೆದ ಪುರಸಭೆಯ ಚುನಾವಣೆಯ ಮತದಾನದ ವೇಳೆ ಮತಕೇಂದ್ರದ ಒಳಗೆ ನೇಮಿರಾಜ್ ನಾಯಕ್, ಅವರು ಹೋಗಿದ್ದ ಕಾರಣ ಆರಂಭವಾದ ಜಗಳವು, ಇಬ್ಬರು ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿನ ಭರಾಟೆಯಲ್ಲಿ ಭೀಮಾ ನಾಯಕ್ ಕೈಯಲ್ಲಿ ಚಪ್ಪಲಿ ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ. ಹಾಲಿ ಶಾಸಕ ಕೈಯಲ್ಲಿ ಚಪ್ಪಲಿ ಹಿಡಿದು ಹಲ್ಲೆ ಮಾಡಲು ಮುಂದಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಇಂದು ವೈರಲ್ ಆಗಿದೆ. ಇದನ್ನೂ ಓದಿ: ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ: ಸುನಿಲ್ ಕುಮಾರ್
ಪುರಸಭೆ ಚುನಾವಣೆಯಲ್ಲಿ ಮತದಾನ ಕೇಂದ್ರದ ಮುಂದೆ ಪರಸ್ಪರ ಈ ವಾಗ್ವಾದ ನಡೆದಿದ್ದು, ನೇಮಿರಾಜ್ ನಾಯಕ್ ಹಾಗೂ ಅವರ ಬೆಂಬಲಿಗರ ಮೇಲೆ ಹಾಲಿ ಶಾಸಕ ಹಲ್ಲೆ ಮಾಡಲು ಮುಂದಾಗಿದ್ದರು. ಈ ವಾಗ್ವಾದ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ತೇಜಸ್ವಿ ಸೂರ್ಯನ ಬುರುಡೇಲಿ ಮೆದುಳೇ ಇಲ್ಲ: ರಮ್ಯಾ