ತುಮಕೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಮೂಡಲಪಾಳ್ಯ ಗ್ರಾಮದಲ್ಲಿ ನಡೆದಿದೆ.
ಜಮೀನು ವಿವಾದದ ಹಿನ್ನೆಲೆಯಲ್ಲಿ ಮೂಡಲಪಾಳ್ಯ ಗ್ರಾಮದ ಚಿತ್ತಯ್ಯ ಎಂಬವರ ಮೇಲೆ ಅದೇ ಗ್ರಾಮದವರಾದ ಮಾಲಿಂಗಯ್ಯ, ದೇವಯ್ಯ, ಶಿವಣ್ಣ ಹಾಗೂ ಯರ್ರಣ್ಣ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಮನೆಯ ಮೇಲ್ಛಾವಣಿಯನ್ನು ಸಹ ಧ್ವಂಸ ಮಾಡಿದ್ದಾರೆ. ದಾಳಿ ವೇಳೆ ನಾಲ್ಕು ಮೇಕೆಗಳನ್ನು ಕೊಂದಿದ್ದಾರೆ ಎಂದು ಚಿತ್ತಯ್ಯ ಕುಟುಂಬದವರು ಆರೋಪಿಸಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಚಿತ್ತಯ್ಯ, ಬಸವರಾಜು ಸೇರಿದಂತೆ ಮೂವರು ಮಹಿಳೆಯರನ್ನು ಚೇಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಘಟನೆ ಸಂಬಂಧ ಚಿತ್ತಯ್ಯ ಕುಟುಂಬದವರು ಚೇಳೂರು ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸಿದ್ದಾರೆ.